ಹೈದರಾಬಾದ್: ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕಾಗಿ (Telangana Campaign) ಹಣ ಸಂಗ್ರಹಿಸಲು ಕರ್ನಾಟಕದ ಜನರಿಂದ ಹಣ ಲೂಟಿ ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಕರ್ನಾಟಕದ ಜನರ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂದು ತೆಲಂಗಾಣ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ (Kishan Reddy) ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹೈದರಾಬಾದ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಿಶನ್ ರೆಡ್ಡಿ, ʻʻಕೆಸಿಆರ್ ಕೋ ಹಟಾವೋ, ತೆಲಂಗಾಣ ಕೋ ಬಚಾವೋ, ಬಿಜೆಪಿ ಕೋ ಜಿತಾವೋʼʼ ಎಂದು ಘೋಷವಾಕ್ಯ ಮೊಳಗಿಸಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಂತಹ ಹಲವು ಹಿರಿಯ ನಾಯಕರು ತೆಲಂಗಾಣದಲ್ಲಿ ಕಾಂಗ್ರೆಸ್ (Congress) ಪರ ವ್ಯಾಪಕ ಚುನಾವಣಾ ಪ್ರಚಾರ ನಡೆಸಿದ ಬಳಿಕ ಈ ಆರೋಪಗಳು ಕೇಳಿಬಂದಿವೆ.
ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ 5 ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿತು. ಆದ್ರೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸುತ್ತಿಲ್ಲ. ಕರ್ನಾಟಕದಲ್ಲಿರುವ ಪ್ರತಿಯೊಂದು ವರ್ಗದ ಜನರೂ ಕೂಡ ಕಾಂಗ್ರೆಸ್ಗೆ ವಿರುದ್ಧವಾಗಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಆದೇಶದಂತೆ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದ್ದು, ತೆಲಂಗಾಣ, ಛತ್ತಿಸ್ಗಢ ಮತ್ತು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿ ತೆರಿಗೆ ಮೂಲಕ ಹಣ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಇಂಫಾಲ ವಿಮಾನ ನಿಲ್ದಾಣದ ಮೇಲೆ ಕಾಣಿಸಿಕೊಂಡ ಡ್ರೋನ್ – ಹುಡುಕಾಟಕ್ಕೆ ತೆರಳಿದ 2 ರಾಫೆಲ್ ಜೆಟ್
ನಾವು ಬಿಆರ್ಎಸ್ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸಮಿತಿ ನಿಯೋಜಿಸುತ್ತೇವೆ. ಕೆಸಿಆರ್ ಕುಟುಂಬ ಮತ್ತು ಬಿಆರ್ಎಸ್ ಶಾಸಕರು ಸೇರಿದಂತೆ ಯಾರನ್ನೂ ಈ ವಿಚಾರಣೆಯಿಂದ ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಜಾಮೀನು ಪಡೆದ ನಾಲ್ಕೇ ದಿನದಲ್ಲಿ ಮುರುಘಾ ಶ್ರೀ ಮತ್ತೆ ಅರೆಸ್ಟ್
ಅಲ್ಲದೇ ನಮ್ಮ ಪ್ರಣಾಳಿಕೆಯಲ್ಲಿ ನಾವು ಏನು ಹೇಳುತ್ತೇವೆಯೋ ಅದನ್ನೇ ಮಾಡುತ್ತೇವೆ, ಇದು ನಮ್ಮ ಟ್ರ್ಯಾಕ್ ರೆಕಾರ್ಡ್. ಲೋಕಸಭೆ ಚುನಾವಣೆಯಲ್ಲಿ ಬಹುಮತದ ಸರ್ಕಾರ ಸ್ಥಾಪನೆಯಾಗಿದ್ದರಿಂದ ಸಂವಿಧಾನದ 370ನೇ ವಿಧಿಯನ್ನು ತೆಗೆದುಹಾಕಿದ್ದೇವೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಗುರಿ ನಮ್ಮದು. ಆದ್ರೆ ಕಾಂಗ್ರೆಸ್ ಮತ್ತು ತೆಲಂಗಾಣದ ಬಿಆರ್ಎಸ್ ಭ್ರಷ್ಟಾಚಾರದಲ್ಲೇ ತೊಡಗಿದೆ. ಮರಳು ಮಾಫಿಯಾ, ಭೂಮಾಫಿಯಾ, ಗಣಿ ಮಾಫಿಯಾ, ಇತರ ಹಗರಣಗಳನ್ನು ಮಾಡುತ್ತಲೇ ಇದೆ. ಭ್ರಷ್ಟಾಚಾರವನ್ನು ಪೋಷಿಸಿ ತೆಲಂಗಾಣವನ್ನು ಲೂಟಿ ಮಾಡಿದೆ. ಇದರಿಂದ ಬೇಸತ್ತಿರುವ ಜನ ಮೋದಿ ಸರ್ಕಾರವೇ ಬೇಕೆಂದು ಬಯಸುತ್ತಿದ್ದಾರೆ.