ನಟಿ ರಶ್ಮಿಕಾಗೆ ಭದ್ರತೆ ಕೊಡಿ – ಅಮಿತ್‌ ಶಾ, ಪರಮೇಶ್ವರ್‌ಗೆ ಕೊಡವ ಸಂಘಟನೆಯಿಂದ ಪತ್ರ

Public TV
1 Min Read
rashmika mandanna 2

– ರಶ್ಮಿಕಾ ಭಾರತೀಯ ಚಿತ್ರರಂಗಕ್ಕೆ ಸಿಕ್ಕಿರುವ ಅಪೂರ್ವ ಕೊಡುಗೆ ಎಂದ ಕೊಡವ ಮುಖಂಡ

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಕೊಡವ ಸಂಘಟನೆಯಿಂದ (Kodava Organization) ಪತ್ರ ಬರೆಯಲಾಗಿದೆ.

kodava nachappa

ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ (NU Nachappa) ಅವರು, ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉಗ್ರ ಪೀಡಿತ ಪ್ರದೇಶದಿಂದ ನಾಪತ್ತೆಯಾಗಿದ್ದ ಬಾಲಕ ಸೇರಿ ಮೂವರ ಶವ ಪತ್ತೆ – ಭಯೋತ್ಪಾದಕ ಕೃತ್ಯ ಎಂದ ಬಿಜೆಪಿ

rashmika mandanna 1 4

ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರಿಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ದೂರಿದ್ದಾರೆ.

rashmika

ರಶ್ಮಿಕಾ ಮಂದಣ್ಣ ಭಾರತೀಯ ಚಲನಚಿತ್ರರಂಗಕ್ಕೆ ಸಿಕ್ಕಿರುವ ಅಪೂರ್ವ ಕೊಡುಗೆ. ಅವರು ಶ್ರೇಷ್ಠ ನಟಿ ಅನ್ನೋದ್ರಲ್ಲಿ ಎರಡು ಮಾತಿಲ್ಲ. ನಟಿ ಸ್ವಂತ ನಿರ್ಧಾರ ಹಾಗೂ ಆಕೆಯ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವೆಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ಯಾರೋ ಒಬ್ಬರ ಸೂಚನೆಯಂತೆ, ನಿರೀಕ್ಷೆಯಂತೆ ಇರಬೇಕು ಎಂದು ಒತ್ತಡ ಹೇರಬಾರದು. ರಶ್ಮಿಕಾ ಅವರು ಕೊಡವ ಸಮಾಜಕ್ಕೆ ಸೇರಿರುವ ಕಾರಣದಿಂದಲೇ ಹೀಗೆಲ್ಲ ನಡೆದುಕೊಳ್ಳುತ್ತಿದ್ದಾರೆ ಎಂಬ ಅರ್ಥ ಬರುತ್ತದೆ ಎಂದು ಪತ್ರದಲ್ಲಿ ತಿಳಿದ್ದಾರೆ.  ಇದನ್ನೂ ಓದಿ: ಫರಂಗಿಪೇಟೆ ಅಪ್ರಾಪ್ತ ವಿದ್ಯಾರ್ಥಿ ನಾಪತ್ತೆ ಪ್ರಕರಣ – 12 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆ

Share This Article