ನಿಮ್ಮ ಮೇಲೆ ಪ್ರೀತಿ ಇದ್ದಷ್ಟೇ ಕೋಪವೂ ಇದೆ ಅಪ್ಪಾಜಿ- ಸುದೀಪ್

Public TV
2 Min Read
sudeep vishnuvardhan

– ಸ್ಯಾಂಡಲ್‍ವುಡ್ ನಟರಿಂದ ವಿಷ್ಣುದಾದನಿಗೆ ವಿಶ್

ಬೆಂಗಳೂರು: ಇಂದು ಚಂದನವನದ ವಿಷ್ಣುವರ್ಧನ್, ಉಪೇಂದ್ರ ಹಾಗೂ ನಟಿ ಶೃತಿ ಅವರ ಹುಟ್ಟುಹಬ್ಬವಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಇತ್ತ ಕಿಚ್ಚ ಸುದೀಪ್ ಅವರು ಸಾಹಸ ಸಿಂಹ ವಿಷ್ಣುವರ್ಧನ್ ಅವರ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಸುದೀಪ್ ಅವರು ತಮ್ಮ ಟ್ವಿಟ್ಟರಿನಲ್ಲಿ ವಿಷ್ಣುವರ್ಧನ್ ಅವರ ಫೋಟೋವನ್ನು ಹಾಕಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಲ್ಲದೆ “ಹುಟ್ಟು ಹಬ್ಬದ ಶುಭಾಶಯ ಅಪ್ಪಾಜಿ. ನಿಮ್ಮ ಮೇಲೆ ಪ್ರೀತಿ ಎಷ್ಟು ಇದೆಯೋ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ಕೋಪವೂ ಅಷ್ಟೇ ಇದೆ. ಅನಾಥರಾಗಿದ್ದೀವಿ. ಬಹಳ ಬೇಗ ಹೋಗಿಬಿಟ್ರಿ. ನಿಮಗೆ ನಮ್ಮೆಲ್ಲರ ಅಗತ್ಯ ಎಷ್ಟಿತ್ತೋ ನನಗೆ ಗೊತ್ತಿಲ್ಲ, ಆದರೆ ನಿಮ್ಮ ಅಗತ್ಯ ನಮಗಿತ್ತು. ನಿಮ್ಮನ್ನು ನೆನೆಯುವ, ಪ್ರೀತಿಸುವ, ಅಭಿಮಾನಿಯಲ್ಲೊಬ್ಬ ಕಿಚ್ಚ” ಎಂದು ಬರೆದುಕೊಂಡಿದ್ದಾರೆ.

ಕಿಚ್ಚ ಸುದೀಪ್ ಅಲ್ಲದೆ ನವರಸನಾಯಕ ಜಗ್ಗೇಶ್ ಅವರು, “ನೆನಪಿದೆ ಆ ದಿನ. ನನ್ನ ಹರಸಿದ ನಿಮ್ಮ ಮನ. ದೇಹ ತ್ಯಾಗ ನಶ್ವರ ಜಗದ ಸಹಜ ಕ್ರಿಯೆ. ಆದರೆ ಸವಿ ನೆನಪು ಬಿಟ್ಟು ಹೋಗುವುದು ಆತ್ಮೀಯ ಹೃದಯ ಮಾತ್ರ. ನಾ ಕಂಡ ಕೆಲ ಆತ್ಮೀಯ ಹೃದಯಗಳಲ್ಲಿ ನೀವೂ ಒಬ್ಬರು. ನಿಮ್ಮ ಕಾಲದಲ್ಲಿ ನಾನು ಇದ್ದೆ ಎಂಬ ಹೆಮ್ಮೆಯಿದೆ. ಹುಟ್ಟುಹಬ್ಬದ ಶುಭಾಶಯಗಳು ವಿಷ್ಣು ಸಾರ್” ಎಂದು ಟ್ವೀಟ್ ಮಾಡಿದ್ದಾರೆ.

ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ತಮ್ಮ ಟ್ವಿಟ್ಟರಿನಲ್ಲಿ ವಿಷ್ಣುವರ್ಧನ್ ಅವರ ಜೊತೆಯಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ಸಾಹಸಸಿಂಹ ಡಾ. ವಿಷ್ಣುವರ್ಧನ್ ಜನ್ಮದಿನದ ಸವಿ ನೆನಪು, ದಾದಾ ನಿಮ್ಮ ನೆನಪು ಸದಾ ಹಸಿರು” ಎಂದು ಟ್ವೀಟ್ ಮಾಡಿದ್ದಾರೆ. ನಟ ರಮೇಶ್ ಅರವಿಂದ್ ಅವರು ಕೂಡ ಟ್ವಿಟ್ಟರಿನಲ್ಲಿ ವಿಷ್ಣುವರ್ಧನ್ ಅವರ ಜೊತೆಯಿರುವ ಫೋಟೋ ಹಾಕಿ ಅದಕ್ಕೆ, ನೂರೊಂದು ನೆನಪು ಎದೆಯಾಳದಿಂದ ಎಂದು ಬರೆದು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಇಂದು ಅಭಿಮಾನಿಗಳ ಆರಾಧ್ಯ ದೈವ ಸಾಹಸಸಿಂಹ ವಿಷ್ಣುವರ್ಧನ್ ಅವರ 69ನೇ ಜಯಂತೋತ್ಸವ. ಹೀಗಾಗಿ ಅಭಿಮಾನಿಗಳು ವಿಷ್ಣುವರ್ಧನ್ ನಿವಾಸದಲ್ಲಿ ಮತ್ತು ಅಭಿಮಾನ್ ಸ್ಟುಡಿಯೋ 2 ಕಡೆ ಹುಟ್ಟುಹಬ್ಬವನ್ನ ಆಚರಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *