Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗ್ಗೆ ಮದುವೆ, ಮಧ್ಯಾಹ್ನ ಹೊಡೆದಾಡಿಕೊಂಡು ನವಜೋಡಿ ಸಾವು ಕೇಸ್‌ಗೆ ಟ್ವಿಸ್ಟ್‌ – ವಧು ಕೊಂದು ವರನೂ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬೆಳಗ್ಗೆ ಮದುವೆ, ಮಧ್ಯಾಹ್ನ ಹೊಡೆದಾಡಿಕೊಂಡು ನವಜೋಡಿ ಸಾವು ಕೇಸ್‌ಗೆ ಟ್ವಿಸ್ಟ್‌ – ವಧು ಕೊಂದು ವರನೂ ಆತ್ಮಹತ್ಯೆ

Crime

ಬೆಳಗ್ಗೆ ಮದುವೆ, ಮಧ್ಯಾಹ್ನ ಹೊಡೆದಾಡಿಕೊಂಡು ನವಜೋಡಿ ಸಾವು ಕೇಸ್‌ಗೆ ಟ್ವಿಸ್ಟ್‌ – ವಧು ಕೊಂದು ವರನೂ ಆತ್ಮಹತ್ಯೆ

Public TV
Last updated: August 10, 2024 10:37 pm
Public TV
Share
3 Min Read
kolar bride and groom clash
SHARE

– ಕೊಲೆಗೆ ಕಾರಣ, ಉದ್ದೇಶಕ್ಕಾಗಿ ಕೆಜಿಎಫ್‌ ಪೊಲೀಸರಿಂದ ತನಿಖೆ ಚುರುಕು

ಕೋಲಾರ: ಬೆಳಗ್ಗೆ ಮದುವೆಯಾಗಿ ಮಧ್ಯಾಹ್ನ ಮಚ್ಚಿನಿಂದ ಹೊಡೆದಾಡಿಕೊಂಡು ನವಜೋಡಿ ಸಾವಿಗೀಡಾದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ವರನ ಕ್ರೌರ್ಯದಿಂದಾಗಿ ಮದುವೆಯಾದ ದಿನವೇ ಜೋಡಿ ಭೀಕರವಾಗಿ ಸಾವಿಗೀಡಾಗಿದ್ದಾರೆ.

ಮದುವೆ ಸಂಭ್ರಮ ಮೇಳೈಸಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ, ಕಣ್ಣೀರು. ವರನ ಸಮಾಧಿಗೆ ಮೂರನೇ ದಿನದ ಹಾಲು ತುಪ್ಪ ಹಾಕಿ ಸಂಬಂಧಿಕರು ಕಣ್ಣೀರು ಸುರಿಸುತ್ತಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬಾರಸನಹಳ್ಳಿ ಗ್ರಾಮದಲ್ಲಿ ನಡೆದಿದ್ದ ನವ ವಧು-ವರನ ನಿಗೂಢ ಸಾವಿನ ತನಿಖೆ ಚುರುಕುಗೊಂಡಿದೆ. ಇದನ್ನೂ ಓದಿ: ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಹೊಡೆದಾಟ – ನಿನ್ನೆ ವಧು, ಇಂದು ವರ ಸಾವು!

ನಿನ್ನೆ ವಧು ಲಿಖಿತಾಶ್ರೀ ಅವರ ಮೂರನೇ ದಿನದ ಹಾಲು ತುಪ್ಪ ಶಾಸ್ತ್ರ ಮುಗಿಸಿದ್ದರೆ, ಇಂದು ವರ ನವೀನ್ ಮೃತಪಟ್ಟು ಮೂರನೇ ದಿನವಾದ ಹಿನ್ನೆಲೆ ಸಮಾಧಿ ಬಳಿ ತೆರಳಿ ಹಾಲು ತುಪ್ಪ ಶಾಸ್ತ್ರ ಮುಗಿಸಿ ಬಂದಿದ್ದಾರೆ. ವರ ನವೀನ್ ಇಷ್ಟಪಟ್ಟು ಪ್ರೀತಿಸಿ ಲಿಖಿತಾಶ್ರೀಯನ್ನು ಮದುವೆ ಮಾಡಿಕೊಂಡಿದ್ದ. ಆದರೆ ಆ ಖುಷಿ ಉಳಿದಿದ್ದು ಕೆಲವೇ ಗಂಟೆಗಳು ಮಾತ್ರ. ಎಲ್ಲರಿಗೂ ಘಟನೆ ಬಗ್ಗೆ ಆತಂಕ ಇದೆ. ಜೊತೆಗೆ ಆಘಾತವೂ ಇದೆ. ಆಂಧ್ರದ ಸಂತೂರು ಗ್ರಾಮದ ನಿವಾಸಿಗಳಾದ ಮುನಿಯಪ್ಪ ಅವರ ಪುತ್ರ ನವೀನ್ ಕುಮಾರ್, ರಾಜ್‌ಪೇಟ್ ರಸ್ತೆಯಲ್ಲಿ ರೆಡಿಮೇಡ್ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ.

ತನ್ನ ಅಕ್ಕ ಪವಿತ್ರಾ ಮನೆ ಚಂಬಾರಸನಹಳ್ಳಿಯಲ್ಲಿ ಬಂದು ಕೆಲ ತಿಂಗಳುಗಳಿಂದ ನೆಲೆಸಿದ್ದ. ಕಳೆದ ಆರು ತಿಂಗಳ ಹಿಂದೆ ನವೀನ್ ತಾಯಿ ಆರೋಗ್ಯ ಸರಿ ಇಲ್ಲ ಎನ್ನುವ ಕಾರಣಕ್ಕೆ ನವೀನ್‌ಗೂ ಬೈನೇಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬವರ ಪುತ್ರಿ ಲಿಖಿತಾಶ್ರೀ ನಡುವೆ ಮದುವೆ ಮಾತುಕತೆ ನಡೆದಿತ್ತು. ಈ ನಡುವೆ ಆಷಾಢ ಬಂದ ಹಿನ್ನೆಲೆ ಮದುವೆ ಮಾತು ನಿಂತಿತ್ತು. ಆದರೆ ಇದ್ದಕ್ಕಿದಂತೆ ನವೀನ್ ಆ.6 ರಂದು ಅದೇ ಲಿಖಿತಾಶ್ರೀ ಜೊತೆಗೆ ನಾಳೆಯೇ ನನ್ನ ಮದುವೆ ಮಾಡಿಸಿ, ಇಲ್ಲವಾದರೆ ತಾನು ಸತ್ತೋಗ್ತಿನಿ ಎಂದು ಕುಟುಂಬಸ್ಥರಿಗೆ ಹೆದರಿಸಿದ್ದ. ಈ ವೇಳೆ ಹುಡುಗಿಯ ಒಪ್ಪಿಗೆಯೂ ಇದ್ದ ಕಾರಣ ಮನೆ ಬಳಿಯೇ ಪುರೋಹಿತರು, ಪೋಟೋಗ್ರಾಫರ್ ಇಲ್ಲದೆ ಸರಳವಾಗಿ ಮದುವೆ ಮಾಡಿದ್ದರು.

ನವೀನ್ ಬಗ್ಗೆ ಆತನ ತಂದೆ ಮಾತನಾಡಿದ್ದು, ನವೀನ್ ಮಾನಸಿಕ ಸ್ಥಿತಿ ಸರಿ ಇರಲಿಲ್ಲ. ಅವನಿಗೆ ತಿಂದ ಊಟ ವಾಂತಿಯಾಗುತ್ತಿತ್ತು. ಕೆಲವೊಮ್ಮೆ ಹೇಳದೆ ಕೇಳದೆ ಎಲ್ಲೆಂದರಲ್ಲಿ ಹೋಗುತ್ತಿದ್ದ. ಆ ಕಾರಣಕ್ಕೆ ನಾವು ವಾತಾವರಣ ಬದಲಾಗಲಿ ಎಂದು ಚಂಬಾರಸನಹಳ್ಳಿಗೆ ಕಳಿಸಿದ್ದೆವು. ಮದುವೆ ಮಾಡಿದ್ರೆ ಸರಿ ಹೋಗುತ್ತಾನೆಂದು ತಿಳಿದು ಮದುವೆ ಮಾಡಿದ್ದೆವು ಎನ್ನುತ್ತಿದ್ದಾರೆ. ಇದನ್ನೂ ಓದಿ: ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಮಾರಾಮಾರಿ.. ವಧು ಸಾವು, ವರ ಗಂಭೀರ!

ಮದುವೆ ನಂತರ ಚೆನ್ನಾಗಿಯೇ ಇದ್ದ ನವೀನ್ ಸಂಜೆ ವೇಳೆಗೆ ಇದ್ದಕ್ಕಿದಂತೆ ತನ್ನ ಪತ್ನಿ ಲಿಖಿತಾಶ್ರೀಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಘಟನೆ ಸಂಬಂಧ ಕೆಜಿಎಫ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಯಲ್ಲಿ ನವೀನ್ ಮೇಲೆ ಕೊಲೆ ಪ್ರಕರಣ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದು, ಘಟನೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದ್ಯ ನವೀನ್ ಹಾಗೂ ಲಿಖಿತಾಶ್ರೀ ಇಬ್ಬರ ಮೊಬೈಲ್ ಸೀಜ್ ಮಾಡಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಜೊತೆಗೆ ಅವರ ಕಾಲ್ ಡೀಟೇಲ್ಸ್ ಪರಿಶೀಲಿಸುತ್ತಿದ್ದಾರೆ.

ಕಳೆದೊಂದು ತಿಂಗಳಿಂದ ಇವರಿಬ್ಬರ ಜೊತೆಗೆ ಮಾತನಾಡಿದ್ದ ಸಂಬಂಧಿಕರು ಹಾಗೂ ಸ್ನೇಹಿತರು, ಆಪ್ತರನ್ನು ಕೂಡಾ ಕರೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅದೆಲ್ಲದರ ಜೊತೆಗೆ ನವೀನ್ ಮಾನಸಿಕ ಸ್ಥಿತಿ ಸರಿ ಇಲ್ಲಾ ಅನ್ನೋ ಕೆಲವು ಮಾಹಿತಿ ಇರುವ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಕುಟುಂಬಸ್ಥರು ಹಾಗೂ ಆಪ್ತರನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಅವನ ಮಾನಸಿಕ ಸ್ಥಿತಿಗೆ ಸಂಬಂಧಪಟ್ಟಂತೆ ಚಿಕಿತ್ಸೆ ಕೊಡಿಸಿರುವ ಬಗ್ಗೆಯೂ ಮಾಹಿತಿ ಕಲೆಹಾಕಲಾಗುತ್ತಿದೆ. ಎಲ್ಲಕ್ಕಿಂತ ಪ್ರಮುಖವಾಗಿ ಇಬ್ಬರಿಗೂ ಕೂಡಾ ಬೇರೆ ಯಾರ ಜೊತೆಗೆ ಪ್ರೀತಿ-ಪ್ರೇಮ ಅಥವಾ ಸಂಬಂಧ ಇತ್ತಾ ಅನ್ನೋದರ ಕುರಿತು ಬೇರೆ ಬೇರೆ ಆಯಾಮಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TAGGED:KolarNewlywed Couple
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
3 minutes ago
Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
15 minutes ago
JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
25 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
32 minutes ago
Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
35 minutes ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?