ಕೆಎನ್ ರಾಜಣ್ಣ ಬಾಯಿ ಚಪಲಕ್ಕೆ ಮಾತನಾಡಬಾರದು: ಹೆಚ್.ಸಿ ಬಾಲಕೃಷ್ಣ

Public TV
1 Min Read
HC Balakrishna

ರಾಮನಗರ: ರಾಜಣ್ಣ (KN Rajanna) ಬಾಯಿ ಚಪಲಕ್ಕೆ, ತಮ್ಮ ತೆವಲು ತೀರಿಸಿಕೊಳ್ಳಲು ಈ ರೀತಿ ಹೇಳಿಕೆ ಕೊಡಬಾರದು ಎಂದು ಮಾಗಡಿ ಶಾಸಕ ಬಾಲಕೃಷ್ಣ (Magadi Balakrishna) ಎಚ್ಚರಿಕೆ ನೀಡಿದ್ದಾರೆ.

ಮಾಗಡಿಗೆ ಹೇಮಾವತಿ (Hemavathi) ನೀರು ಕೊಡಲ್ಲ ಎಂಬ ಸಚಿವ ರಾಜಣ್ಣ ಹೇಳಿಕೆಗೆ ಬಾಲಕೃಷ್ಣ ಕೆಂಡಾಮಂಡಲವಾಗಿದ್ದಾರೆ. ತುಮಕೂರಿನಲ್ಲಿ (Tumakuru) ಹೈನುಗಾರಿಕೆ ಮಾಡುವ ಜನ ನಮ್ಮ ಕುದೂರಿನಲ್ಲಿ ಹಾಲು ಮಾರಾಟ ಮಾಡುತ್ತಿದ್ದಾರೆ. ತುಮಕೂರು ಹಾಲು ಉತ್ಪನ್ನ ಬೆಂಗಳೂರಿನಲ್ಲಿ ಅರ್ಧ ಭಾಗ, ನಮ್ಮ ಕುದೂರಿನಲ್ಲಿ ಅರ್ಧ ಭಾಗ ಮಾರಾಟ ಆಗುತ್ತಿದೆ. ನಾವು ಅದನ್ನು ಏನಾದರೂ ತಡೆದು ನಿಲ್ಲಿಸಿದ್ರೆ ಹೇಗೆ? ನಿಮ್ಮ ಹಾಲು ಬೇಡ, ನಿಮ್ಮ ನೀರು ಬೇಡ ಅಂತಾ ತಡೆದು ನಿಲ್ಲಿಸಿದ್ರೆ ಅದರಿಂದ ಹಾನಿ ಆಗೋದು ತುಮಕೂರಿನ ರೈತರಿಗೆ. ಅದನ್ನು ನಾವು ಮಾಡಬೇಕಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಯುವಕ, ಯುವತಿ ಸಾವು ಕೇಸ್‌ಗೆ ಟ್ವಿಸ್ಟ್ – ಹುಡ್ಗಿ ಕೊಲೆ ಮಾಡಿ ಹುಡ್ಗ ಸೂಸೈಡ್!

ರಾಜಣ್ಣ ಅವರು ವಿವೇಚನೆಯಿಂದ ಮಾತನಾಡಬೇಕು. ಅವರು ಹಿರಿಯ ಮಂತ್ರಿಗಳು, ಈ ರೀತಿ ಬಾಲಿಷ ಹೇಳಿಕೆಯನ್ನ ನೀಡಬಾರದು. ಅದೇನೇ ಹೇಳೊದು ಇದ್ದರೂ ಸರ್ಕಾರದ ಹಂತದಲ್ಲಿ ಹೇಳಬೇಕು. ಕೊಡೋದೆ ಇಲ್ಲ, ಬಿಡೋದೆ ಇಲ್ಲ ಅಂದರೆ ಹೇಗೆ? ತುಮಕೂರಿನಿಂದ ಬರುವ ಹಾಲು ನಾವು ನಿಲ್ಲಿಸಿದ್ರೆ ಹೇಗೆ? ಇದು ಒಕ್ಕೂಟದ ವ್ಯವಸ್ಥೆ, ಒಂದೇ ದೇಶ, ಒಂದೇ ರಾಜ್ಯದಲ್ಲಿ ಬದುಕುತ್ತಿದ್ದೇವೆ. ಒಬ್ಬ ಹಿರಿಯ ಸಚಿವರಾಗಿ ಈ ರೀತಿ ಚಿಲ್ಲರೆ ಹೇಳಿಕೆ ಕೊಡಬಾರದು. ತೆವಲು ತೀರಿಸಿಕೊಳ್ಳಲು ಈ ರೀತಿ ಮಾತನಾಡಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಮೀನಿಗೆ ಬಂದ ಜೀವಂತ ಮೊಸಳೆ ಸೆರೆ – ಜೆಸ್ಕಾಂ ಕಚೇರಿ ಬಳಿ ತಂದು ರೈತರ ಪ್ರತಿಭಟನೆ

Share This Article