Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Districts

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಕಿಡ್ನ್ಯಾಪ್‌ ಕಥೆ ಕಟ್ಟಿದ್ಳು – ಬಾಲಕಿ ಮಾಸ್ಟರ್‌ಮೈಂಡ್‌ಗೆ ಪೊಲೀಸರೇ ಶಾಕ್‌

Public TV
Last updated: October 18, 2022 9:37 pm
Public TV
Share
2 Min Read
crim 1
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳೆ ದಾಂಡೇಲಿಯಲ್ಲಿ ಬೆಳ್ಳಂಬೆಳಗ್ಗೆ ಶಾಲೆಗೆ ಹೋದ ವಿದ್ಯಾರ್ಥಿನಿ ಕಾಣೆಯಾಗಿದ್ದು, ನಂತರ ಸಂಬಂಧಿಕರ ಮನೆಗೆ ಬಂದ ಬಾಲಕಿ ತನ್ನನ್ನು ಅಪಹರಣ ಮಾಡಿ ವ್ಯಾನಿನಲ್ಲಿ ಹೊತ್ತೊಯ್ದಿದ್ದರು. ನಾನು ತಪ್ಪಿಸಿಕೊಂಡು ಬಂದೆ ಎಂದು ಹೇಳುತ್ತಿದ್ದಂತೆ ಈ ಸುದ್ದಿ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೇ ನಗರ ಭಾಗದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಗುಸು-ಗುಸು ಹರಿದಾಡಿತ್ತು.

ನಂತರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ದಾಂಡೇಲಿ ಪೊಲೀಸರು ಕೊನೆಗೂ ಬೇಧಿಸುವಲ್ಲಿ ಯಶಸ್ವಿಯಾಗಿದ್ದು ಬಾಲಕಿ ಹೇಳಿದ ಕಥೆ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಇದನ್ನೂ ಓದಿ: ಮೋದಿ ಅತ್ಯಾಚಾರಿಗಳ ಪರವಾಗಿದ್ದಾರೆ – ರಾಹುಲ್ ಗಾಂಧಿ ಕಿಡಿ

POLICE JEEP

ಬಾಲಕಿ ಹೇಳಿದ್ದೇನು? ನಡೆದಿದ್ದು ಏನು?
ಪರೀಕ್ಷೆಗೆ ಭಯಪಟ್ಟ ವಿದ್ಯಾರ್ಥಿನಿಯೋರ್ವಳು ಅಪಹರಣದ ಕಥೆ ಹೆಣೆದು ಅದನ್ನು ಎಲ್ಲರಿಗೂ ನಂಬಿಸಿ ಬಿಟ್ಟಿದ್ದಾಳೆ. ಸೋಮವಾರದಿಂದ ದಸರಾ ರಜೆ ಮುಗಿದು ಸರ್ಕಾರಿ ಶಾಲೆಗಳು ಆರಂಭವಾಗಿವೆ. ಹಳೆದಾಂಡೇಲಿ ಭಾಗದ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ 12 ವರ್ಷದ ವಿದ್ಯಾರ್ಥಿನಿ ಶಾಲೆಗೆ ಹೋಗಲು ಮನಸ್ಸಿಲ್ಲದೆ, ಮುಂದೆ ನಡೆಯಲಿದ್ದ ಪರೀಕ್ಷೆಗೆ ಹೆದರಿ ಅಪಹರಣದ ಕಥೆಯನ್ನೇ ಕಟ್ಟಿ ಒಂದಿಷ್ಟು ಕಾಲ ಅವಾಂತರ ಸೃಷ್ಟಿಸಿದ್ದಾಳೆ.

crim

ಮನೆಯಿಂದ ಶಾಲಾ ಸಮವಸ್ತ್ರ ಧರಿಸಿ ಬಂದ ಈ ವಿದ್ಯಾರ್ಥಿನಿ ನೇರವಾಗಿ ಶಾಲೆಗೆ ಹೋಗದೇ ಕಿತ್ತೂರು ಚನ್ನಮ್ಮ ರಸ್ತೆಯವರೆಗೂ ಹೋಗಿ ಅಲ್ಲೇ ಪಕ್ಕದಲ್ಲೇ ಇರುವ ಮಿರಾಶಿ ಗಲ್ಲಿಯ ತನ್ನ ಅತ್ತೆಯ ಮನೆ ಸೇರಿಕೊಂಡಿದ್ದಾಳೆ. ಈ ಸಂದರ್ಭದಲ್ಲಿ ಆ ವಿದ್ಯಾರ್ಥಿನಿಯ ಅತ್ತೆಯ ಮನೆಯವರು ವಿಚಾರಿಸಿದಾಗ ತನ್ನನ್ನು ಮಾರುತಿ ವ್ಯಾನ್‍ನಲ್ಲಿ ಬಂದ ಯಾರೋ ಇಬ್ಬರು ಕಿಡ್ನ್ಯಾಪ್ ಮಾಡಿದ್ದರು. ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ವಾಹನವನ್ನು ನಿಲ್ಲಿಸಿದಾಗ ನಾನು ಅವರಿಂದ ತಪ್ಪಿಸಿಕೊಂಡು ಬಂದಿದ್ದೇನೆ ಎಂದು ಕಥೆಯನ್ನ ಕಟ್ಟಿದ್ದಾಳೆ.

ನಂತರ ಆ ವಿದ್ಯಾರ್ಥಿನಿಯ ಸಂಬಂಧಿಕರು ಈ ವಿಷಯವನ್ನು ಆಕೆಯ ಪಾಲಕರಿಗೆ ತಿಳಿಸಿದ್ದಾರೆ. ಪಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಲಕರು ಸಹ ತಮ್ಮ ಮಗಳ ಮಾತನ್ನು ನಂಬಿ ಅಪಹರಣಕಾರರು ಬಂದು ನಮ್ಮ ಮಗಳನ್ನು ಅಪಹರಿಸಿದ್ದಾರೆ ಎಂದು ಹೇಳಿದ್ದಾರೆ. ಅಪಹರಣದ ಈ ಸುದ್ದಿ ಕಾಡ್ಗಿಚ್ಚಿನಂತೆ ನಗರದ ತುಂಬಾ ದಾಂಡೇಲಿಯಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಹರಡಿದೆ. ಇದನ್ನೂ ಓದಿ: ನನ್ನನ್ನು ಪ್ಯಾಕೇಜ್ ಸ್ಟಾರ್ ಅನ್ನೋರಿಗೆ ಚಪ್ಪಲೀಲಿ ಹೊಡೀತೀನಿ: ಪವನ್ ಕಲ್ಯಾಣ್ ಆನ್ ಫೈಯರ್

ನಂತರ ಪೊಲೀಸರು ಕೂಡ ಘಟನೆಯ ಬಗ್ಗೆ ತಲೆಕೆಡಿಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ. ವಿದ್ಯಾರ್ಥಿನಿಯನ್ನು ಕರೆದುಕೊಂಡು ನೀನು ಯಾವ ದಾರಿಯಲ್ಲಿ ಹೋಗುತ್ತಿದ್ದೆ. ಎಲ್ಲಿಂದ ಕಿಡ್ನಾಪ್ ಮಾಡಿದರು ಎಂಬ ಮಾಹಿತಿಯನ್ನು ಪಡೆಯುತ್ತಾ ಹೋಗಿದ್ದಾರೆ. ಅಲ್ಲಿಯೂ ಆ ವಿದ್ಯಾರ್ಥಿನಿ ಅಪಹರಣವಾಯಿತೆಂಬುದನ್ನೇ ನಂಬಿಸುತ್ತಾ ಹೋಗಿದ್ದಾಳೆ.

ಸತ್ಯ ಗೊತ್ತಾಗಿದ್ದು ಹೇಗೆ?
ಆಕೆ ಹೋದ ಹಾಗೂ ನಿಂತ ಮತ್ತು ತಪ್ಪಿಸಿಕೊಂಡ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಆದರೆ ಯಾವ ಸಿಸಿ ಕ್ಯಾಮೆರಾಗಳಲ್ಲಿಯೂ ಕೂಡ ಆಕೆಯ ಚಲನವಲನಗಳಾಗಲಿ ಅಥವಾ ಮಾರುತಿ ವ್ಯಾನ್ ಆಗಲಿ ನಿಂತ ಬಗ್ಗೆ ಸುಳಿವು ಸಿಗಲಿಲ್ಲ. ಮತ್ತೆ, ಮತ್ತೆ ವಿದ್ಯಾರ್ಥಿನಿಯನ್ನು ಪ್ರಶ್ನಿಸಿದಾಗ ಆಕೆ ಅದೇ ಕತೆ ಹೇಳುತ್ತಿದ್ದಳು. ಹೀಗಾಗಿ ಪೊಲೀಸರಿಗೆ ಈ ಬಗ್ಗೆ ಅನುಮಾನ ವ್ಯಕ್ತವಾಗಿದೆ. ನಂತರ ಆಕೆಯನ್ನು ಪುಸಲಾಯಿಸಿ ಕೇಳಿದಾಗ ಆಕೆ ನಡೆದಿರುವ ಸತ್ಯವನ್ನು ಒಪ್ಪಿಕೊಂಡು ಶಾಲೆ ಆರಂಭವಾದ ದಿನ ಹಾಗೂ ಪರೀಕ್ಷೆಗೆ ಅಂಜಿ ತಾನು ಈ ರೀತಿ ಮಾಡಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾಳೆ. ಕೊನೆಗೂ ಈ ಅಪಹರಣದ ರಹಸ್ಯ ಹೊರಬಂದಿದ್ದು, ನಗರದಲ್ಲಿ ಹಬ್ಬಿದ್ದ ಮಕ್ಕಳ ಕಳ್ಳರ ವದಂತಿಗೆ ತೆರೆ ಬಿದ್ದಿದೆ.

Live Tv
[brid partner=56869869 player=32851 video=960834 autoplay=true]

TAGGED:karwarMaruti Vanpolicestudentthievesಕಳ್ಳರುಕಾರಾವಾರಪೊಲೀಸರುಮಾರುತಿ ವ್ಯಾನ್ವಿದ್ಯಾರ್ಥಿನಿ
Share This Article
Facebook Whatsapp Whatsapp Telegram

Cinema Updates

Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
3 hours ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
5 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
7 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
9 hours ago

You Might Also Like

Tumakuru Yodha
Crime

ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

Public TV
By Public TV
50 minutes ago
IPL 2025 2
Cricket

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

Public TV
By Public TV
1 hour ago
Madikeri Death
Crime

Madikeri | ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

Public TV
By Public TV
2 hours ago
Sachin Thendulkar
Cricket

ಆಪರೇಷನ್ ಸಿಂಧೂರ | ಪ್ರಧಾನಿ ಹಾಗೂ ರಕ್ಷಣಾ ತಂಡಗಳನ್ನು ಶ್ಲಾಘಿಸಿದ – ತೆಂಡೂಲ್ಕರ್

Public TV
By Public TV
2 hours ago
Pakistan Drone Attack
Latest

ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?