– ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡ ಹೆಸರಿನಲ್ಲಿ ಡೆತ್ ನೋಟ್
ಬೆಂಗಳೂರು: ಇಲ್ಲಿನ ಕುಮಾರ ಪಾರ್ಕ್ ರಸ್ತೆಯಲ್ಲಿರುವ ಕಿಯೋನಿಕ್ಸ್ (KEONICS) ಕಚೇರಿ ಎದುರು ಭಾರೀ ಹೈಡ್ರಾಮಾ ನಡೆದಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಷ ಕುಡಿಯುವ ಪ್ರತಿಭಟನೆಗೆ (KEONICS Protest) ಕರೆ ಕೊಟ್ಟಿದ್ದಾರೆ.
ಈಗಾಗಲೇ ಬಾಕಿ ಹಣ ಪಾವತಿ ಮಾಡುವಂತೆ ಒತ್ತಾಯಿಸಿ ಈ ಹಿಂದೆ ದಯಾಮರಣ ಕೋರಿದ್ದ ಕಿಯೋನಿಕ್ಸ್ ವೆಂಡರ್ಸ್ ಇದೀಗ ವಿಷ ಕುಡಿಯುವ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಹೆಸರಿನಲ್ಲಿ ಡೆತ್ ನೋಟ್ ಸಹ ಬರೆದುಕೊಂಡಿದ್ದರು.
Advertisement
Advertisement
ಕಚೇರಿಯ ಮುಂಭಾಗ ವೆಂಡರ್ಸ್ ಪ್ರತಿಭಟನೆ ಬೆನ್ನಲ್ಲೇ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಈ ವೇಳೆ ವೆಂಡರ್ಸ್ ಕಚೇರಿಗೆ ಬರುತ್ತಿದ್ದ ವ್ಯಕ್ತಿಯಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೇರೆ ಕಚೇರಿಗೆ ಹೋಗ್ತಾ ಇದ್ದೀನಿ ಅಂದ್ರೂ ಬಿಡದೇ ಸದಾಶಿವನಗರ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ. ಸದ್ಯ ಕಿಯೋನಿಕ್ಸ್ ವೆಂಡರ್ಸ್ ಡೆತ್ ನೋಟ್ ನಿಂದ ಸರ್ಕಾರ ಮತ್ತೆ ಮುಜುಗರಕ್ಕೆ ಒಳಗಾದಂತಿದೆ.
Advertisement
ಒಂದು ವಾರದ ಹಿಂದೆಯಷ್ಟೇ ಕಿಯೋನಿಕ್ಸ್ ವೆಂಡರ್ಸ್ಗಳಿಗೆ ಈಗಾಗಲೇ ಬಾಕಿ ಹಣ ಪಾವತಿ ಮಾಡ್ತಿದ್ದೇವೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಹೇಳಿದ್ದರು.
Advertisement
ಕಿಯೋನಿಕ್ಸ್ ವೆಂಡರ್ಸ್ಗಳಿಗೆ ಬಾಕಿ ಪಾವತಿ ವಿಚಾರ ಮತ್ತು ಕಿಯೋನಿಕ್ಸ್ ವೆಂಡರ್ಸ್ನಿಂದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿಯೋನಿಕ್ಸ್ ವೆಂಡರ್ಸ್ ಜೊತೆ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ನಾನು ಇಬ್ಬರು ಚರ್ಚೆ ಮಾಡಿದ್ದೇವೆ. ಎಲ್ಲರಿಗೂ ಪರಿಹಾರ ಕೊಡುವ ಕುರಿತು ಚರ್ಚೆಗಳನ್ನ ನಡೆಸಿದ್ದೇವೆ. ಕಳೆದ ಸರ್ಕಾರದಲ್ಲಿ ನಡೆದ ಹಗರಣಗಳನ್ನ ನಾವು ಹಗುರವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ವೆಂಡರ್ಸ್ಗಳಿಗೆ ಮತ್ತು ಸಣ್ಣ ಗುತ್ತಿಗೆದಾರಿಗೆ ತೊಂದರೆ ಕೊಡುವ ಉದ್ದೇಶ ನಮಗೆ ಇಲ್ಲ. ಆದರೆ ಸರ್ಕಾರದ ಖಜಾನೆಗೆ ಆಗಿರುವ ಖೋತಾ ಬಗ್ಗೆ ಸಮಗ್ರ ತನಿಖೆ ಆಗಬೇಕು. ಈ ತನಿಖೆಯನ್ನ ಗಂಭೀರವಾಗಿ ಮಾಡ್ತಿದ್ದೇವೆ ಎಂದು ಹೇಳಿದ್ದರು.