ಕೊಹ್ಲಿ ಮತ್ತೆ ನಾಯಕನಾಗಲು ಇದೇ ಕಾರಣ – ನೋವಿನಲ್ಲೂ RCB ತಂಡಕ್ಕಾಗಿ ಅಬ್ಬರಿಸಿದ ಡುಪ್ಲೆಸಿಸ್‌

Public TV
2 Min Read
IPL RCB 6

ಮೊಹಾಲಿ: ಇಲ್ಲಿನ ಐಎಸ್‌ ಬಿಂದ್ರಾ ಕ್ರೀಡಾಂಗಣದಲ್ಲಿ ಗುರುವಾರ ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ ನಡೆದ ಪಂದ್ಯದಲ್ಲಿ ಮತ್ತೆ ಆರ್‌ಸಿಬಿ (Royal Challengers Bangalore) ನಾಯಕನಾಗಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ (Virat Kohli) ಅರ್ಧಶತಕ ಸಿಡಿಸಿ ಮಿಂಚಿದರು.

2022ರ ಐಪಿಎಲ್‌ ಟೂರ್ನಿ ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡದ ನಾಯಕತ್ವ ತೊರೆದಿದ್ದ ವಿರಾಟ್‌ ಮತ್ತೆ ನಾಯಕನಾಗಿ ಕಣಕ್ಕಿಳಿದಿದ್ದು, ಅಭಿಮಾನಿಗಳಲ್ಲಿ ಖುಷಿ ಹೆಚ್ಚಿಸಿತ್ತು. ಈ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡದಿಂದಲೂ ನಾಯಕ ಶಿಖರ್‌ ಧವನ್‌ ಆಟದಿಂದ ಹೊರಗುಳಿದಿದ್ದರು. ಇದನ್ನೂ ಓದಿ: ಕ್ಯಾಪ್ಟನ್‌ ಕೊಹ್ಲಿ, ಡುಪ್ಲೆಸಿಸ್‌ ಶತಕದಾಟಕ್ಕೆ ಪಂಜಾಬ್‌ ಪಂಚರ್‌ – RCBಗೆ 24 ರನ್‌ಗಳ ಭರ್ಜರಿ ಜಯ

Virat Kohli 1

ಹೌದು. ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಶಿಖರ್ ಧವನ್ ಹಾಗೂ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಇಬ್ಬರೂ ಗಾಯದ ಸಮಸ್ಯೆಗೊಳಗಾಗಿದ್ದರು. ಶಿಖರ್ ಧವನ್ ಸಂಪೂರ್ಣ ಪಂದ್ಯದಿಂದ ಹೊರಗುಳಿದಿದ್ದರೆ, ಫಾಫ್ ಡು ಪ್ಲೆಸಿಸ್, ವಿಜಯ್ ಕುಮಾರ್ ವೈಶಾಖ್ ಬದಲಾಗಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದು ಬ್ಯಾಟ್‌ ಬೀಸಿದರು. ಫೀಲ್ಡಿಂಗ್‌ನಲ್ಲಿ ಹೊರಗುಳಿದು ವಿಶ್ರಾಂತಿ ತೆಗೆದುಕೊಂಡರು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗಾಯದ ಸಮಸ್ಯೆಗೆ ಒಳಗಾಗಿದ್ದ ಡುಪ್ಲೆಸಿಸ್‌ ಮಧ್ಯದಲ್ಲಿ ಹೊಟ್ಟೆಗೆ ಬ್ಯಾಂಡೇಜ್‌ ಕಟ್ಟಿಸಿಕೊಂಡೇ ಕಣದಲ್ಲಿ ಅಬ್ಬರಿಸಿದ್ದರು. ಗುರುವಾರ ಗಾಯದ ಸಮಸ್ಯೆ ಇದ್ದರೂ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಾಣಿಸಿಕೊಂಡ ಡು ಪ್ಲೆಸಿಸ್‌ 150 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ 56 ಎಸೆತಗಳಲ್ಲಿ 84 ರನ್‌ ಗಳಿಸಿ, ತಂಡ ಬೃಹತ್‌ ಮೊತ್ತ ಗಳಿಸಲು ಕಾರಣರಾದರು. ಫಾಫ್‌ ಡು ಪ್ಲೆಸಿಸ್‌ ಫೀಲ್ಡಿಂಗ್‌ನಲ್ಲಿ ಹೊರಗುಳಿಯಬೇಕಿದ್ದ ಕಾರಣ ವಿರಾಟ್‌ ಕೊಹ್ಲಿ ನಾಯಕತ್ವ ವಹಿಸಿಕೊಂಡಿದ್ದರು.

Royal Challengers Bangalore

ಈ ಕುರಿತು ಮಾತನಾಡಿದ್ದ ವಿರಾಟ್‌ ಕೊಹ್ಲಿ ಟಾಸ್‌ ಮುಗಿದ ಬಳಿಕ ಡುಪ್ಲೆಸಿಸ್ ಗಾಯಕ್ಕೊಳಗಾಗಿರುವ ವಿಷಯ ಬಿಚ್ಚಿಟ್ಟಿದ್ದರು. ಅವರು ಫೀಲ್ಡಿಂಗ್‌ ಮಾಡಲಾಗದ ಕಾರಣ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೇ ನಾವು ಮೊದಲು ಬ್ಯಾಟಿಂಗ್‌ ಮಾಡಬೇಕೆಂದು ಬಯಸಿದ್ದೆವು. ಅದೇ ನಮಗೆ ಸಿಕ್ಕಿದೆ ಎಂದು ಹೇಳಿದ್ದರು. ಇದನ್ನೂ ಓದಿ: RCBvsCSK ರಣರೋಚಕ ಪಂದ್ಯದಲ್ಲಿ ಎರಡೆರಡು ದಾಖಲೆ ಉಡೀಸ್‌

ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರ್ರನ್ (SamCurran) ಸಹ ಮಾತನಾಡಿದ್ದು, ಕಳೆದ ಪಂದ್ಯದಂತೆ ಈ ಪಂದ್ಯದಲ್ಲಿಯೂ ಮೊದಲು ಬೌಲಿಂಗ್ ಮಾಡುವ ಆಯ್ಕೆ ಉತ್ತಮ ಎನಿಸಿತ್ತು ಎಂದಿದ್ದರು. ಜೊತೆಗೆ ಶಿಖರ್‌ ಧವನ್ ಈ ದಿನ ಕಣಕ್ಕಿಳಿಯುತ್ತಿಲ್ಲ ಎಂಬುದನ್ನೂ ಅವರು ಖಚಿತಪಡಿಸಿದ್ದರು.

405c1639 4296 4beb bdb4 5d3420a09021

ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತ್ತು. 175 ರನ್‌ಗಳ ಗುರಿ ಬೆನ್ನತ್ತಿದ್ದ ಪಂಜಾಬ್‌ ಕಿಂಗ್ಸ್‌ 18.2 ಓವರ್‌ಗಳಲ್ಲೇ 150 ರನ್‌ಗಳಿಗೆ ಸರ್ವಪತನ ಕಂಡು, ಆರ್‌ಸಿಬಿ ಎದುರು ಮಂಡಿಯೂರಿತು.

Share This Article