ಕೋಲಾರ: ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ತಂದೆ ಮಗ ಇಬ್ಬರು ಮೃತಪಟ್ಟಿರುವ ಘಟನೆ ಗಡಿ ಭಾಗದ ಆಂಧ್ರದ ಕುಪ್ಪಂ ಬಳಿ ನಡೆದಿದೆ.
ಅಪಘಾತದಲ್ಲಿ ತಂದೆ ಮಗ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತಂದೆ ಮಗ ಇಬ್ಬರು ಲಗ್ನ ಪತ್ರಿಕೆ ನೀಡಲು ಬೈಕ್ ನಲ್ಲಿ ಹೋಗುತ್ತಿದ್ದು ಈ ವೇಳೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಂಗಾರಪೇಟೆ ತಾಲೂಕಿನ ಚಿಕ್ಕತುಮಟಗೆರೆ ಗ್ರಾಮದ ವೆಂಕಟೇಶ್ (57), ಕನಕರಾಜ್ (27)ಗೆ ಮೃತಪಟ್ಟ ತಂದೆ ಹಾಗೂ ಮಗ. ತನ್ನ ದೊಡ್ಡ ಮಗನ ವಿವಾಹ ಪತ್ರಿಕೆಗಳನ್ನು ಹಂಚಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಮೃತರ ದೇಹಗಳು ಕೆಜಿಎಫ್ ಸರ್ಕಾರಿ ಶವಗಾರಕ್ಕೆ ಬಂದಿದ್ದು, ಸ್ಥಳದಲ್ಲಿ ಸಂಬಂಧಿಕರು ಆಕ್ರಂದನ ಮುಗಿಲು ಮುಟ್ಟಿದೆ. ಮಾರಿಕುಪ್ಪಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.