ಮಡಿಕೇರಿ: ಜಿಲ್ಲೆಯ ಗಡಿಭಾಗ ಕುಶಾಲನಗರದಲ್ಲಿ ಐತಿಹಾಸಿಕ ಗಣಪತಿ ದೇವಾಲಯದ 99ನೇ ವರ್ಷದ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನಡೆಯಿತು.
ಅಭಿಜಿನ್ ಲಗ್ನದಲ್ಲಿ ಅರಂಭವಾದ ಗಣಪತಿ ರಥಕ್ಕೆ ಸಾವಿರಾರು ಭಕ್ತರು ಬಾಳೆಹಣ್ಣು ಎಸೆದು ಭಕ್ತಿಭಾವ ಮೆರೆದರು. ಇದಕ್ಕೂ ಮೊದಲು ದೇವಾಲಯದ ಒಳಗಿನಿಂದ ಬೆಳ್ಳಿಯ ಗಣಪತಿ ಉತ್ಸವ ಮೂರ್ತಿಯನ್ನು ಹೊರಗೆ ತರುತ್ತಿದ್ದಂತೆ ನೆರೆದಿದ್ದ ಸಾವಿರಾರು ಭಕ್ತರು ಗಣಪತಿಬಪ್ಪಾ ಮೋರಿಯಾ ಎಂದು ಕೂಗಿ ಹರ್ಷೋದ್ಘಾರ ವ್ಯಕ್ತಪಡಿಸಿದರು.
Advertisement
Advertisement
ದೇವಾಲಯ ಮುಂಭಾಗ ನೂರಾರು ಅಯ್ಯಪ್ಪ ಭಕ್ತ ಮಾಲಾಧಾರಿಗಳು ಓಂ ಆಕಾರದಲ್ಲಿ ಕರ್ಪೂರ ಹಚ್ಚಿ ಭಜಿಸಿದರು. ಒಂದುಗಂಟೆಗೆ ಸರಿಯಾಗಿ ಆರಂಭವಾದ ರಥೋತ್ಸವಕ್ಕೆ ಸಾವಿರಾರು ಭಕ್ತರು ತೆಂಗಿನ ಕಾಯಿಗಳನ್ನು ಈಡುಗಾಯಿ ಹೊಡೆದು ತಮ್ಮ ಇಷ್ಟಾರ್ಥಗಳು ಫಲಿಸಲೆಂದು ಹರಕೆ ತೀರಿಸಿದರು.
Advertisement
ಗಣಪತಿ ದೇವಾಲಯದಿಂದ ರಥಬೀದಿಯ ಮೂಲಕ ಆಂಜನೇಯ ದೇವಾಲಯದವರೆಗೆ ಸಾವಿರಾರು ಭಕ್ತರು ರಥ ಎಳೆದು ಭಕ್ತಿ ಮೆರೆದರು. ದೇಶದಲ್ಲಿಯೇ ಇದು ಪ್ರತೀ ವರ್ಷದ ಮೊದಲ ಮತ್ತು ಗಣಪತಿ ರಥೋತ್ಸವ ಎನ್ನೋದು ವಿಶೇಷ. ದೇವಾಲಯದ ಪ್ರಧಾನ ಅರ್ಚಕ ನಾಗೇಂದ್ರ ಬಾಬು ನೇತೃತ್ವದಲ್ಲಿ ರಥೋತ್ಸವ ನೆರವೇರಿತು.