Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತವೆಂದು ಬಿಂಬಿಸಿ ಕೊಡಗು ಬಿಜೆಪಿ ಮುಖಂಡನ ಕೊಲೆಗೈದ ಆರೋಪಿಗಳು ಅಂದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಪಘಾತವೆಂದು ಬಿಂಬಿಸಿ ಕೊಡಗು ಬಿಜೆಪಿ ಮುಖಂಡನ ಕೊಲೆಗೈದ ಆರೋಪಿಗಳು ಅಂದರ್

Districts

ಅಪಘಾತವೆಂದು ಬಿಂಬಿಸಿ ಕೊಡಗು ಬಿಜೆಪಿ ಮುಖಂಡನ ಕೊಲೆಗೈದ ಆರೋಪಿಗಳು ಅಂದರ್

Public TV
Last updated: March 29, 2019 10:08 pm
Public TV
Share
2 Min Read
blachandra kalgai
SHARE

ಮಡಿಕೇರಿ: ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಲ್ಪಟ್ಟಿದ್ದ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ(47) ಅವರ ಕೊಲೆ ಪ್ರಕರಣವನ್ನು ಕೊಡಗು ಪೊಲೀಸರು ಬೇಧಿಸಿದ್ದಾರೆ.

ಬಾಲಚಂದ್ರ ಅವರ ಚಿಕ್ಕಪ್ಪ ರಾಜಾರಾಮ ಕಳಗಿ ಸಲ್ಲಿಸಿದ ಸಂಶಯಾಸ್ಪದ ಬಗ್ಗೆ ದೂರು ಪರಿಗಣಿಸಿ ತನಿಖೆ ನಡೆಸಿದ ಮಡಿಕೇರಿ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಸಂಪತ್ ಕುಮಾರ್(34), ಹರಿಪ್ರಸಾದ್(36), ಜಯನ್(34) ಬಂಧಿತ ಆರೋಪಿಗಳು. ಬಂಧಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.

mdk bjp murder

ಹತ್ಯೆ ಮಾಡಿದ್ದು ಯಾಕೆ?
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಬಾಲಚಂದ್ರ ಕಳಗಿ ಅವರಲ್ಲಿ ಸಂಪತ್ ವೈನ್ ಶಾಪ್ ತೆರೆಯಲು ಅನುಮತಿ ಕೇಳಿದ್ದಾನೆ. ಕಳಗಿ ಅವರು ವೈನ್ ಶಾಪ್ ತೆರೆಯಲು ಅನುಮತಿ ನೀಡಿರಲಿಲ್ಲ. ರಿಕ್ರಿಯೇಶನ್ ಕ್ಲಬ್ ಮಾಡುವುದಕ್ಕೂ ಕಳಗಿ ವಿರೋಧ ವ್ಯಕ್ತಪಡಿಸಿದ್ದರು. ಅನುಮತಿ ನೀಡದ್ದಕ್ಕೆ ಅಸಮಾಧಾನಗೊಂಡಿದ್ದ ಸಂಪತ್ ಕೊಲೆ ಮಾಡಲು ಪ್ಲಾನ್ ಮಾಡಿದ್ದ.

ಕೊಲೆ ನಡೆಸಲು ಜಯ ಮತ್ತು ಹರಿಪ್ರಸಾದ್‍ಗೆ ಸಂಪತ್ ಸುಪಾರಿ ನೀಡಿದ್ದ. ಹಿಂದೆ ಜಯನ ವಾಹನ ಅಪಘಾತಗೊಂಡಿದ್ದಾಗ ಸಂಪತ್ ಬಿಡಿಸಿಕೊಟ್ಟಿದ್ದ. ಹೀಗಾಗಿ ಜಯ ಮತ್ತು ಸಂಪತ್ ಸ್ನೇಹಿತರಾಗಿದ್ದರು. ಹತ್ಯೆ ಮಾಡಿದ್ರೆ 1.5 ಲಕ್ಷದ ಲೋನ್ ಕ್ಲಿಯರ್ ಮಾಡಿಕೊಡುತ್ತೇನೆ ಎಂದು ಸುಪಾರಿ ನೀಡಿದ್ದ. ಈ ಕೃತ್ಯಕ್ಕೆ ಸ್ನೇಹಿತ ಹರಿಪ್ರಸಾದ್ ಸಹಕರಿಸುವುದಾಗಿ ತಿಳಿಸಿದ್ದ.

ಪ್ಲಾನ್ ಹೀಗಿತ್ತು:
ಕಳಗಿಯನ್ನು ಹತ್ಯೆ ಮಾಡಲು ಮೂವರು ಒಂದು ತಿಂಗಳಿನಿಂದ ಸರಿಯಾದ ಸಮಯವನ್ನು ಕಾಯುತ್ತಿದ್ದರು. ಮಾರ್ಚ್ 19 ರಂದು ಕಳಗಿ ಅವರು ಮಡಿಕೇರಿಗೆ ತೆರಳಿ ಮರಳಿ ಮನೆಗೆ ಬರುತ್ತಿದ್ದಾಗ ಡ್ರೈವರ್ ಆಗಿದ್ದ ಜಯ ತಾಳತ್ತಮನೆ ಸಮೀಪ ಲಾರಿಯನ್ನು ಓಮ್ನಿಗೆ ಗುದ್ದಿಸಿದ್ದ. ಪರಿಣಾಮ ಕಳಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

md bjp accident

ಅನುಮಾನ ಬಂದಿದ್ದು ಹೇಗೆ?
ಬಾಲಚಂದ್ರ ಕಳಗಿ ಸಾವಿನ ಬಗ್ಗೆ ಹಲವು ಸಂಶಯಗಳು ಹುಟ್ಟಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ ಸತ್ಯಾಂಶವನ್ನು ಬಯಲಿಗೆ ಎಳೆಯುವಂತೆ ಮೃತರ ಚಿಕ್ಕಪ್ಪ ಹಾಗೂ ಬಿಜೆಪಿ ಪ್ರಮುಖ ರಾಜಾರಾಮ ಕಳಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 23 ರಂದು ದೂರು ದಾಖಲಿಸಿದ್ದರು.

ಸಾವಿನ ಬಗ್ಗೆ ಮೃತರ ಸಂಬಂಧಿಕರು ಹಾಗೂ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಯೂ ಕಳಗಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿತ್ತು. ಮೃತರ ಚಿಕ್ಕಪ್ಪ ನೀಡಿರುವ ದೂರಿನ ಬೆನ್ನಲ್ಲೇ ಡಿವೈಎಸ್‍ಪಿ ಕೆ.ಎಸ್.ಸುಂದರರಾಜ್ ನೇತೃತ್ವದಲ್ಲಿ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸಿದ್ದಯ್ಯ ಹಾಗೂ ಠಾಣಾಧಿಕಾರಿ ಚೇತನ್ ತನಿಖೆ ಆರಂಭಿಸಿದ್ದರು.

ಸಿಕ್ಕಿಬಿದ್ದಿದ್ದು ಹೇಗೆ?
ಬಲವಾದ ಶಂಕೆ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ಜಯನನ್ನು ಶುಕ್ರವಾರ ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಈ ವಿಚಾರಣೆ ವೇಳೆ ಜಯ ಸತ್ಯವನ್ನು ಹೇಳಿದ್ದು, ವೈನ್, ಮರಳು ಮಾಫಿಯಾ, ರಿಕ್ರಿಯೇಶನ್ ಕ್ಲಬ್ ಮಾಡಲು ಬಿಡದಕ್ಕೆ ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈತ ತಿಳಿಸಿದ ಮಾಹಿತಿ ಆಧಾರದ ಹಿನ್ನೆಲೆಯಲ್ಲಿ ಉಳಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಹರಿಪ್ರಸಾದನ ಸ್ವಿಫ್ಟ್ ಕಾರು ಮತ್ತು ಅಪಘಾತದ ಲಾರಿ ವಶಕ್ಕೆ ಪಡೆಯಲಾಗಿದೆ.

vlcsnap 2019 03 29 22h00m32s446

TAGGED:accidentBJP leadercardeathmadikeriPublic TVಅಪಘಾತಕಾರುಪಬ್ಲಿಕ್ ಟಿವಿಬಿಜೆಪಿ ಮುಖಂಡಮಡಿಕೇರಿಸಾವು
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
6 minutes ago
Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
2 hours ago
Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

Public TV
By Public TV
2 hours ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
3 hours ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
3 hours ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?