ಬೆಂಗಳೂರು: ಸೋಮವಾರ ಭಾರತ್ ಬಂದ್ಗೆ ರೈತ ಸಂಘಟನೆಗಳು ಕರೆ ನೀಡಿದೆ. ಕೇಂದ್ರ ಸರ್ಕಾರದ ಖಾಸಗೀಕರಣದ ನೀತಿ ರೈತರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಭಾರತ್ ಬಂದ್ ನಡೆಯುತ್ತಿದೆ. ಇದನ್ನೂ ಓದಿ: ಖಾದಿ ಉತ್ಪನ್ನ ಖರೀದಿಸುವಂತೆ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಎಂಟಿಬಿ ನಾಗರಾಜ್ ಮನವಿ
ಕರ್ನಾಟಕದಲ್ಲೂ ರೈತ ನಾಯಕರು ಬಂದ್ಗೆ ಬೆಂಬಲ ಸೂಚಿಸಿದ್ದು, ಸೋಮವಾರ ಸಂಪೂರ್ಣ ಬಂದ್ ಮಾಡಲು ಸಜ್ಜಾಗಿದ್ದಾರೆ. ಆದರೇ ರಾಜ್ಯದಲ್ಲಿ ಸಾಕಷ್ಟು ಸಂಘ ಸಂಸ್ಥೆಗಳು ಬಂದ್ಗೆ ನೈತಿಕ ಬೆಂಬಲವನ್ನು ಸೂಚಿಸಿದ್ದಾರೆ. ನೈತಿಕ ಬೆಂಬಲದಿಂದ ಬಂದ್ ಯಶಸ್ವಿಯಾಗುವುದಿಲ್ಲ ಅಂತ ಮನಗಂಡ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಂಗಳೂರಿನ ನಾನಾ ಕಡೆ ಭೇಟಿ ನೀಡಿ ಬಂದ್ಗೆ ಬೆಂಬಲ ನೀಡಿ ಎಂದು ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ: 90 ವರ್ಷದ ಅಜ್ಜಿ ಕಾರ್ ಡ್ರೈವಿಂಗ್ -ಪ್ರಯತ್ನ ಶ್ಲಾಘಿಸಿದ ಸಿಎಂ
ಬೆಳ್ಳಂಬೆಳಗ್ಗೆಯೇ ಕೆಆರ್ ಪುರಂನ ಮಾರುಕಟ್ಟೆಗೆ ಭೇಟಿ ನೀಡಿದ ಕೋಡಿ ಹಳ್ಳಿ ಚಂದ್ರಶೇಖರ್ ಅವರು, ಅಲ್ಲಿನ ವ್ಯಾಪರಿಗಳೊಂದಿಗೆ ಸಭೆ ಮಾಡಿ ಬಂದ್ ಮಾಡುತ್ತಿರುವ ಉದ್ದೇಶವೇನು ಎಂಬುವುದರ ಬಗ್ಗೆ ತಿಳಿಸಿದ್ದಾರೆ. ಜೊತೆಗೆ ನೈತಿಕ ಬೆಂಬಲ ಆಗುವುದಿಲ್ಲ. ನೈತಿಕತೆಯ ಬೆಂಬಲ ಬೇಕು. ಎಲ್ಲರೂ ಸೋಮವಾರ ಬಂದ್ಗೆ ಸಹಕಾರ ನೀಡಬೇಕು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.