Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಡಿ ಗೋಪುರವಿಲ್ಲದ ʼಸೌತಡ್ಕ ಮಹಾಗಣಪತಿʼಗೆ ಬಯಲೇ ಆಲಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಗುಡಿ ಗೋಪುರವಿಲ್ಲದ ʼಸೌತಡ್ಕ ಮಹಾಗಣಪತಿʼಗೆ ಬಯಲೇ ಆಲಯ!

Dakshina Kannada

ಗುಡಿ ಗೋಪುರವಿಲ್ಲದ ʼಸೌತಡ್ಕ ಮಹಾಗಣಪತಿʼಗೆ ಬಯಲೇ ಆಲಯ!

Public TV
Last updated: September 5, 2024 10:28 pm
Public TV
Share
3 Min Read
Sowthadka Mahaganapathi Temple 3
SHARE

ಸಾಮಾನ್ಯವಾಗಿ ದೇವಾಲಯ ಎಂದರೆ ಗರ್ಭಗುಡಿ, ನವರಂಗ, ಮುಖಮಂಟಪ, ಮರದ ಕೆತ್ತನೆಗಳು ಹಾಗೂ ರಾಜಗೋಪುರ ಸೇರಿದಂತೆ ನಾನಾ ರೀತಿಯ ವಿನ್ಯಾಸಗಳನ್ನು ಒಳಗೊಂಡಿರುತ್ತದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಸೌತಡ್ಕದಲ್ಲಿ ನೆಲೆನಿಂತಿರುವ ಶ್ರೀ ಮಹಾಗಣಪತಿಗೆ ಬಯಲೇ ಆಲಯ. ಈ ದೇವಾಲಯಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದೆ. ಇಲ್ಲಿ ನೆಲೆಯೂರಿರುವ ಗಣೇಶನಿಗೆ ಯಾವುದೇ ರೀತಿಯ ಗುಡಿಯಿಲ್ಲ. ಹಚ್ಚ ಹಸಿರು ಕಾನನದ ಮಧ್ಯೆ ತೆರೆದ ಬಯಲಿನಲ್ಲಿ ಮಹಾಗಣಪತಿ ನೆಲೆಸಿದ್ದಾನೆ. ಇಷ್ಟಾರ್ಥಗಳನ್ನು ಸಿದ್ಧಿಗೊಳಿಸುವ ಮಹಾಗಣಪತಿ ದೇವರಿಗೆ ಗುಡಿ ಯಾಕಿಲ್ಲ ಎಂಬ ಪ್ರಶ್ನೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿಗೆ ಸೇರಿರುವ ಸೌತಡ್ಕದ ಶ್ರೀ ಮಹಾ ಗಣಪತಿ ಕ್ಷೇತ್ರ ಜಿಲ್ಲೆಯ ಅನೇಕ ಸಿದ್ಧಿ ಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರಶಾಂತವಾದ ಹಚ್ಚ ಹಸಿರಿನ ನಿತ್ಯಹರಿದ್ವರ್ಣ ಕಾನನದ ಮಧ್ಯೆ, ತೆರೆದ ಮೈದಾನದಲ್ಲಿ ಶ್ರೀ ಮಹಾ ಗಣಪತಿ ಪ್ರತಿಷ್ಠಾಪನೆಗೊಂಡಿದ್ದು, ದಿನದ 24 ಗಂಟೆಗಳು ಭಕ್ತರಿಗೆ ದರ್ಶನವನ್ನು ನೀಡುತ್ತಿದೆ. ಈ ದೇವಾಲಯಕ್ಕೆ ಬಂದು ಗಣಪತಿ ಪೂಜೆ ಮಾಡಿಸಿ, ಹರಕೆಯನ್ನು ಕಟ್ಟಿಕೊಂಡರೆ ಅಂದುಕೊಂಡ ಕೆಲಸ ಸಲೀಸಾಗಿ ಆಗುತ್ತದೆ ಎಂಬ ನಂಬಿಕೆಯಿದೆ. ಹರಕೆ ಈಡೇರಿದ ಬಳಿಕ ಇಲ್ಲಿಗೆ ಬಂದು ಗಂಟೆಯನ್ನು ಕಟ್ಟುವ ಸಂಪ್ರದಾಯವಿದೆ.

Sowthadka Mahaganapathi Temple 4

ಪುರಾಣದ ಪ್ರಕಾರ, ರಾಜಮನೆತನದಿಂದ ಪೂಜಿಸಲ್ಪಟ್ಟ 800 ವರ್ಷಗಳಷ್ಟು ಹಳೆಯದಾದ ಗಣಪತಿ ದೇವಾಲಯವು ಒಮ್ಮೆ ಶತ್ರುಗಳಿಂದ ನಾಶವಾಯಿತು. ದೇಗುಲದಲ್ಲಿದ್ದ ಗಣಪತಿಯ ಸುಂದರ ಮೂರ್ತಿಯನ್ನು ಶತ್ರುಗಳು ಧ್ವಂಸ ಮಾಡಬಾರದೆಂಬ ಉದ್ದೇಶದಿಂದ ಸ್ಥಳೀಯ ದನ ಕಾಯುವವರು ಅದನ್ನು ಕೊಂಡೊಯ್ದು ಸೌತೆಕಾಯಿಯನ್ನು ಹೇರಳವಾಗಿ ಬೆಳೆಯುತ್ತಿದ್ದ ಜಾಗದಲ್ಲಿ ಪ್ರತಿಷ್ಠಾಪಿಸಿದರು. ತುಳುವಿನಲ್ಲಿ ʼಸೌತೆʼ ಎಂದರೆ ಸೌತೆಕಾಯಿ ಮತ್ತು ʼಅಡ್ಕʼ ಎಂದರೆ ವಿಶಾಲವಾದ ಬಯಲು. ಹೀಗಾಗಿ ಈ ಸ್ಥಳವನ್ನು ʼಸೌತಡ್ಕʼ ಎಂದು ಕರೆಯಲಾಯಿತು.

Sowthadka Mahaganapathi Temple

ಸ್ಥಳೀಯ ರೈತರು ಸೌತೆಕಾಯಿಯ ದೊಡ್ಡ ಬೆಳೆಗಳನ್ನು ಕೊಯ್ಲು ಮಾಡಿದರು. ಇದು ಗಣಪತಿಯ ಆಶೀರ್ವಾದವೆಂದು ನಂಬಿದ ಅಲ್ಲಿನ ರೈತರು ತಮ್ಮ ಮೊದಲ ಸೌತೆಕಾಯಿ ಕೊಯ್ಲನ್ನು ಗಣಪತಿಗೆ ಅರ್ಪಿಸಿದರು. ಇಂದಿಗೂ ಇಲ್ಲಿ ಗಣೇಶನ ಪೂಜೆಯಲ್ಲಿ ಸೌತೆಕಾಯಿಯನ್ನು ಅರ್ಪಿಸಲಾಗುತ್ತದೆ. ಕೆಲ ವರ್ಷಗಳ ಹಿಂದೆ ಭಕ್ತಾದಿಗಳು ಮಹಾಗಣಪತಿಗೆ ಭವ್ಯವಾದ ಮಂದಿರವನ್ನು ಕಟ್ಟುವ ಸಲುವಾಗಿ ಜ್ಯೋತಿಷಿಗಳನ್ನು ಕರೆಸಿ ಅಷ್ಟಮಂಗಲ ಪ್ರಶ್ನೆಯನ್ನು ಕೇಳಿದಾಗ ಗಣಪತಿಗೆ ಇಲ್ಲಿ ಯಾವುದೇ ದೇವಾಲಯದಲ್ಲಿ ಕೂರಲು ಇಷ್ಟವಿಲ್ಲ. ಅವನಿಗೆ ಈ ವಿಶಾಲವಾದ ಬಯಲಿನಲ್ಲಿ, ನೀಲಿ ಆಕಾಶದ ಕೆಳಗೆ ಕುಳಿತೇ ಭಕ್ತರನ್ನು ಹರಸುವುದು ಇಷ್ಟವೆಂಬುದು ತಿಳಯುತ್ತದೆ. ಅಂದಿನಿಂದ ಇಲ್ಲಿ ಗಣೇಶನಿಗೆ ಗೋಪುರ ಅಥವಾ ದೇವಾಲಯವನ್ನು ನಿರ್ಮಿಸುವ ಆಸೆ ಕೈಬಿಡಲಾಯಿತು. ಇಂದಿಗೂ ಸೌತಡ್ಕದ ಹಸಿರು ಪರಿಸರದಲ್ಲಿ ಭಗವಂತ ಭವ್ಯವಾಗಿ ಕುಳಿತು ತನ್ನ ಭಕ್ತರನ್ನು ವಾರದ 7 ದಿನವೂ, ದಿನದ 24 ಗಂಟೆಯೂ ಅನುಗ್ರಹಿಸುತ್ತಾನೆ. ಯಾವುದೇ ರೀತಿಯ ಧರ್ಮ, ಜಾತಿಯ ತಾರತಮ್ಯವಿಲ್ಲದೇ ಭಗವಂತನ ಸೇವೆಯನ್ನು ಇಲ್ಲಿ ನೀವು ಮಾಡಬಹುದು. 

Sowthadka Mahaganapathi Temple 1

ಮೂಡಪ್ಪ ಸೇವೆ:
ಮೂಡಪ್ಪ ಸೇವೆ ಮಹಾಗಣಪತಿಗೆ ಸಲ್ಲುವ ವಿಶೇಷ ಸೇವೆ. ಪ್ರತೀ ವರ್ಷ ಮಾಘ ಶುದ್ಧ ಚೌತಿಯಂದು ಶ್ರೀ ದೇವರಿಗೆ ಊರ, ಪರವೂರ ಭಕ್ತ ಮಹಾಜನರ ಸಹಕಾರದೊಂದಿಗೆ ರಾತ್ರಿ ಈ ವಿಶೇಷ ಸೇವೆ ನಡೆಯುತ್ತದೆ. ಶ್ರೀ ದೇವರ ಕಟ್ಟೆಯ ವಿಗ್ರಹದ ಸುತ್ತ ಗಣೇಶನಿಗೆ ಬಲು ಇಷ್ಟವಾದ ಕಬ್ಬುಗಳಿಂದ ಆವರಣವನ್ನು ಕಟ್ಟಿ ಅದರೊಳಗೆ ಅಕ್ಕಿ ತುಪ್ಪದಿಂದ ಮಾಡಿದ ಅಪ್ಪ ಕಜ್ಜಾಯವನ್ನು ಸುರಿದು ಮಹಾಗಣಪತಿಗೆ ಅಭಿಷೇಕ ಮಾಡಲಾಗುತ್ತದೆ. ವಿವಿಧ ಹೂವುಗಳಿಂದ ದೇವರನ್ನು ವಿಶೇಷವಾಗಿ ಅಲಂಕರಿಸಲಾಗುತ್ತದೆ. ಶ್ರೀ ದೇವರ ಕಟ್ಟೆ ಹಾಗೂ ಸುತ್ತಮುತ್ತಲ ಪರಿಸರವನ್ನು ಫಲ-ಪುಷ್ಪಗಳಿಂದ ಹಾಗೂ ವರ್ಣರಂಜಿತ ದೀಪಗಳಿಂದ ಅಲಂಕರಿಸಲಾಗುತ್ತದೆ. ನಾನಾ ಭಕ್ಷ್ಯಗಳ ನೈವೇದ್ಯದೊಂದಿಗೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಇಲ್ಲಿಯ ಇನ್ನೊಂದು ವಿಶೇಷ ಸೇವೆ ಎಂದರೆ ಅವಲಕ್ಕಿ ಪ್ರಸಾದ. ಇದು ಕೂಡ ದೇವರಿಗೆ ತುಂಬಾ ಇಷ್ಟದ ಹರಕೆಯಾಗಿದ್ದು, ಭಕ್ತರು ತನ್ನ ಕಷ್ಟ ನಿವಾರಣೆಗಾಗಿ ಈ ಹರಕೆಯನ್ನೂ ಸಲ್ಲಿಸುತ್ತಾರೆ. ಇದರ ಜೊತೆ ರಂಗಪೂಜೆ ನಿರಂತರವಾಗಿ ನಡೆಯುತ್ತದೆ.

Sowthadka Mahaganapathi Temple 2

ಘಂಟೆ ಹರಕೆ:
ಈ ದೇವಾಲಯದಲ್ಲಿ ಅನೇಕ ಭಕ್ತರು ಹರಕೆಯನ್ನು ಕಟ್ಟಿಕೊಳ್ಳುತ್ತಾರೆ. ಒಂದು ಇಲ್ಲಿ ಏನೇ ಹರಕೆ ಕಟ್ಟಿಕೊಂಡರೂ ಅದು ಈಡೇರುತ್ತದೆ ಎನ್ನುವ ನಂಬಿಕೆ. ಇನ್ನೊಂದು ಇಲ್ಲಿನ ಹರಕೆ ತೀರಿಸುವ ವಿಧಾನ ಅತ್ಯಂತ ಸುಲಭದ್ದಾಗಿದೆ. ಹರಕೆಯನ್ನು ನೆರವೇರಿಸುವಂತೆ ಇಲ್ಲಿನ ಮಹಾಗಣಪತಿಯಲ್ಲಿ ಪ್ರಾರ್ಥಿಸಿಕೊಂಡರೆ ನಿಮ್ಮ ಹರಕೆಯು ಕೇವಲ 2 ತಿಂಗಳಲ್ಲಿ ಪೂರ್ಣಗೊಳ್ಳುತ್ತದೆ. ನಂತರ ಇಲ್ಲಿಗೆ ಬಂದು ನೀವು ಕೇವಲ ಒಂದು ಗಂಟೆಯನ್ನು ಕಟ್ಟಿಹೋದರೆ ಮಹಾಗಣಪತಿಯ ಅನುಗ್ರಹ ಪ್ರಾಪ್ತವಾಗುತ್ತದೆ.

ಇನ್ನು ಚೌತಿ ಸಂದರ್ಭ ಈ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಗಣಪತಿಗೆ ಸಲ್ಲಿಕೆಯಾಗುತ್ತೆ. ಸಾವಿರಾರು ಭಕ್ತರು ಆಗಮಿಸಿ ಗಣಪನ ದರ್ಶನ ಪಡೆಯುತ್ತಾರೆ. ಸಕಲ ಭಕ್ತರನ್ನು ಹರಸುವ, ಸಕಲ ಭಕ್ತರ ಇಷ್ಟಾರ್ಥ ನೆರವೇರಿಸುವ ಸೌತಡ್ಕ ಮಹಾಗಣಪತಿ ಕ್ಷೇತ್ರ ಅತ್ಯಂತ ಪವಿತ್ರ, ಶ್ರಧ್ದಾ ಭಕ್ತಿಯ ಕೇಂದ್ರವಾಗಿ ಗುರುತಿಸಿಕೊಂಡಿದೆ.

  

TAGGED:ganesh chaturthiSowthadkaSowthadka Mahaganapathi Temple
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Chikkamagaluru Suicide copy
Chikkamagaluru

ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

Public TV
By Public TV
23 seconds ago
White House Correspondents Dinner Trump says shooter apprehended
Latest

White House Dinner Shooting| ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನನ್ನು ಬಂಧಿಸಲಾಗಿದೆ: ಟ್ರಂಪ್‌

Public TV
By Public TV
21 minutes ago
Harangi Dam
Districts

ರಾಜ್ಯದಲ್ಲಿ ಬಿಸಿಲಿನ ತಾಪ – ಬರಿದಾಗುತ್ತಿದೆ ಹಾರಂಗಿ ಒಡಲು

Public TV
By Public TV
22 minutes ago
Shots Heard During Press Dinner At White House Donald Tump Evacuated Correspondents Dinner
Latest

ಶ್ವೇತಭವನದ ಡಿನ್ನರ್ ವೇಳೆ ಗುಂಡಿನ ದಾಳಿ – ವೇದಿಕೆಯಿಂದ ಟ್ರಂಪ್‌ ಸ್ಥಳಾಂತರ

Public TV
By Public TV
51 minutes ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ಪ್ರಸ್ತುತ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
51 minutes ago
daily horoscope dina bhavishya
Astrology

ದಿನ ಭವಿಷ್ಯ 26-04-2026

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?