ಬಾಲಿವುಡ್ ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ (ಕೆಕೆ) ಅವರ ಅಂತ್ಯ ಸಂಸ್ಕಾರವು ಹಿಂದೂ ಸಂಪ್ರದಾಯದಂತೆ, ಮುಂಬೈನಲ್ಲಿ ನಡೆಯಿತು. ಪುತ್ರ ನಕುಲ್ ಅವರು ಅಂತಿಮ ವಿಧಿ ವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಕೆಕೆ ಅವರ ಪತ್ನಿ ಜ್ಯೋತಿ, ಸ್ನೇಹಿತರು ಮತ್ತು ಅಪಾರ ಅಭಿಮಾನಿಗಳು ಹಾಜರಿದ್ದರು. ಇದನ್ನೂ ಓದಿ : ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್
ಬೆಳಿಗ್ಗೆಯಿಂದ ಮುಂಬೈ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಾಲಿವುಡ್ ನ ನಟ, ನಟಿಯರು, ತಂತ್ರಜ್ಞರು ಮತ್ತು ಗಾಯಕರು ಕೆಕೆ ಮನೆಗೆ ಆಗಮಿಸಿ, ಅಂತಿಮ ನಮನ ಸಲ್ಲಿಸಿದರು. ನಂತರ ಮುಂಬೈನ ಹಿಂದೂ ರುದ್ರಭೂಮಿಯಲ್ಲಿ ಕೆಕೆ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಕುಟುಂಬದ ಆಕ್ರಂದನ ಮುಗಿಲುಮುಟ್ಟಿತ್ತು. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ
ಬುಧವಾರ ಅವರ ಶವ ಪರೀಕ್ಷೆಯ ಮಾಹಿತಿಯು ಲಭ್ಯವಾಗಿದ್ದು, ಕೆಕೆ ಸಾವಿಗೆ ಹೃದಯಸ್ತಂಭನವೇ ಕಾರಣ ಎಂದು ವೈದ್ಯರು ಶರಾ ಬರೆದಿದ್ದಾರೆ. ಮಯೋಕಾರ್ಡಿಯಲ್ ಇನ್ ಫ್ರಾಕ್ಷನ್ ಕಾರಣವು ಕೆಕೆ ಅವರ ನಿಧನಕ್ಕೆ ಕಾರಣವೆಂದು ಹೇಳಲಾಗಿದೆ. ಜೊತೆಗೆ ಕೆಕೆ ಅವರ ದೇಹದಲ್ಲಿ ಸುದೀರ್ಘವಾದ ಹೃದಯ ಸಮಸ್ಯೆಗಳು ಕಂಡು ಬಂದಿವೆ ಎಂದು ವರದಿಯಲ್ಲಿ ಹೇಳಲಾಗಿದೆ.
ಮಂಗಳವಾರ ರಾತ್ರಿ ಕೆಕೆ ಅವರು ಕೋಲ್ಕತ್ತಾ ಠಾಕೂರ್ಪುಕೂರ್ ವಿವೇಕಾನಂದ ಕಾಲೇಜಿನಲ್ಲಿ ಆಯೋಜನೆ ಮಾಡಿದ್ದ ಉತ್ಸವದಲ್ಲಿ ಸಂಗೀತ ಕಾರ್ಯಕ್ರಮವನ್ನು ನೀಡಲು ಹೋಗಿದ್ದರು. ಒಂದು ಗಂಟೆ ಕಾರ್ಯಕ್ರಮ ನೀಡಿದ ನಂತರ, ಮಧ್ಯದಲ್ಲೇ ಅವರು ಅಸ್ವಸ್ಥರಾಗಿದ್ದರು. ವಿಶ್ರಾಂತಿ ಪಡೆಯಲೆಂದೇ ಅವರು ಹೋಟೆಲ್ ಗೆ ತೆರೆಳಿದರು. ಅಲ್ಲಿ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲದೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಯಾವುದೇ ಪ್ರಯೋಜನವಾಗಲಿಲ್ಲ.