ಅಮರಾವತಿ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕುರಿ ಕಡಿಯುವ ಬದಲಾಗಿ ವ್ಯಕ್ತಿಯ ತಲೆಯನ್ನು ಕಡಿದಿರುವ ಘಟನೆ ನಡೆದಿದೆ.
ಟಿ. ಸುರೇಶ್ ಮೃತ ನಾಗಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಕೃತಕ್ಯಕ್ಕೆ ಈತ ಬಲಿಯಾಗಿದ್ದಾನೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಇದನ್ನೂ ಓದಿ: ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!
ಚಿತ್ತೂರಿನಲ್ಲಿ ನಡೆದ ಹಬ್ಬವೊಂದರ ಹಿನ್ನೆಲೆಯಲ್ಲಿ ಕುರಿಗಳನ್ನು ಬಲಿ ಕೊಡಲಾಗುತ್ತಿತ್ತು. ಬಲಿ ಕೊಡಲು ಸುರೇಶ್ ಕುರಿ ಹಿಡಿದುಕೊಂಡಿದ್ದನು. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕುರಿಯನ್ನು ಕಡಿಯುವ ಬದಲು ಕುರಿ ಹಿಡಿದುಕೊಂಡಿದ್ದ ವ್ಯಕ್ತಿಯ ತಲೆಯನ್ನೇ ಕಡಿದಿದ್ದಾನೆ. ಇದನ್ನೂ ಓದಿ: ರಾಯಚೂರು ಕೋರ್ಟ್ ಮುಂದೆ ಜನಜಂಗುಳಿ
ಸ್ಥಳದಲ್ಲೇ ಕುಸಿದು ಬಿದ್ದು ಸುರೇಶ್ ಮೃತ ಪಟ್ಟಿದ್ದಾನೆ. ಸ್ಥಳದಲ್ಲಿ ಸೇರಿದ್ದ ಜನರು ಬೆಚ್ಚಿಬಿದ್ದಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.