ಕನ್ನಡಿಗರ ಕ್ಷಮೆ ಕೇಳುವಂತೆ ಕಿರಣ್ ಮಜುಂದಾರ್ ಭಾವಚಿತ್ರಕ್ಕೆ ಪೊರಕೆ ಏಟು!

Public TV
1 Min Read
RMG PORAKE PROTEST

ರಾಮನಗರ: ಕನ್ನಡ ಹಾಗೂ ಕನ್ನಡ ಪರ ಹೋರಾಟಗಾರರ ಬಗ್ಗೆ ಲಘುವಾಗಿ ಮಾತನಾಡಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಹೇಳಿಕೆ ಖಂಡಿಸಿ ಚನ್ನಪಟ್ಟಣದಲ್ಲಿ ಇಂದು ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ನಗರದ ಚರ್ಚ್ ಸ್ಟ್ರೀಟ್‍ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಕಿರಣ್ ಮಜುಂದಾರ್ ಷಾ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಕಿರಣ್ ಮಜುಂದಾರ್ ವಿರುದ್ಧ ಧಿಕ್ಕಾರ ಕೂಗಿದರು. ಕನ್ನಡಿಗರ ವಿರುದ್ಧ ಮಾತನಾಡಿರುವ ಕಿರಣ್ ಮಜುಂದಾರ್ ಷಾ ಕೂಡಲೇ ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಅಲ್ಲದೇ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಿರಣ್ ಶಾ ಹೇಳಿಕೆ ಏನು?
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ-ಪ್ರವಚನ ನಡೆಸುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಅದರ ಅಧ್ಯಕ್ಷರು, ಕನ್ನಡಪರ ಹೋರಾಟಗಾರರು ಹಾಗೂ ಸಾಹಿತಿಗಳು ಕಿಡಿಗೇಡಿಗಳು ಎಂದು ಟೀಕೆ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *