ನೇಣು ಹಾಕಿಕೊಂಡಿದ್ದ ಮರದ ಕೊಂಬೆ ಮುರಿದಿದ್ದಕ್ಕೆ ಕೆರೆಗೆ ಜಿಗಿದು ಪ್ರಾಣಬಿಟ್ಟ ಶಿಕ್ಷಕ

Public TV
1 Min Read
KLR Main

ಕೊಲಾರ: ನೇಣು ಹಾಕಿಕೊಂಡಿದ್ದ ಮರದ ಕೊಂಬೆ ಮುರಿದಿದ್ದಕ್ಕೆ ಶಿಕ್ಷಕನೊಬ್ಬ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ತಾಲೂಕಿನ ಕಾಳಹಸ್ತಿಪುರದಲ್ಲಿ ನಡೆದಿದೆ.

ಭಟ್ರಹಳ್ಳಿ ಗ್ರಾಮದ ಪ್ರಭಾಕರ್ (31) ಆತ್ಮಹತ್ಯೆ ಶರಣಾದ ಶಿಕ್ಷಕ. ಪ್ರಭಾಕರ್ ಯಾದಗಿರಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಊರಹಬ್ಬಕ್ಕಾಗಿ ಪ್ರಭಾಕರ್ ಸ್ವಗ್ರಾಮಕ್ಕೆ ಬಂದಿದ್ದ. ಜೊತೆಗೆ ಮನೆತನ ನೋಡಲು ಹೆಣ್ಣಿನ ಮನೆಯವರು ಬರುತ್ತಾರೆ ಅಂತ ಪ್ರಭಾಕರ್ ಮನೆಗೆ ಬೇಕಾದ ಸಾಮಗ್ರಿಗಳನ್ನು ತಂದು ಕೊಟ್ಟಿದ್ದ. ಆದರೆ ಬುಧವಾರ ಹೆಣ್ಣಿನ ಮನೆಯವರು ಬರುವುದಕ್ಕೂ ಮುನ್ನ ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ತನ್ನ ಮೊಬೈಲ್ ಅನ್ನು ತಮ್ಮನ ಕೈಗೆ ಕೊಟ್ಟು ಹೋಗಿದ್ದ.

KLR A

ಮನೆಗೆ ಬಂದಿದ್ದ ಹುಡುಗಿ ಮನೆಯವರು ಕಾದು ಕಾದು ಮರಳಿ ತಮ್ಮ ಊರಿಗೆ ಹೋದರು. ಆದರೆ ಪ್ರಭಾಕರ್ ಮನೆಗೆ ಬಾರದೆ ಇರುವುದರಿಂದ ಆತನಿಗಾಗಿ ಕುಟುಂಬಸ್ಥರು ಹುಡುಕಾಟ ಆರಂಭಿಸಿದರು. ಕಾಳಹಸ್ತಿಪುರ ಗ್ರಾಮದ ಕೆರೆಯ ಬಳಿ ಗುರುವಾರ ಪ್ರಭಾಕರ್ ಬೈಕ್ ಮತ್ತು ಚಪ್ಪಲಿ ಪತ್ತೆಯಾಗಿದ್ದವು. ಈ ವಿಷಯ ತಿಳಿದ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸ್ಥಳ ಪರಿಶೀಲನೆ ಮಾಡಿದಾಗ ಪ್ರಭಾಕರ್ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿ, ಮೃತದೇಹ ಪತ್ತೆಗಾಗಿ ಕಾರ್ಯಚರಣೆ ನಡೆಸಿದರು. ಕೆರೆಯಲ್ಲಿ ಬೋಟ್ ಸಹಾಯದಿಂದ ಸುಮಾರು ಎರಡು ಗಂಟೆಗಳ ಹುಡುಕಾಟ ನಡೆಸಿದಾಗ ಪ್ರಭಾಕರ್ ಶವ ಪತ್ತೆಯಾಗಿದೆ.

ಪ್ರಭಾಕರ್ ಕೆರೆಗೆ ಬೀಳುವ ಮುನ್ನ ಮರಕ್ಕೆ ಹಗ್ಗ ಕಟ್ಟಿ ನೇಣುಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ ಮರದ ಕೊಂಬೆ ತುಂಡಾಗಿದ್ದರಿಂದ ಬೇರೆ ದಾರಿ ಕಾಣದೆ ಕಾಳಹಸ್ತಿಪುರ ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

KLR C

ಪ್ರಭಾಕರ್ ಇದಕ್ಕೂ ಮೊದಲು ಎರಡ್ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿ ಏನು ಇಲ್ಲದಿದ್ದರೂ ಅವನಿಗೆ ಸಂಬಂಧಿಕರೇ ಮಾಟ ಮಂತ್ರ ಮಾಡಿಸಿದ್ದರು. ಹಾಗಾಗಿ ಅವನ ಮನಸ್ಥಿತಿ ಕೆಟ್ಟುಹೋಗಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದ. ಹಲವಾರು ಬಾರಿ ನಾವು ಅವನನ್ನ ಕಾಪಾಡಿಕೊಂಡಿದ್ದೆವು ಎಂದು ಪೋಷಕರು ದೂರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *