ಮಡಿಕೇರಿ: ಮಹಾಮಳೆಗೆ ತತ್ತರಿಸಿ ಹೋಗಿದ್ದ ಜನಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳು ಇಲ್ಲ ಎಂದು ಅರೋಪಿಸಿ ದಿಢೀರ್ ಅಗಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನದ ಊಟವನ್ನು ಸಂಜೆ 4 ಗಂಟೆಗೆ ನೀಡಿದ್ದಾರೆ. ಅದರೆ ಊಟ ಅರ್ಧ ಬೆಂದಿರುವ ಅನ್ನ ನೀಡಿದ್ದಾರೆ. ಅಲ್ಲದೇ ಮುನ್ನೂರು ಜನಕ್ಕೆ ಕೇವಲ ಮೂರು ಶೌಚಾಲಯಗಳು ಇದೆ. ವಿದ್ಯುತ್ ವ್ಯವಸ್ಥೆ ಇಲ್ಲದೆ ಕತ್ತಲೆಯಲ್ಲೆ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿರಾಶ್ರಿತರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಇಷ್ಟು ದಿನ ಮಡಿಕೇರಿ ಸೇವಾ ಭಾರತೀಯವರು ತಮ್ಮನ್ನು ಮಕ್ಕಳಂತೆ ನೋಡಿಕೋಳುತ್ತಿದ್ದರು. ಅದರೆ ಇಲ್ಲಿ ಅಧಿಕಾರಿಗಳು ತಮ್ಮನೆ ಭಿಕ್ಷುಕರಂತೆ ನೋಡುತ್ತಿದ್ದಾರೆ. ಅವ್ಯವಸ್ಥೆಯನ್ನು ಪ್ರಶ್ನೆ ಮಾಡಿದ್ದಾರೆ ಪೊಲೀಸರನ್ನು ಕರೆಸಿ ಧಮ್ಕಿ ಹಾಕುತ್ತಾರೆ ಎಂದು ಆರೋಪಿಸುತ್ತಿದ್ದಾರೆ. ಸದ್ಯಕ್ಕೆ ಪರಿಸ್ಥಿತಿಯನ್ನು ಪೊಲೀಸರು ತಿಳಿಗೊಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv