– ‘ನನ್ನನ್ನು ಬಲಿ ತೆಗೆದುಕೊಂಡು ಬಿಡಿ’
ಕೋಲಾರ: ಮಾನಸಿಕ ಅಸ್ವಸ್ಥ ಮುಸ್ಲಿಂ ಯುವಕನೊಬ್ಬ ದೇವಾಲಯಕ್ಕೆ ನುಗ್ಗಿ ರಂಪಾಟ ನಡೆಸಿದ ಘಟನೆ ಕೋಲಾರದಲ್ಲಿ ನಡೆದಿದೆ.
ನಗರದ ನಿವಾಸಿ ಸಿಕಂದರ್ ಬೇಗ್, ಕೋಲಾರ ನಗರದ ಕುರುಬರಪೇಟೆಯಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಕ್ಕೆ ನುಗ್ಗಿ ಗಲಾಟೆ ಮಾಡಿದ್ದಾನೆ. ಅಲ್ಲದೆ ಕೆಲಕಾಲ ಗೊಂದಲ ಸೃಷ್ಟಿ ಮಾಡಿದ್ದಾನೆ.
ಕಳೆದ ಹಲವು ದಿನಗಳಿಂದ ಮಾನಸಿಕ ತೊಂದರೆಗೆ ಒಳಗಾಗಿರುವ ಈತ ಆಂಜನೇಯಸ್ವಾಮಿ ದೇವಾಲಯದ ಗರ್ಭಗುಡಿ ಪ್ರವೇಶಿಸಿ ‘ನನ್ನನ್ನು ಬಲಿ ತೆಗೆದುಕೊಂಡು ಬಿಡಿ’ ಎಂದು ಕೂಗಾಟ ಚೀರಾಟ ನಡೆಸಿ ಹುಚ್ಚಾಟ ಮೆರೆದಿದ್ದಾನೆ.
ಆತನನ್ನು ಬಂಧಿಸುವಂತೆ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಬಂದ ಕೋಲಾರ ನಗರ ಪೊಲೀಸರು ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರಲ್ಲದೆ ಯುವಕನನ್ನ ಬಂಧಿಸಿದ್ದಾರೆ.
ದೇವಾಲಯದಿಂದ ಯುವಕ ಹೊರ ಹೋಗುತ್ತಿದ್ದಂತೆಯೇ ಸ್ಥಳದಲ್ಲಿದ್ದ ಜನರನ್ನ ಸಮಾಧಾನಪಡಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದೇವಾಲಯದ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.