ಕೋಲ್ಕತ್ತಾ: ಹಣ ನೀಡದೇ ವಂಚಿಸಿದ್ದಕ್ಕೆ ಟಿಎಂಸಿ ಕಾರ್ಯಕರ್ತನನ್ನು ಬಿಜೆಪಿ ಯುವ ಘಟಕದ ಮುಖಂಡರೊಬ್ಬರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಶನಿವಾರ ಕೋಲ್ಕತ್ತಾದ ಐಸಿಸಿಆರ್ ಸಭಾಂಗಣದಲ್ಲಿ ‘ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕ ಕುರಿತಂತೆ ಚರ್ಚೆ ನಡೆಸಲು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಮಾಜಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರ ಭಾಷಣ ಮುಗಿಯುತ್ತಿದ್ದಂತೆ ಬಿಜೆಪಿ ಯುವ ಮುಖಂಡ ಅಭಿಜಿತ್ ನಹಾ ಅವರು, ರಾಯ್ ಚೌಧರಿ ಎಂಬವರನ್ನು ಸಭಾಂಗಣದ ಹೊರಗೆ ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಈ ವೀಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ರಾಯ್ ಚೌಧರಿ ತನ್ನ ಬಳಿ ಹಣ ಪಡೆದು ವಂಚಿಸಿದ್ದಾನೆ. ಅಲ್ಲದೇ ತನ್ನ ಪಕ್ಷದಲ್ಲಿ ಇಲ್ಲದೇ ಇರುವ ಇತರರ ಬಳಿಯೂ ಹಣ ಪಡೆದು ಹಿಂತಿರುಗಿಸಿಲ್ಲ. ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ಹಣ ಪಡೆದು ಹೀಗೆ ಹಲವರಿಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಡ್ಯೂಟಿ ಬಿಟ್ಟು ಸಮವಸ್ತ್ರದಲ್ಲೇ ಬ್ಯೂಟಿ ಕಡೆ ವಾಲಿ ಕೆಲಸ ಕಳೆದುಕೊಂಡ ಇನ್ಸ್ಪೆಕ್ಟರ್!
ರಾಯ್ ಚೌಧರಿ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಬಿಜೆಪಿ ನಾಯಕ ಸಮಿಕ್ ಭಟ್ಟಾಚಾರ್ಯ ಅವರನ್ನು ಭೇಟಿಯಾಗಲು ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಈ ವೇಳೆ ಘಟನೆ ಜರುಗಿದೆ. ಅಲ್ಲದೇ ಚೌಧರಿ ಅವರ ಪರಿಚಯವಿರುವುದಾಗಿ ಸಮಿಕ್ ಭಟ್ಟಾಚಾರ್ಯರು ಸಹ ಒಪ್ಪಿಕೊಂಡರು. ಇದನ್ನೂ ಓದಿ: ಮಲಗಿದ್ದ ತಾಯಿಯ ಪಕ್ಕದಿಂದ ಮಗು ಕದ್ದು ಓಡಿದ – ಖತರ್ನಾಕ್ ಕಳ್ಳನ ವೀಡಿಯೋ ವೈರಲ್