ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

Public TV
0 Min Read
KLR RAITH DEATH

ಕೋಲಾರ: ಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದಲ್ಲಿ ನಡೆದಿದೆ.

ಅರಿಕೆರೆ ಗ್ರಾಮದ ನಿವಾಸಿ 26 ವರ್ಷದ ರಾಜೇಶ್ ಆತ್ಮಹತ್ಯೆ ಮಾಡಿಕೊಂಡ ಯುವ ರೈತ. ಟೊಮೆಟೋ ಬೆಳೆ ಕೈಕೊಟ್ಟ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

klr raith death 2

ಸುಮಾರು 10 ಲಕ್ಷ ಕೈ ಸಾಲ ಮಾಡಿ, ಜಮೀನು ಗುತ್ತಿಗೆ ಪಡೆದು ಟೊಮೆಟೋ ಬೆಳೆ ಬೆಳೆದಿದ್ದ ರಾಜೇಶ್, ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *