Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಬೆಳಗ್ಗೆ ಮದುವೆ, ಮಧ್ಯಾಹ್ನ ಹೊಡೆದಾಡಿಕೊಂಡು ನವಜೋಡಿ ಸಾವು ಕೇಸ್‌ಗೆ ಟ್ವಿಸ್ಟ್‌ – ವಧು ಕೊಂದು ವರನೂ ಆತ್ಮಹತ್ಯೆ

Public TV
Last updated: August 10, 2024 10:37 pm
Public TV
Share
3 Min Read
kolar bride and groom clash
SHARE

– ಕೊಲೆಗೆ ಕಾರಣ, ಉದ್ದೇಶಕ್ಕಾಗಿ ಕೆಜಿಎಫ್‌ ಪೊಲೀಸರಿಂದ ತನಿಖೆ ಚುರುಕು

ಕೋಲಾರ: ಬೆಳಗ್ಗೆ ಮದುವೆಯಾಗಿ ಮಧ್ಯಾಹ್ನ ಮಚ್ಚಿನಿಂದ ಹೊಡೆದಾಡಿಕೊಂಡು ನವಜೋಡಿ ಸಾವಿಗೀಡಾದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ವರನ ಕ್ರೌರ್ಯದಿಂದಾಗಿ ಮದುವೆಯಾದ ದಿನವೇ ಜೋಡಿ ಭೀಕರವಾಗಿ ಸಾವಿಗೀಡಾಗಿದ್ದಾರೆ.

ಮದುವೆ ಸಂಭ್ರಮ ಮೇಳೈಸಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ, ಕಣ್ಣೀರು. ವರನ ಸಮಾಧಿಗೆ ಮೂರನೇ ದಿನದ ಹಾಲು ತುಪ್ಪ ಹಾಕಿ ಸಂಬಂಧಿಕರು ಕಣ್ಣೀರು ಸುರಿಸುತ್ತಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬಾರಸನಹಳ್ಳಿ ಗ್ರಾಮದಲ್ಲಿ ನಡೆದಿದ್ದ ನವ ವಧು-ವರನ ನಿಗೂಢ ಸಾವಿನ ತನಿಖೆ ಚುರುಕುಗೊಂಡಿದೆ. ಇದನ್ನೂ ಓದಿ: ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಹೊಡೆದಾಟ – ನಿನ್ನೆ ವಧು, ಇಂದು ವರ ಸಾವು!

ನಿನ್ನೆ ವಧು ಲಿಖಿತಾಶ್ರೀ ಅವರ ಮೂರನೇ ದಿನದ ಹಾಲು ತುಪ್ಪ ಶಾಸ್ತ್ರ ಮುಗಿಸಿದ್ದರೆ, ಇಂದು ವರ ನವೀನ್ ಮೃತಪಟ್ಟು ಮೂರನೇ ದಿನವಾದ ಹಿನ್ನೆಲೆ ಸಮಾಧಿ ಬಳಿ ತೆರಳಿ ಹಾಲು ತುಪ್ಪ ಶಾಸ್ತ್ರ ಮುಗಿಸಿ ಬಂದಿದ್ದಾರೆ. ವರ ನವೀನ್ ಇಷ್ಟಪಟ್ಟು ಪ್ರೀತಿಸಿ ಲಿಖಿತಾಶ್ರೀಯನ್ನು ಮದುವೆ ಮಾಡಿಕೊಂಡಿದ್ದ. ಆದರೆ ಆ ಖುಷಿ ಉಳಿದಿದ್ದು ಕೆಲವೇ ಗಂಟೆಗಳು ಮಾತ್ರ. ಎಲ್ಲರಿಗೂ ಘಟನೆ ಬಗ್ಗೆ ಆತಂಕ ಇದೆ. ಜೊತೆಗೆ ಆಘಾತವೂ ಇದೆ. ಆಂಧ್ರದ ಸಂತೂರು ಗ್ರಾಮದ ನಿವಾಸಿಗಳಾದ ಮುನಿಯಪ್ಪ ಅವರ ಪುತ್ರ ನವೀನ್ ಕುಮಾರ್, ರಾಜ್‌ಪೇಟ್ ರಸ್ತೆಯಲ್ಲಿ ರೆಡಿಮೇಡ್ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ.

ತನ್ನ ಅಕ್ಕ ಪವಿತ್ರಾ ಮನೆ ಚಂಬಾರಸನಹಳ್ಳಿಯಲ್ಲಿ ಬಂದು ಕೆಲ ತಿಂಗಳುಗಳಿಂದ ನೆಲೆಸಿದ್ದ. ಕಳೆದ ಆರು ತಿಂಗಳ ಹಿಂದೆ ನವೀನ್ ತಾಯಿ ಆರೋಗ್ಯ ಸರಿ ಇಲ್ಲ ಎನ್ನುವ ಕಾರಣಕ್ಕೆ ನವೀನ್‌ಗೂ ಬೈನೇಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬವರ ಪುತ್ರಿ ಲಿಖಿತಾಶ್ರೀ ನಡುವೆ ಮದುವೆ ಮಾತುಕತೆ ನಡೆದಿತ್ತು. ಈ ನಡುವೆ ಆಷಾಢ ಬಂದ ಹಿನ್ನೆಲೆ ಮದುವೆ ಮಾತು ನಿಂತಿತ್ತು. ಆದರೆ ಇದ್ದಕ್ಕಿದಂತೆ ನವೀನ್ ಆ.6 ರಂದು ಅದೇ ಲಿಖಿತಾಶ್ರೀ ಜೊತೆಗೆ ನಾಳೆಯೇ ನನ್ನ ಮದುವೆ ಮಾಡಿಸಿ, ಇಲ್ಲವಾದರೆ ತಾನು ಸತ್ತೋಗ್ತಿನಿ ಎಂದು ಕುಟುಂಬಸ್ಥರಿಗೆ ಹೆದರಿಸಿದ್ದ. ಈ ವೇಳೆ ಹುಡುಗಿಯ ಒಪ್ಪಿಗೆಯೂ ಇದ್ದ ಕಾರಣ ಮನೆ ಬಳಿಯೇ ಪುರೋಹಿತರು, ಪೋಟೋಗ್ರಾಫರ್ ಇಲ್ಲದೆ ಸರಳವಾಗಿ ಮದುವೆ ಮಾಡಿದ್ದರು.

ನವೀನ್ ಬಗ್ಗೆ ಆತನ ತಂದೆ ಮಾತನಾಡಿದ್ದು, ನವೀನ್ ಮಾನಸಿಕ ಸ್ಥಿತಿ ಸರಿ ಇರಲಿಲ್ಲ. ಅವನಿಗೆ ತಿಂದ ಊಟ ವಾಂತಿಯಾಗುತ್ತಿತ್ತು. ಕೆಲವೊಮ್ಮೆ ಹೇಳದೆ ಕೇಳದೆ ಎಲ್ಲೆಂದರಲ್ಲಿ ಹೋಗುತ್ತಿದ್ದ. ಆ ಕಾರಣಕ್ಕೆ ನಾವು ವಾತಾವರಣ ಬದಲಾಗಲಿ ಎಂದು ಚಂಬಾರಸನಹಳ್ಳಿಗೆ ಕಳಿಸಿದ್ದೆವು. ಮದುವೆ ಮಾಡಿದ್ರೆ ಸರಿ ಹೋಗುತ್ತಾನೆಂದು ತಿಳಿದು ಮದುವೆ ಮಾಡಿದ್ದೆವು ಎನ್ನುತ್ತಿದ್ದಾರೆ. ಇದನ್ನೂ ಓದಿ: ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಮಾರಾಮಾರಿ.. ವಧು ಸಾವು, ವರ ಗಂಭೀರ!

ಮದುವೆ ನಂತರ ಚೆನ್ನಾಗಿಯೇ ಇದ್ದ ನವೀನ್ ಸಂಜೆ ವೇಳೆಗೆ ಇದ್ದಕ್ಕಿದಂತೆ ತನ್ನ ಪತ್ನಿ ಲಿಖಿತಾಶ್ರೀಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಘಟನೆ ಸಂಬಂಧ ಕೆಜಿಎಫ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಯಲ್ಲಿ ನವೀನ್ ಮೇಲೆ ಕೊಲೆ ಪ್ರಕರಣ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದು, ಘಟನೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದ್ಯ ನವೀನ್ ಹಾಗೂ ಲಿಖಿತಾಶ್ರೀ ಇಬ್ಬರ ಮೊಬೈಲ್ ಸೀಜ್ ಮಾಡಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಜೊತೆಗೆ ಅವರ ಕಾಲ್ ಡೀಟೇಲ್ಸ್ ಪರಿಶೀಲಿಸುತ್ತಿದ್ದಾರೆ.

ಕಳೆದೊಂದು ತಿಂಗಳಿಂದ ಇವರಿಬ್ಬರ ಜೊತೆಗೆ ಮಾತನಾಡಿದ್ದ ಸಂಬಂಧಿಕರು ಹಾಗೂ ಸ್ನೇಹಿತರು, ಆಪ್ತರನ್ನು ಕೂಡಾ ಕರೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅದೆಲ್ಲದರ ಜೊತೆಗೆ ನವೀನ್ ಮಾನಸಿಕ ಸ್ಥಿತಿ ಸರಿ ಇಲ್ಲಾ ಅನ್ನೋ ಕೆಲವು ಮಾಹಿತಿ ಇರುವ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಕುಟುಂಬಸ್ಥರು ಹಾಗೂ ಆಪ್ತರನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಅವನ ಮಾನಸಿಕ ಸ್ಥಿತಿಗೆ ಸಂಬಂಧಪಟ್ಟಂತೆ ಚಿಕಿತ್ಸೆ ಕೊಡಿಸಿರುವ ಬಗ್ಗೆಯೂ ಮಾಹಿತಿ ಕಲೆಹಾಕಲಾಗುತ್ತಿದೆ. ಎಲ್ಲಕ್ಕಿಂತ ಪ್ರಮುಖವಾಗಿ ಇಬ್ಬರಿಗೂ ಕೂಡಾ ಬೇರೆ ಯಾರ ಜೊತೆಗೆ ಪ್ರೀತಿ-ಪ್ರೇಮ ಅಥವಾ ಸಂಬಂಧ ಇತ್ತಾ ಅನ್ನೋದರ ಕುರಿತು ಬೇರೆ ಬೇರೆ ಆಯಾಮಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TAGGED:KolarNewlywed Couple
Share This Article
Facebook Whatsapp Whatsapp Telegram

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Bagalakote Rain 2
Bagalkot

ʻಮಹಾʼ ಮಳೆಗೆ ಮೈದುಂಬಿದ ಕೃಷ್ಣೆ, ಭೀಮಾ, ಘಟಪ್ರಭಾ ನದಿಗಳು – ಮುಳುಗಿದ ಸೇತುವೆ

Public TV
By Public TV
21 minutes ago
ELEPHANT
Districts

ಹಾಸನ | ನಾಯಿ ಬೊಗಳಿದ್ದಕ್ಕೆ ಕಾರನ್ನೇ ಎತ್ತಿ ಎಸೆದ ಒಂಟಿ ಸಲಗ!

Public TV
By Public TV
46 minutes ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಹೇಳಿಕೆ – ಶಾಸಕ ಯತ್ನಾಳ್‌ ವಿರುದ್ಧ FIR

Public TV
By Public TV
60 minutes ago
daily horoscope dina bhavishya
Bengaluru City

ದಿನ ಭವಿಷ್ಯ: 21-08-2025

Public TV
By Public TV
1 hour ago
Rekha Gupta 2
Latest

ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಹೇಡಿತನದ ಕೃತ್ಯ: ಹಲ್ಲೆ ಬಗ್ಗೆ ದೆಹಲಿ ಸಿಎಂ ರಿಯಾಕ್ಷನ್‌

Public TV
By Public TV
9 hours ago
Vijayapura
Districts

ಮಳೆಯಿಂದ ನಷ್ಟ ಅನುಭವಿಸಿದ 2 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ ಎಂ.ಬಿ ಪಾಟೀಲ್

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?