ಕೋಲಾರ: ಕೋಲಾರ ನಗರದಲ್ಲಿ ಸರಣಿ ಕಳ್ಳತನ ಮುಂದುವರಿದಿದ್ದು, ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗಳಿಗೆ ಕಳ್ಳರು ಕನ್ನ ಹಾಕಿದ್ದಾರೆ.
ತಡರಾತ್ರಿ ನಗರದ ಕಾರಂಜಿಕಟ್ಟೆ ಮತ್ತು ಮುನೇಶ್ವರ ನಗರದಲ್ಲಿ ಕಳ್ಳತನ ಮಾಡಿದ್ದು, ಶಿಕ್ಷಕ ಸತೀಶ್, ವಕೀಲ ಶ್ರೀನಿವಾಸ್, ಚಾಲಕ ಹನುಮೇಶ್, ಸೌಮ್ಯ ಬಾರ್ ಮಾಲೀಕ ಗೋವರ್ಧನ್ ಎಂಬವರ ಮನೆಯಲ್ಲಿ ಕಳ್ಳತನ ಮಾಡಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಿರುವ ಚೋರರು. ಮನೆಗಳ ಬಾಗಿಲನ್ನು ಒಡೆದು ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ಟಿವಿಗಳನ್ನು ದೋಚಿಕೊಂಡು ಹೋಗಿದ್ದಾರೆ. ಈ ಸಂಬಂಧ ಕೋಲಾರ ನಗರ ಠಾಣೆ ಪೊಲೀಸರು ಹಾಗೂ ಗಲ್ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.