Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

Latest

ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

Public TV
Last updated: October 23, 2025 12:29 pm
Public TV
Share
2 Min Read
Kittur Rani Chennamma Jayanti Celebration Parliament
SHARE

– ಚೆನ್ಮಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಸೋಮಣ್ಣ

ನವದೆಹಲಿ: ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ (Kittur Rani Chennamma) 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಸಂಸತ್ ಆವರಣದಲ್ಲಿ ಆಚರಿಸಲಾಯಿತು. ಸಂಸತ್ (Parliament) ಆವರಣದ ಪ್ರೇರಣಾ ಸ್ಥಳದಲ್ಲಿರುವ ಚೆನ್ನಮ್ಮ ಪ್ರತಿಮೆಗೆ ತುಮಕೂರು ಲೋಕಸಭಾ ಸದಸ್ಯ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ (V Somanna) ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸೋಮಣ್ಣ, ರಾಣಿ ಚೆನ್ನಮ್ಮನವರ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ 2007ರಲ್ಲಿ ಸ್ಥಾಪಿಸಲಾಗಿದೆ. ಕಳೆದ ವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಬಲ ಮತ್ತು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರ ಸಹಕಾರದಿಂದ 200ನೇ ರಾಣಿ ಚೆನ್ನಮ್ಮನವರ ವಿಜಯೋತ್ಸವ ಮತ್ತು ಜನ್ಮದಿನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗಿತ್ತು. ಅದೇ ರೀತಿ ಈ ವರ್ಷವೂ ಸಹ ರಾಣಿ ಚೆನ್ಮಮ್ಮನವರ 201ನೇ ವಿಜಯೋತ್ಸವ ಮತ್ತು ಜನ್ಮದಿನೋತ್ಸವ ಆಚರಣೆಯನ್ನು ಸಂಸತ್ತಿನ ಅವರಣದ ಪ್ರೇರಣಾ ಸ್ಥಳದಲ್ಲಿ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ

Kittur Rani Chennamm Jayanti Celebration Parliament

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕರ್ನಾಟಕದ ಸಂಸ್ಕೃತಿ, ಈ ದೇಶಕ್ಕೆ ಕೊಡುಗೆ ನೀಡಿದ ಕನ್ನಡದ ಮಹನೀಯರನ್ನು, ಸ್ವಾತಂತ್ರ‍್ಯ ಹೋರಾಟಗಾರರನ್ನು, ವೀರವನಿತೆಯರನ್ನು ನೆನಪಿಸುವ ಮತ್ತು ಅವರನ್ನು ಗೌರವಿಸುವ ಕೆಲಸ ಮಾಡುವಲ್ಲಿ ಸದಾ ಸನ್ನದ್ಧವಾಗಿದೆ. ಇದಕ್ಕೆ ಪೂರಕವಾಗಿಯೇ ನಾಳೆ ಸಿರಿಪೋರ್ಟ ಆಡಿಟೋರಿಯಂನಲ್ಲಿ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವೀರರಾಣಿ ಚೆನ್ಮಮ್ಮನವರ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ – ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

ಸ್ವಾತಂತ್ರ‍್ಯ ಹೋರಾಟಗಾರ್ತಿ ರಾಣಿ ಚೆನ್ನಮ್ಮನವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿಯಿಂದ ನಿರ್ವಹಿಸಬೇಕಾದ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲೆಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದಿರುವುದನ್ನು ಸಾರ್ವಜನಿಕರು ಮನಗಂಡಿದ್ದು, ಈ ಬಗ್ಗೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕಾಗಿದೆ. ಬೈಲಹೊಂಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿಯನ್ನು ಅಭಿವೃದ್ಧಿಗೊಳಿಸಿ, ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು. ವೀರ ರಾಣಿ ಚೆನ್ಮಮ್ಮನವರ ಜೀವನ ಮತ್ತು ಸಾಧನೆ ಕುರಿತು ಭಾರತೀಯ ಎಲ್ಲಾ ಭಾಷೆಗಳಲ್ಲೂ ಪುಸ್ತಕವನ್ನು ಹೊರತರಬೇಕೆಂದು ಮನವಿ ಮಾಡಿದೆ ಎಂದು ನುಡಿದರು. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ನದಿ ಪಾತ್ರದ ಜನರಿಗೆ ಅಲರ್ಟ್

ಈ ಸಂದರ್ಭದಲ್ಲಿ ಬೆಳಗಾವಿ ಸಂಸದರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯ ಸಭಾ ಸದಸ್ಯೆ ಡಾ. ಸುಧಾಮೂರ್ತಿಯವರು, ಜಯಮೃತ್ಯುಂಜಯ ಸ್ವಾಮಿಜೀ, ಶ್ರೀ ವಚನಾನಂದ ಸ್ವಾಮಿಗಳು, ಜನಪ್ರತಿನಿಧಿಗಳು, ದೆಹಲಿ ಕನ್ನಡ ಸಂಘದ ಅಧ್ಯಕ್ಷ ಸಿಎಂ ನಾಗರಾಜ್ ಹಾಗೂ ದೆಹಲಿ ಕನ್ನಡಿಗರು ಉಪಸ್ಥಿತರಿದ್ದರು. ಇದನ್ನೂ ಓದಿ: ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ: ಸತೀಶ್‌ ಜಾರಕಿಹೊಳಿ

TAGGED:Kittur Rani ChennammaNew DelhiparliamentV.Somannaಕಿತ್ತೂರು ರಾಣಿ ಚೆನ್ನಮ್ಮನವದೆಹಲಿವಿ.ಸೋಮಣ್ಣಸಂಸತ್
Share This Article
Facebook Whatsapp Whatsapp Telegram

Cinema news

Gilli Nata
ಗಿಲ್ಲಿ ಬೇಜವಾಬ್ದಾರಿ ಪರ್ಸನ್‌, ಪಕ್ಷಪಾತಿ – ಕ್ಯಾಪ್ಟನ್ಸಿ ಬಗ್ಗೆ ಕಿಚ್ಚನ ಮುಂದೆ ಮನೆ ಮಂದಿ ದೂರು!
Cinema Latest TV Shows
Sharan Yograj Bhat 2
ಯೋಗರಾಜ್ ಭಟ್ಟರ `ಅಮಲಿ’ಗೆ ದನಿಯಾದ ನಟ ಶರಣ್
Cinema Latest Sandalwood
Koragajja Movie 2
ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ – ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ದೈವ ನರ್ತಕರ ಆಕ್ರೋಶ
Cinema Districts Karnataka Kodagu Latest Sandalwood Top Stories
Toxic Tara Sutaria as REBECCA
ಟಾಕ್ಸಿಕ್ ಚಿತ್ರದ ರೆಬೆಕಾ ಪಾತ್ರದಲ್ಲಿ ತಾರಾ ಸುತಾರಿಯಾ
Cinema Latest Sandalwood Top Stories

You Might Also Like

evm counting
Bengaluru City

ಸರ್ಕಾರದ ವೆಬ್‌ಸೈಟ್‌ನಿಂದ EVM ವಿಶ್ವಾರ್ಹತೆ ಸಮೀಕ್ಷೆ ಡಿಲೀಟ್; ಬಿಜೆಪಿ ಟೀಕೆ

Public TV
By Public TV
4 hours ago
Nicolas Maduro 1
Latest

ಅಮೆರಿಕ ಯುದ್ಧ ನೌಕೆಯಲ್ಲಿ ವೆನೆಜುವೆಲಾ ಅಧ್ಯಕ್ಷ – ಮೊದಲ ಚಿತ್ರ ಬಿಡುಗಡೆ ಮಾಡಿದ ಟ್ರಂಪ್‌

Public TV
By Public TV
4 hours ago
Uttara Kannada
Districts

ಅಕ್ರಮ ಸಂಬಂಧ – ಮದ್ವೆಗೆ ಒಪ್ಪದಿದ್ದಕ್ಕೆ ರಂಜಿತಾಳ ಕುತ್ತಿಗೆ ಇರಿದು ಹತ್ಯೆ; ರಫೀಕ್ ಎಸ್ಕೇಪ್‌

Public TV
By Public TV
5 hours ago
Chitradurga Kyathappana Parishe Tribal Tradition
Chitradurga

ಬುಡಕಟ್ಟು ಸಂಪ್ರದಾಯದ ಕಾಡುಗೊಲ್ಲರ ಕ್ಯಾತಪ್ಪನ ಪರಿಷೆ – ಮುಳ್ಳಿನ ಗುಡಿಯಲ್ಲಿ ಆಚರಿಸುವ ವಿಶೇಷ ಜಾತ್ರೆ

Public TV
By Public TV
5 hours ago
Mausam Noor
Latest

ಬಂಗಾಳ ಚುನಾವಣೆಗೂ ಮುನ್ನವೇ ʻಕೈʼ ಹಿಡಿದ ಟಿಎಂಸಿ ರಾಜ್ಯಸಭಾ ಸಂಸದೆ ಮೌಸಮ್ ನೂರ್

Public TV
By Public TV
6 hours ago
Zameer Ahmed Khan
Bellary

Ballari Clash | ಮೃತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ನಗದು ಪರಿಹಾರ – ಮನೆ ಭರವಸೆ ಕೊಟ್ಟ ಜಮೀರ್

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?