Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‌ಪ್ರಕೃತಿ ಸೃಷ್ಟಿಸಿದ ಸ್ವರ್ಗ – ಪಶ್ಚಿಮ ಘಟ್ಟದ ಚಾರಣಸ್ನೇಹಿ ಬೆಟ್ಟ ಕೊಡಚಾದ್ರಿ 
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ‌ಪ್ರಕೃತಿ ಸೃಷ್ಟಿಸಿದ ಸ್ವರ್ಗ – ಪಶ್ಚಿಮ ಘಟ್ಟದ ಚಾರಣಸ್ನೇಹಿ ಬೆಟ್ಟ ಕೊಡಚಾದ್ರಿ 

Karnataka

‌ಪ್ರಕೃತಿ ಸೃಷ್ಟಿಸಿದ ಸ್ವರ್ಗ – ಪಶ್ಚಿಮ ಘಟ್ಟದ ಚಾರಣಸ್ನೇಹಿ ಬೆಟ್ಟ ಕೊಡಚಾದ್ರಿ 

Public TV
Last updated: July 16, 2025 7:33 am
Public TV
Share
5 Min Read
kodachadri
SHARE

ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುವ ಮಳೆಯ ಅಬ್ಬರದ ನಡುವೆ ಪ್ರಕೃತಿಯನ್ನು ನೋಡುವುದು ಮತ್ತು ಅನುಭವಿಸುವುದೇ ಒಂದು ಖುಷಿ. ನಗರದಲ್ಲಿ ಒತ್ತಡದ ಜೀವನದಿಂದ ತತ್ತರಿಸಿರುವ ಅನೇಕ ಮಂದಿ ಸ್ವಲ್ಪ ಮಟ್ಟಿಗೆ ಒತ್ತಡದಿಂದ ಮುಕ್ತಿಹೊಂದಿ  ಮನಸ್ಸು ಸಂತೃಪ್ತಿಗೊಳಿಸುವ ಸಲುವಾಗಿ ಪಶ್ಚಿಮ ಘಟ್ಟಗಳತ್ತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದೀಗ ನಿರಂತರವಾಗಿ ಸುರಿದ ಮಳೆಯಿಂದ ಪಶ್ಚಿಮ ಘಟ್ಟಗಳಲ್ಲಿನ ಗಿರಿಶಿಖರಗಳು ಹಚ್ಚ ಹಸಿರಿನಿಂದ ಎಲ್ಲರ ಕಣ್ಮನ ಸೆಳೆಯುತ್ತಿವೆ. ಚಾರಣಿಗರ ಪಾಲಿಗೆ ಸ್ವರ್ಗವಾಗಿ ಮಾರ್ಪಟ್ಟಿದೆ. ಈ ಗಿರಿಶಿಖರಗಳ ಪೈಕಿ ಕೊಡಚಾದ್ರಿ (Kodachadri) ಬೆಟ್ಟವೂ ಒಂದು. 

ಕೊಡಚಾದ್ರಿ ಬೆಟ್ಟ ಕರ್ನಾಟಕದ (Karnataka) ಅತ್ಯಂತ ಎತ್ತರದ ಗಿರಿಶಿಖರಗಳಲ್ಲಿ ಒಂದು. ಪಶ್ಚಿಮ ಘಟ್ಟದ ವಿಶೇಷ ಸೊಬಗು, ಟ್ರೆಕ್ಕಿಂಗ್‌ (Trekking) ಪ್ರಿಯರನ್ನು ಇಲ್ಲಿಗೆ ಕೈಬೀಸಿ ಕರೆಯುವಂತೆ ಮಾಡುತ್ತಿದೆ. ಕರಾವಳಿಗರು ಸೇರಿದಂತೆ ರಾಜ್ಯದ ವಿವಿಧೆಡೆ ಹಾಗೂ ಹೊರರಾಜ್ಯಗಳಿಂದಲೂ ಚಾರಣಿಗರು ಈ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಬರುತ್ತಾರೆ. ಕಾಡಿನ ಮಧ್ಯೆ ನಡೆದಾಡುತ್ತಾ, ಜಲಪಾತಗಳ ಸೌಂದರ್ಯ ಸವಿಯುತ್ತಾ, ಪ್ರಕೃತಿಯ ಮಡಿಲಲ್ಲಿ ವಿಶ್ರಾಂತಿ ಪಡೆಯಲು ಇದು ಸೂಕ್ತ ಸಮಯ. ಹಾಗಿದ್ರೆ ಎಲ್ಲಿದೆ ಈ ಕೊಡಚಾದ್ರಿ ಬೆಟ್ಟ? ತಲುಪುವುದು ಹೇಗೆ ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಕೊಡಚಾದ್ರಿಯನ್ನು ನಿಸರ್ಗ ಸೃಷ್ಟಿಸಿದ ಸ್ವರ್ಗವೆಂದೂ ಕರೆಯಲಾಗುತ್ತದೆ. ಕೊಲ್ಲೂರು ಮೂಕಾಂಬಿಕೆಯ ತಪ್ಪಲಿನಲ್ಲಿರುವ ಕೊಡಚಾದ್ರಿ ಕೇವಲ ಚಾರಣ ತಾಣ ಮಾತ್ರವಲ್ಲ, ಇದೊಂದು ಆಧ್ಯಾತ್ಮಿಕ ಮಹತ್ವವನ್ನು ಹೊಂದಿರುವ ಸ್ಥಳವಾಗಿದೆ. ಕೊಡಚಾದ್ರಿ ಸಾಕಷ್ಟು ಧಾರ್ಮಿಕ ಹಾಗೂ ಆಧ್ಯಾತ್ಮಿಕ ರಹಸ್ಯಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

ಕೊಡಚಾದ್ರಿ ಎಲ್ಲಿದೆ?
ಕೊಡಚಾದ್ರಿ ಬೆಟ್ಟವು ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಸಿಕೊಳ್ಳುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿದೆ. ಇದು ಸಮುದ್ರ ಮಟ್ಟದಿಂದ 1,343 ಮೀಟರ್ ಎತ್ತರದಲ್ಲಿದೆ ಮತ್ತು ಕರ್ನಾಟಕದ ಅತಿ ಎತ್ತರದ ಶಿಖರಗಳಲ್ಲಿ ಒಂದಾಗಿದೆ.ಕೊಡಚಾದ್ರಿ ಎನ್ನುವ ಪದವು ಎರಡು ಸಂಸ್ಕೃತ ಪದಗಳಾದ ಕೊಡಚ ಮತ್ತು ಆದ್ರಿ ಎನ್ನುವುದರಿಂದ ಸೃಷ್ಟಿಯಾಗಿದೆ. ಪುರಾತನ ಕಾಲದಲ್ಲಿ ಇಲ್ಲಿ ಜನರು ವಾಸಿಸುತ್ತಿದ್ದರು ಎನ್ನುವ ಊಹೆಗಳಿವೆ. ಆದಿಶಂಕರಾಚಾರ್ಯಾರು ಸುಮಾರು ಕ್ರಿ.ಶ 6 ಅಥವಾ 7ನೇ ಶತಮಾನದಲ್ಲಿ ಈ ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಪುರಾವೆಗಳು ತಿಳಿಸುತ್ತವೆ.

ಕೊಡಚಾದ್ರಿ ಬೆಟ್ಟ ಪ್ರಕೃತಿ ಪ್ರಿಯರಿಗೆ ಹಾಗೂ ಟ್ರೆಕ್ಕಿಂಗ್‌ ಮಾಡುವವರಿಗೆ ಹೇಳಿ ಮಾಡಿಸಿದ ಸ್ಥಳ. ಇಲ್ಲಿ ಚಾರಣ ಮಾಡುವ ಅನುಭವ ಒಂದಾದರೆ, ಜೀಪ್‌ನಲ್ಲಿ ತೆರಳುವುದು ಮತ್ತೊಂದು ಹೊಸ ಅನುಭವವನ್ನು ನೀಡುತ್ತದೆ. ಸ್ಥಳೀಯ ಗೈಡ್‌ಗಳು ಕೂಡ ಇಲ್ಲಿ ಮಾರ್ಗದರ್ಶನ ನೀಡುತ್ತಾರೆ. ಜೀಪ್‌ ಮೂಲಕ ತೆರಳಿದರೆ ಕೊಡಚಾದ್ರಿಯ ಸೊಬಗನ್ನು ಸವಿಯಲು 2 ಗಂಟೆಗಳ ಕಾಲ ಅವಕಾಶವಿರುತ್ತದೆ. ಅದೇ ಚಾರಣವಾದರೆ ಬೆಳಗ್ಗೆ 6ರಿಂದ ಸಂಜೆ 4 ಗಂಟೆಯವರೆಗೆ ಅವಕಾಶವಿರುತ್ತದೆ. ಇಲ್ಲಿನ ತಂಪಾದ ಗಾಳಿ, ಪ್ರಕೃತಿಯ ಸೌಂದರ್ಯ ನಮ್ಮ ಮನಸ್ಸಿನಲ್ಲಿರುವ ಚಿಂತೆಗಳನ್ನು ದೂರಮಾಡಿ ಹಿತವನ್ನು ನೀಡುತ್ತದೆ.

ಕೊಡಚಾದ್ರಿ ಬೆಟ್ಟ ಸಾಲುಗಳು ಮೂಕಾಂಬಿಕ ವನ್ಯ ಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಕೊಡಚಾದ್ರಿ ಬೆಟ್ಟದ ಮೇಲೆ ಸರ್ವಜ್ಞ ಪೀಠವೆಂಬ ಒಂದು ಸಣ್ಣ ದೇವಾಲಯವಿದೆ. ಈ ಜಾಗದಲ್ಲಿ ಭಗವಾನ್ ಶ್ರೀ ಶಂಕರಾಚಾರ್ಯರು ತಪಸ್ಸು ಮಾಡಿದ್ದರು ಎಂಬ ಪ್ರತೀತಿಯಿದೆ. ಸರ್ವಜ್ಞ ಪೀಠಕ್ಕಿಂತ 2 ಕಿ.ಮೀ ಮೊದಲು ಮೂಲ ಮೂಕಾಂಬಿಕ ದೇವಸ್ಥಾನವಿದೆ. ಸರ್ವಜ್ಞ ಪೀಠದಿಂದ ಮುಂದಕ್ಕೆ ಕಡಿದಾದ ಬೆಟ್ಟವನ್ನು ಇಳಿದರೆ ಚಿತ್ರಮೂಲ ಎಂಬ ಸ್ಥಳ ತಲುಪಬಹುದು. ಇದು ಸೌಪರ್ಣಿಕ ನದಿಯ ಉಗಮ ಸ್ಥಾನ. ಈ ಜಾಗವು ಹಲವಾರು ಜಾತಿಯ ಸಸ್ಯಗಳಿಗೆ ಹೆಸರುವಾಸಿಯಾಗಿದೆ. ಕೊಡಚಾದ್ರಿ ಬೆಟ್ಟವು ದಟ್ಟವಾದ ಅರಣ್ಯ ಹಾಗು ಶೋಲ ಕಾಡುಗಳಿಂದ ಆವೃತವಾಗಿದೆ. 

ಕೊಡಚಾದ್ರಿ ಬೆಟ್ಟದ  ಪ್ರಮುಖ ಆಕರ್ಷಣೆಗಳು:
ಕೊಡಚಾದ್ರಿ ಪಶ್ಚಿಮ ಘಟ್ಟದ ವಿಹಂಗಮ ನೋಟಗಳನ್ನು ನೀಡುತ್ತದೆ.  ಮೋಡಗಳಿಲ್ಲದ ದಿನದಲ್ಲಿ ದೂರದ ಅರಬ್ಬೀ ಸಮುದ್ರವನ್ನು  ಮತ್ತು ಕೊಲ್ಲೂರು ಪಟ್ಟಣವನ್ನು ನೋಡಬಹುದಾಗಿದೆ. 

ಗಣೇಶ ಗುಹೆ: ಸಂತ ಆದಿ ಶಂಕರಾಚಾರ್ಯರು ಧ್ಯಾನ ಮಾಡಿದ್ದಾರೆಂದು ಹೇಳಲಾಗುವ ಕೊಡಚಾದ್ರಿ ಬೆಟ್ಟದ ಮೇಲಿರುವ ಗಣೇಶ ಗುಹೆ ಮತ್ತು ಸರ್ವಜ್ಞ ಪೀಠ ನೋಡಲೇಬೇಕಾದ ತಾಣಗಳಾಗಿವೆ. 

ಹಿಡ್ಲುಮನೆ ಜಲಪಾತ: ಚಾರಣ ಮಾಡಿ ಕೊಡಚಾದ್ರಿಯಿಂದ 5 ಕಿ.ಮೀ. ದೂರ ಇರುವ ಹಿಡ್ಲುಮನೆ ಜಲಪಾತ ನೋಡಬಹುದಾಗಿದೆ.

ಸೂರ್ಯಾಸ್ತ: ಕೊಡಚಾದ್ರಿಯಿಂದ ಅರಬ್ಬೀ ಸಮುದ್ರದಲ್ಲಿ ಮುಳುಗುವ ಸೂರ್ಯನನ್ನು ನೋಡುವುದು ಒಂದು ಮರೆಯಲಾಗದ ಅನುಭವವಾಗಲಿದೆ. 

ನಗರ ಕೋಟೆ (30 ಕಿ.ಮೀ), ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ (37 ಕಿ.ಮೀ), ಸಿಗಂದೂರು ದೇವಸ್ಥಾನ (51 ಕಿ.ಮೀ) ಮತ್ತು ಜೋಗ ಜಲಪಾತ (100 ಕಿ.ಮೀ) ಹತ್ತಿರದ ಆಕರ್ಷಣೆಗಳಾಗಿದ್ದು, ಮನಸ್ಸಿಗೆ ಮುದ ನೀಡುತ್ತವೆ.

ಚಾರಣಕ್ಕೂ ಮೊದಲು ನೋಂದಣಿ:
ಕೊಡಚಾದ್ರಿ ಸರ್ವಜ್ಞಪೀಠ, ಹಿಡ್ಲುಮನೆ ಜಲಪಾತ, ಆಗುಂಬೆ ಜೋಗಿಗುಂಡಿ ಜಲಪಾತ ಮತ್ತು ಸೀತಾನದಿ ಚಾರಣಕ್ಕೆ ಅವಕಾಶಗಳಿವೆ. ಈ ಸ್ಥಳಗಳಿಗೆ ಚಾರಣಕ್ಕೆ ಹೋಗಲು ಅರಣ್ಯ ಇಲಾಖೆಯ ವೆಬ್‌ಸೈಟ್‌ನಲ್ಲಿರುವ ಅರಣ್ಯ ವಿಹಾರದಲ್ಲಿ ನೋಂದಾಯಿಸಿಕೊಳ್ಳಬೇಕು. ವೆಬ್‌ಸೈಟ್‌ನಲ್ಲಿ, ಅರಣ್ಯ ವಿಹಾರ ವಿಭಾಗದಲ್ಲಿ, ನಿಮಗೆ ಬೇಕಾದ ಚಾರಣವನ್ನು ಆಯ್ಕೆ ಮಾಡಿಕೊಳ್ಳಬಹುದು ಮತ್ತು ನೋಂದಾಯಿಸಿಕೊಳ್ಳಬಹುದು.

ಕೊಡಚಾದ್ರಿ ತಲುಪುವುದು ಹೇಗೆ?
ಕೊಡಚಾದ್ರಿ ತಲುಪಲು ಕೊಲ್ಲೂರು ಪಟ್ಟಣಕ್ಕೆ ಬರಬೇಕು. ಕೊಲ್ಲೂರು ಮಂಗಳೂರಿನಿಂದ (ಹತ್ತಿರದ ವಿಮಾನ ನಿಲ್ದಾಣ) 130 ಕಿ.ಮೀ ಮತ್ತು ಬೆಂಗಳೂರಿನಿಂದ 430 ಕಿ.ಮೀ ದೂರದಲ್ಲಿದೆ. ಮಂಗಳೂರು ಮತ್ತು ಕೊಲ್ಲೂರು ನಡುವೆ ದಿನವಿಡೀ ಹಲವಾರು ಖಾಸಗಿ ಬಸ್ಸುಗಳು ಚಲಿಸುತ್ತವೆ. ಬೈಂದೂರಿನ ಮೂಕಾಂಬಿಕಾ ರಸ್ತೆ ರೈಲು ನಿಲ್ದಾಣ ಕೊಲ್ಲೂರಿನಿಂದ 20 ಕಿ.ಮೀ ದೂರದಲ್ಲಿದೆ.

ಕೊಲ್ಲೂರಿನಿಂದ ಪ್ರವಾಸಿಗರು ಕೊಡಾಚಾದ್ರಿ ತಲುಪಲು 4×4 ಜೀಪ್‌ಗಳನ್ನು ಬಾಡಿಗೆಗೆ ಪಡೆಯಬಹುದು. ಬೆಟ್ಟದ ರಸ್ತೆಯ ಕೊನೆಯ ಕೆಲವು ಕಿ.ಮೀ ತುಂಬಾ ಕಡಿದಾಗಿದ್ದು ಸಾಮಾನ್ಯ ವಾಹನಗಳಿಗೆ ಸೂಕ್ತವಲ್ಲ. ತಮ್ಮ 4×4 ಜೀಪ್‌ಗಳಲ್ಲಿ ಅನುಭವಿ ಸ್ಥಳೀಯ ಚಾಲಕರು ಮಾತ್ರ ಪ್ರವಾಸಿಗರನ್ನು ಬೆಟ್ಟದ ಮೇಲೆ ನಿಗದಿತ ಶುಲ್ಕ ಪಡೆದು ಕರೆದೊಯ್ಯುತ್ತಾರೆ. 

ಅನುಭವಿ ಬೈಕು ಸವಾರರು ಸಹ ಬೆಟ್ಟದ ತುದಿಯವರೆಗೆ ಸವಾರಿ ಮಾಡುತ್ತಾರೆ. ಸ್ವಂತ ವಾಹನಗಳು ಅಥವಾ ಸಾರ್ವಜನಿಕ ಸಾರಿಗೆಯನ್ನು ಬಳಸಿಕೊಂಡು ಹತ್ತಿರದ ಪಟ್ಟಣವಾದ ನಿಟ್ಟೂರು ತಲುಪಿ ನಿಟ್ಟೂರಿನಿಂದ ಚಾರಣ ಅಥವಾ ಬಾಡಿಗೆ ಜೀಪಿನ ಮೂಲಕ ಕೊಡಚಾದ್ರಿ ತಲುಪಲು ಸಾಧ್ಯವಿದೆ. 

ಕೊಡಚಾದ್ರಿ ಟ್ರೆಕ್ಕಿಂಗ್‌ಗೆ ಸೂಕ್ತ ಸಮಯ:
ಸುರಕ್ಷತಾ ಕಾರಣಗಳಿಗಾಗಿ ಸ್ಥಳೀಯ ಮಾರ್ಗದರ್ಶಿಯನ್ನು ನೇಮಿಸಿಕೊಳ್ಳಲು ಮತ್ತು ಗುಂಪುಗಳಲ್ಲಿ ಚಾರಣ ಮಾಡಲು ಶಿಫಾರಸು ಮಾಡಲಾಗಿದೆ. ಮಳೆಗಾಲದಲ್ಲಿ ಇಂಬಳಗಳು ಮತ್ತು ಜಾರುವ ಹಾದಿಯ ಬಗ್ಗೆ ಎಚ್ಚರವಹಿಸುವುದು ಉತ್ತಮವಾಗಿದೆ. ಕೊಡಚಾದ್ರಿಗೆ ಭೇಟಿ ನೀಡಲು ಅಕ್ಟೋಬರ್‌ನಿಂದ ಮೇವರೆಗೆ ಉತ್ತಮ ಸಮಯ.  

ತಂಗುವುದು ಎಲ್ಲಿ?
ಮೂಲ ಮೂಕಾಂಬಿಕ ದೇವಸ್ಥಾನದ ಬಳಿ ಕರ್ನಾಟಕ ಲೋಕೋಪಯೋಗಿ ಇಲಾಖೆಯವರ ಅತಿಥಿ ಗೃಹವಿದೆ. ಇಲ್ಲಿ ಉಳಿಯಲು ಮೊದಲು ಅನುಮತಿ ಪಡೆದಿರಬೇಕು. ಹಾಗೆಯೆ ಕೊಡಚಾದ್ರಿಯಲ್ಲಿ ಮೂಲ ಮೂಕಾಂಬಿಕ ದೇವಸ್ಥಾನದ ಅರ್ಚಕರ ಮನೆಗಳಲ್ಲಿ ಊಟ ಮತ್ತು ಉಳಿಯಲು ಅನುಕೂಲವಿದೆ. ಕೊಲ್ಲೂರಿನಲ್ಲಿ ಹಲವಾರು ಹೋಟೆಲ್‌ಗಳು ಮತ್ತು ಅತಿಥಿಗೃಹಗಳು ಲಭ್ಯವಿದೆ.

TAGGED:karnatakakodachadrishivamoggaTourist placeTrekking
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
13 minutes ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
16 minutes ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
1 hour ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
1 hour ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
2 hours ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?