ನಿರ್ಮಾಪಕರ ವಿರುದ್ಧ ನಟ ಸುದೀಪ್ (Sudeep) ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್ ಜುಲೈ 18ಕ್ಕೆ ಮುಂದೂಡಿಕೆಯಾಗಿದೆ.
2023ರಲ್ಲಿ ನಿರ್ಮಾಪಕರಾದ ಎಂ.ಎನ್ ಕುಮಾರ್, ಸುರೇಶ್ ಸಿನಿಮಾದ ಕಾಲ್ಶೀಟ್ ಕೊಡೋದಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ಹೀಗಾಗಿ, ಇಬ್ಬರು ನಿರ್ಮಾಪಕರ ವಿರುದ್ಧ ಸುದೀಪ್ ನ್ಯಾಯಾಲಯದಲ್ಲಿ ಮಾನನಷ್ಟು ಮೊಕದ್ದಮೆ ಹೂಡಿದ್ದರು.
ಇಂದು ಪ್ರಕರಣದ ಕ್ರಾಸ್ ಎಕ್ಸಾಮಿನೇಷನ್ ಇದ್ದ ಹಿನ್ನೆಲೆಯಲ್ಲಿ ನಟ ಸುದೀಪ್ 7ನೇ ಎಸಿಜೆಎಂ ಕೋರ್ಟ್ಗೆ ಹಾಜರಾಗಬೇಕಿತ್ತು. ಆದರೆ, ಕೆಲಸದ ನಿಮಿತ್ತ ಸುದೀಪ್ ಪರ ವಕೀಲರು ಇಂದಿನ ವಿಚಾರಣೆಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್, ಜುಲೈ 18ಕ್ಕೆ ವಿಚಾರಣೆ ಮುಂದೂಡಿತು.
