ಕನ್ನಡದ ಖ್ಯಾತ ನಟ ಸುದೀಪ್ (Sudeep) ಅಭಿಮಾನಿಗಳು (Fans) ವಾಲ್ಮೀಕಿ (Valmiki) ಜಾತ್ರೆಯಲ್ಲಿ (Jatre) ಮಾಡಿದ ಗಲಾಟೆಗೆ ಸಂಬಂಧಿಸಿದಂತೆ ಸುರಪುರ ಶಾಸಕ ರಾಜುಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಗೂ ಸುದೀಪ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಅವರು, ಪದೇ ಪದೇ ಆಯೋಜಕರು ಸುದೀಪ್ ಅವರ ಹೆಸರನ್ನು ಹೇಳುತ್ತಿದ್ದರು. ಹಾಗಾಗಿ ಅಭಿಮಾನಿಗಳಿಗೆ ನಿರಾಸೆಯಾಗಿದೆ ಎಂದಿದ್ದಾರೆ. ಸುದೀಪ್ ಅವರಿಗೆ ಆಹ್ವಾನವಿದ್ದರೆ ಯಾವುದೇ ಕಾರಣಕ್ಕೂ ಅವರು ತಪ್ಪಿಸುತ್ತಿರಲಿಲ್ಲ ಎಂದು ನಟನ ಬೆನ್ನಿಗೆ ನಿಂತಿದ್ದಾರೆ.
ತಮ್ಮ ನೆಚ್ಚಿನ ನಟ ಸುದೀಪ್ ವಾಲ್ಮೀಕಿ ಜಾತ್ರೆಗೆ ಆಗಮಿಸಲಿಲ್ಲ ಎನ್ನುವ ಕಾರಣಕ್ಕಾಗಿ ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದ ವಾಲ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಬರುತ್ತಾರೆ ಎಂದು ಸುತ್ತಲಿನ ಅಭಿಮಾನಿಗಳು ಆಗಮಿಸಿದ್ದರು. ಬೆಳಗ್ಗೆಯಿಂದಲೇ ಸುದೀಪ್ ಫೋಟೋ ಹಿಡಿದುಕೊಂಡು ಜಯಘೋಷ ಮಾಡುತ್ತಿದ್ದರು. ಇದನ್ನೂ ಓದಿ: ಮಾಜಿ ಬಾಯ್ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್
ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸುದೀಪ್ ಬರಲಿದ್ದಾರೆ ಎಂದು ಸುದ್ದಿ ಆಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ಆಗಲೂ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗುತ್ತಿದ್ದರು. ವಾಲ್ಮೀಕಿ ಶ್ರೀಗಳು ಅಭಿಮಾನಿಗಳನ್ನು ಎಷ್ಟೇ ಸಮಾಧಾನಿಸಿದರು. ಪ್ರಯೋಜನಕ್ಕೆ ಬರಲಿಲ್ಲ. ಕೊನೆಯಲ್ಲಿ ಶ್ರೀಗಳು ತಾಳ್ಮೆ ಕಳೆದುಕೊಂಡು ಅಭಿಮಾನಿಗಳ ಮೇಲೆ ಕೋಪಿಸಿಕೊಂಡರು.
ಅಭಿಮಾನಿಗಳ ಕೂಗು ಹೆಚ್ಚಾದ ಕಾರಣದಿಂದಾಗಿ ಸಂಜೆ ಸುದೀಪ್ ಬರಲಿದ್ದಾರೆ ಎಂದು ಘೋಷಿಸಲಾಯಿತು. ಸಂಜೆಯಾದರೂ ಸುದೀಪ್ ಬಾರದೇ ಇರುವ ಕಾರಣಕ್ಕಾಗಿ ಆಕ್ರೋಶಗೊಂಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿ ಆಕ್ರೋಶ ಹೊರಹಾಕಿದರು. ಅಭಿಮಾನಿಗಳನ್ನು ಸಮಾಧಾನಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುದೀಪ್, ‘ನನಗೆ ಕಾರ್ಯಕ್ರಮಕ್ಕೆ ಯಾವುದೇ ಆಹ್ವಾನವಿರಲಿಲ್ಲ ಮತ್ತು ಕಾರ್ಯಕ್ರಮದ ಬಗ್ಗೆ ಗೊತ್ತೂ ಇರಲಿಲ್ಲ. ಹಾಗಾಗಿ ಬರುವದಕ್ಕೆ ಆಗಲಿಲ್ಲ. ಅಭಿಮಾನಿಗಳ ಈ ನಡೆ ಬೇಸರ ತರಿಸಿದೆ. ಒಪ್ಪಿಕೊಂಡ ಕಾರ್ಯಕ್ರಮವನ್ನು ನಾನು ಯಾವತ್ತೂ ತಪ್ಪಿಸಲಿಲ್ಲ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k