ಜನ, ಜನರ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗ್ತಾರೆ: ಕೋಡಿ ಶ್ರೀ

Public TV
1 Min Read
KODIMUTT

ಹಾಸನ: ಬಾಂಬ್‍ಗಳು, ಭೂಕಂಪ (EarthQuake), ಯುದ್ಧಭೀತಿ ಹೆಚ್ಚಾಗುತ್ತೆ, ಜನ ಜನರ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುವರು ಎಂದು ಹಾಸನದ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Shree) ಭವಿಷ್ಯ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಮಧ್ಯಬಾಗಿಲಿನಿಂದ ಪ್ರಾರಂಭವಾಗಿ ಕಾರ್ತಿಕ ಮಾರ್ಗಶಿರ, ಜನವರಿ ಪ್ರಥಮದಲ್ಲಿಯೂ ಲೋಕಕ್ಕೆ ಕಂಟಕವಿದೆ. ಪ್ರಾಕೃತಿಕವಾಗಿ, ಪ್ರಾದೇಶಿಕವಾಗಿ, ಇರಬಹುದು, ಭೂಕಂಟಕ ಇರಬಹುದು, ರಾಜಬೀದಿ ಇರಬಹುದು,  ಜನ ಜನರ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುವುದು, ದೇಹ ಅಶಕ್ತಿಯಿಂದ ದಾರಿಯಲ್ಲಿ ಬಿದ್ದು ಸಾಯುವುದು, ಅಂಗಾಂಗಗಳ ಮೇಲೆ ಪ್ರಭಾವ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ರೋಜ್‌ಗಾರ್ ಮೇಳಕ್ಕೆ ಮೋದಿ ಚಾಲನೆ- 75,000 ಯುವಕರಿಗೆ ಸಿಕ್ತು ಸರ್ಕಾರಿ ಉದ್ಯೋಗ

ಜಾಗತಿಕ ದೋಷ, ರಾಷ್ಟ್ರೀಯ ದೋಷವೂ ಹೆಚ್ಚಾಗಿದೆ. ಎರಡು, ಮೂರು ತಿಂಗಳು ಮನುಷ್ಯರು ದೈವ, ಭಕ್ತಿಯಿಂದ, ನಂಬಿಕೆಯಿಂದ ಇರುವುದು ಬಹಳ ಮುಖ್ಯ. ಕಾರ್ತಿಕದವರೆಗೂ ಮಳೆ ಇರುತ್ತೆ. ಮಠದಲ್ಲಿ ಜನವರಿಯವರೆಗೂ ಬೆಳಿಗ್ಗೆ, ಸಂಜೆ, ಮಹಾರುದ್ರಜಪವನ್ನು ಪ್ರಾರಂಭ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಮೊದಲು ತಮ್ಮ ಮನೆ ಸರಿಮಾಡಿಕೊಳ್ಳಲಿ – ಕರಂದ್ಲಾಜೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *