ಚಾಲಕನ ನಿರ್ಲಕ್ಷ್ಯ – ಎರಡು ಬಸ್ ಮಧ್ಯೆ ಸಿಲುಕಿ ವಿದ್ಯಾರ್ಥಿನಿ ಅಪ್ಪಚ್ಚಿ

Public TV
1 Min Read
collage klr student death 1

ಕೋಲಾರ: ಚಾಲಕನ ನಿರ್ಲಕ್ಷ್ಯದಿಂದ ವಿದ್ಯಾರ್ಥಿಯೊರ್ವಳು ಎರಡು ಬಸ್ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿರುವ ಘಟನೆ ಕೋಲಾರದ ಮಾಲೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಮಾಲೂರು ತಾಲೂಕಿನ ಲಕ್ಕೂರು ಹೋಬಳಿಯ ತಾಳುಕುಂಟೆ ಗ್ರಾಮದ ನಿವಾಸಿ ದೀಪಿಕಾ (16) ಎಂದು ಗುರುತಿಸಲಾಗಿದೆ. ಕಾಲೇಜು ಮುಗಿಸಿ ಮನೆಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದ ದೀಪಿಕಾ ಬಸ್ ಕಡೆ ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ, ಬಸ್ ನಿಲ್ದಾಣದಲ್ಲಿ ಹಿಂದೆ ಮುಂದೆ ನಿಂತಿದ್ದ ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಹೋಗಿದ್ದಾಳೆ. ಈ ವೇಳೆ ವಿದ್ಯಾರ್ಥಿನಿಯನ್ನು ಗಮನಿಸದ  ಚಾಲಕ ಖಾಸಗಿ ಬಸ್ ಚಲಾಯಿಸಿದ್ದಾನೆ. ಪರಿಣಾಮ ಎರಡು ಬಸ್ಸು ಮಧ್ಯೆ ಸಿಲುಕಿದ ದೀಪಿಕಾ ಅಪ್ಪಚ್ಚಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

klr student death

ಈ ಘಟನೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಮಾಲೂರು ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ ಮತ್ತು ವಿದ್ಯಾರ್ಥಿನಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡಿದರು. ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *