Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹತ್ಯೆ – ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಜನಾಂದೋಲನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹತ್ಯೆ – ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಜನಾಂದೋಲನ

Karnataka

ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹತ್ಯೆ – ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಜನಾಂದೋಲನ

Public TV
Last updated: September 30, 2019 9:28 pm
Public TV
Share
3 Min Read
kalagi protest 1
SHARE

ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿ ಹತ್ಯೆ ಮಾಡಿದ ಆರೋಪಿಗಳ ಗಡಿಪಾರು ಮಾಡುವಂತೆ ಒತ್ತಾಯಿಸಿ ಬೃಹತ್ ಜನಾಂದೋಲನ ಮಡಿಕೇರಿ ತಾಲೂಕಿನ ಸಂಪಾಜೆಯಲ್ಲಿ ನಡೆಯಿತು.

ಸಂಪಾಜೆ ಗೇಟ್ ಬಳಿಯಿಂದ ಕೊಯಿನಾಡುವರೆಗೆ ಬಾಲಚಂದ್ರ ಕಳಗಿಯ ಫೋಟೋ ಹಿಡಿದು ಮೆರವಣಿಗೆ ಸಾಗಿದ ಸಾವಿರಾರು ಜನ ಆರೋಪಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜನಜಾಗೃತಿ ಸಭೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ವಿಶ್ವ ಹಿಂದು ಪರಿಷತ್‍ನ ವಿಭಾಗಿಯ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಪಾಲ್ಗೊಂಡಿದ್ದರು.

kalagi protest 2

ಮಾರ್ಚ್ 19 ಸಂಜೆ ಮೇಕೇರಿ ಬಳಿ ಕಳಗಿಯ ಕಾರಿಗೆ ಲಾರಿ ಡಿಕ್ಕಿ ಹೊಡೆದು ಹತ್ಯೆ ಮಾಡಲಾಗಿತ್ತು. ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಜಯ, ಸಂಪತ್, ಹರಿಪ್ರಸಾದ್ ಎಂಬವರನ್ನು ಬಂಧಿಸಿದ್ದರು. ಇದೀಗ ಜಾಮೀನಿನಲ್ಲಿ ಹೊರಬಂದಿದ್ದು, ಅವರಿಗೆ ಗ್ರಾಮಕ್ಕೆ ಬರಲು ಅವಕಾಶ ನೀಡಬಾರದೆಂದು ಆಗ್ರಹಿಸಿ ಇಂದು ಕಾರ್ಯಕ್ರಮ ನಡೆಯಿತು. ಮುಖ್ಯ ಭಾಷಣ ಮಾಡಿದ ಶರಣ್ ಪಂಪ್‍ವೆಲ್ ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.

ಆರಂಭದಲ್ಲಿ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಈ ಪ್ರಕರಣವನ್ನು ಬಿಂಬಿಸಲಾಗಿತ್ತು. ಆದರೆ ಬಾಲಚಂದ್ರ ಅವರ ಚಿಕ್ಕಪ್ಪ ರಾಜಾರಾಮ ಕಳಗಿ ಸಲ್ಲಿಸಿದ ಸಂಶಯಾಸ್ಪದ ಬಗ್ಗೆ ದೂರು ಪರಿಗಣಿಸಿ ತನಿಖೆ ನಡೆಸಿದ ಮಡಿಕೇರಿ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಹತ್ಯೆ ಮಾಡಿದ್ದು ಯಾಕೆ?
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಬಾಲಚಂದ್ರ ಕಳಗಿ ಅವರಲ್ಲಿ ಸಂಪತ್ ವೈನ್ ಶಾಪ್ ತೆರೆಯಲು ಅನುಮತಿ ಕೇಳಿದ್ದ. ಕಳಗಿ ಅವರು ವೈನ್ ಶಾಪ್ ತೆರೆಯಲು ಅನುಮತಿ ನೀಡಿರಲಿಲ್ಲ. ರಿಕ್ರಿಯೇಶನ್ ಕ್ಲಬ್ ಮಾಡುವುದಕ್ಕೂ ಕಳಗಿ ವಿರೋಧ ವ್ಯಕ್ತಪಡಿಸಿದ್ದರು. ಅನುಮತಿ ನೀಡದ್ದಕ್ಕೆ ಅಸಮಾಧಾನಗೊಂಡಿದ್ದ ಸಂಪತ್ ಕೊಲೆ ಮಾಡಲು ಪ್ಲಾನ್ ಮಾಡಿದ್ದ.

blachandra kalgai

ಕೊಲೆ ನಡೆಸಲು ಜಯ ಮತ್ತು ಹರಿಪ್ರಸಾದ್‍ಗೆ ಸಂಪತ್ ಸುಪಾರಿ ನೀಡಿದ್ದ. ಹಿಂದೆ ಜಯನ ವಾಹನ ಅಪಘಾತಗೊಂಡಿದ್ದಾಗ ಸಂಪತ್ ಬಿಡಿಸಿಕೊಟ್ಟಿದ್ದ. ಹೀಗಾಗಿ ಜಯ ಮತ್ತು ಸಂಪತ್ ಸ್ನೇಹಿತರಾಗಿದ್ದರು. ಹತ್ಯೆ ಮಾಡಿದ್ರೆ 1.5 ಲಕ್ಷದ ಲೋನ್ ಕ್ಲಿಯರ್ ಮಾಡಿಕೊಡುತ್ತೇನೆ ಎಂದು ಸುಪಾರಿ ನೀಡಿದ್ದ. ಈ ಕೃತ್ಯಕ್ಕೆ ಸ್ನೇಹಿತ ಹರಿಪ್ರಸಾದ್ ಸಹಕರಿಸುವುದಾಗಿ ತಿಳಿಸಿದ್ದ.

ಪ್ಲಾನ್ ಹೀಗಿತ್ತು:
ಕಳಗಿಯನ್ನು ಹತ್ಯೆ ಮಾಡಲು ಮೂವರು ಒಂದು ತಿಂಗಳಿನಿಂದ ಸರಿಯಾದ ಸಮಯವನ್ನು ಕಾಯುತ್ತಿದ್ದರು. ಮಾರ್ಚ್ 19 ರಂದು ಕಳಗಿ ಅವರು ಮಡಿಕೇರಿಗೆ ತೆರಳಿ ಮರಳಿ ಮನೆಗೆ ಬರುತ್ತಿದ್ದಾಗ ಡ್ರೈವರ್ ಆಗಿದ್ದ ಜಯ ತಾಳತ್ತಮನೆ ಸಮೀಪ ಲಾರಿಯನ್ನು ಓಮ್ನಿಗೆ ಗುದ್ದಿಸಿದ್ದ. ಪರಿಣಾಮ ಕಳಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

mdk bjp murder

ಅನುಮಾನ ಬಂದಿದ್ದು ಹೇಗೆ?
ಬಾಲಚಂದ್ರ ಕಳಗಿ ಸಾವಿನ ಬಗ್ಗೆ ಹಲವು ಸಂಶಯಗಳು ಹುಟ್ಟಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ ಸತ್ಯಾಂಶವನ್ನು ಬಯಲಿಗೆ ಎಳೆಯುವಂತೆ ಮೃತರ ಚಿಕ್ಕಪ್ಪ ಹಾಗೂ ಬಿಜೆಪಿ ಪ್ರಮುಖ ರಾಜಾರಾಮ ಕಳಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 23 ರಂದು ದೂರು ದಾಖಲಿಸಿದ್ದರು.

ಸಾವಿನ ಬಗ್ಗೆ ಮೃತರ ಸಂಬಂಧಿಕರು ಹಾಗೂ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಯೂ ಕಳಗಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿತ್ತು. ಮೃತರ ಚಿಕ್ಕಪ್ಪ ನೀಡಿರುವ ದೂರಿನ ಬೆನ್ನಲ್ಲೇ ಡಿವೈಎಸ್‍ಪಿ ಕೆ.ಎಸ್.ಸುಂದರರಾಜ್ ನೇತೃತ್ವದಲ್ಲಿ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸಿದ್ದಯ್ಯ ಹಾಗೂ ಠಾಣಾಧಿಕಾರಿ ಚೇತನ್ ತನಿಖೆ ಆರಂಭಿಸಿದ್ದರು.

md bjp accident

ಸಿಕ್ಕಿಬಿದ್ದಿದ್ದು ಹೇಗೆ?
ಬಲವಾದ ಶಂಕೆ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ಜಯನನ್ನು ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಈ ವಿಚಾರಣೆ ವೇಳೆ ಜಯ ಸತ್ಯವನ್ನು ಹೇಳಿದ್ದು, ವೈನ್, ಮರಳು ಮಾಫಿಯಾ, ರಿಕ್ರಿಯೇಶನ್ ಕ್ಲಬ್ ಮಾಡಲು ಬಿಡದಕ್ಕೆ ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದ. ಈತ ತಿಳಿಸಿದ ಮಾಹಿತಿ ಆಧಾರದ ಹಿನ್ನೆಲೆಯಲ್ಲಿ ಉಳಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

TAGGED:Balachandra KalagibjpmadikeriMurderprotestಕೊಲೆಪ್ರತಿಭಟನೆಬಾಲಚಂದ್ರ ಕಳಗಿಬಿಜೆಪಿಮಡಿಕೇರಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Public TV
By Public TV
19 minutes ago
Donald Trump Strait Of Hormuz
Latest

ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌

Public TV
By Public TV
45 minutes ago
Modi
Districts

ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನಿದರ ವಿಶೇಷ?

Public TV
By Public TV
1 hour ago
Koppal Love Jihad
Crime

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ – ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ

Public TV
By Public TV
1 hour ago
ICC Womens t20 world cup 2026
Cricket

Women’s T20 WC 2026 | ಈವರೆಗಿನ ಗರಿಷ್ಠ 81.8 ಕೋಟಿ ಬಹುಮಾನ ಮೊತ್ತ ಘೋಷಿಸಿದ ICC

Public TV
By Public TV
2 hours ago
APMC 3
Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?