ಪ್ರಧಾನಿ ಮೋದಿ ಔತಣಕೂಟಕ್ಕೆ ಕಿಚ್ಚನಿಗೂ ಆಹ್ವಾನವಿತ್ತು: ಜೊತೆಗೆ ಜ್ವರವೂ ಇತ್ತು

Public TV
1 Min Read
FotoJet 5 16

ಸ್ಯಾಂಡಲ್ ವುಡ್ ಹಲವು ಸಿಲೆಬ್ರಿಟಿ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಔತಣಕೂಟದಲ್ಲಿ ಭಾಗಿಯಾಗಿದ್ದರು. ನಟರಾದ ಯಶ್, ರಿಷಬ್ ಶೆಟ್ಟಿ, ನಿರ್ಮಾಪಕರಾದ ವಿಜಯ್ ಕಿರಗಂದೂರು ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್, ಕಾಮಿಡಿಯನ್ ಶ್ರದ್ಧಾ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಇವರಷ್ಟೇ ಭಾಗಿಯಾಗಿದ್ದು ಚರ್ಚೆಗೂ ಕಾರಣವಾಗಿತ್ತು.

FotoJet 1 28

ಕನ್ನಡ ಸಿನಿಮಾ ರಂಗದಲ್ಲಿ ಇನ್ನೂ ಸಾಧಕರು ಇರುವಾಗ ಅವರನ್ನು ಯಾಕೆ ಕಡೆಗಣಿಸಲಾಯಿತು ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಅದರಲ್ಲೂ ಶಿವರಾಜ್ ಕುಮಾರ್, ಸುದೀಪ್ ಸೇರಿದಂತೆ ಹಲವರನ್ನು ಮೋದಿ ಯಾಕೆ ಕರೆಯಲಿಲ್ಲ ಎನ್ನುವ ಚರ್ಚೆ ಜೋರಾಗಿತ್ತು. ಇದೀಗ ಸುದೀಪ್ ಅದಕ್ಕೆ ಪ್ರತಿಕ್ರಿಯೆ ಎನ್ನುವಂತೆ ಕೆಲ ಮಾತುಗಳನ್ನು ಆಡಿದ್ದಾರೆ. ಮೋದಿ ಅವರಿಂದ ತಮಗೂ ಆಹ್ವಾನವಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆಯ ಬಳಿಕ ಸಿಹಿ ಸುದ್ದಿ ನೀಡಿದ ಸಿದ್-ಕಿಯಾರಾ ಜೋಡಿ

FotoJet 3 20

ಪ್ರಧಾನಿ ನರೇಂದ್ರ ಮೋದಿ ಅವರು ತಮಗೂ ಆಹ್ವಾನ ನೀಡಿದ್ದರು. ಆದರೆ, ಜ್ವರದ ಕಾರಣದಿಂದಾಗಿ ನಾನು ಹೋಗಲಿಲ್ಲ. ಪ್ರಧಾನಿಯನ್ನು ಭೇಟಿ ಮಾಡಲು ಹಲವು ಪ್ರೊಟೊಕಾಲ್ ಇರುತ್ತವೆ. ಶೀತ ಮತ್ತು ಜ್ವರ ಇದ್ದ ಕಾರಣದಿಂದಾಗಿ ಅವರನ್ನು ಭೇಟಿ ಮಾಡಲಿಲ್ಲ. ಆರ್.ಟಿ.ಪಿ.ಸಿ.ಆರ್ ಮಾಡಿಸಬೇಕಿತ್ತು. ಜ್ವರ ಇದ್ದರಿಂದ ಭೇಟಿ ಸಾಧ್ಯವಾಗಲ್ಲ ಅನಿಸಿ ಹೋಗುವುದನ್ನು ಬಿಟ್ಟೆ ಎಂದು ಸುದೀಪ್ ಹೇಳಿಕೊಂಡಿದ್ದಾರೆ.

FotoJet 41

ಅಲ್ಲದೇ ಅವರು ಇದೀಗ ಕ್ರಿಕೆಟ್ ಪಂದ್ಯಾವಳಿಯಲ್ಲೂ ಬ್ಯುಸಿಯಾಗಿದ್ದಾರೆ. ದಿನವೂ ಪ್ರಾಕ್ಟಿಸ್ ಮ್ಯಾಚ್ ನಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ. ಇದೇ ತಿಂಗಳಲ್ಲೇ ಪಂದ್ಯಾವಳಿ ಕೂಡ ಇರುವುದರಿಂದ ಸುದೀಪ್, ಅದರಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *