Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್ ರಚನೆ – ಲೋಕಸಭೆಯಲ್ಲಿ ಧ್ವನಿಯೆತ್ತಿದ ಕ್ಯಾ.ಬ್ರಿಜೇಶ್ ಚೌಟ

Public TV
Last updated: March 18, 2025 3:53 pm
Public TV
Share
3 Min Read
Captain Brijesh Chowta Lok Sabha
SHARE

ನವದೆಹಲಿ: ಕೊಂಕಣ ರೈಲ್ವೆ (Konkan Railways) ನಿಗಮದ ವಿಲೀನ, ಮಂಗಳೂರು ರೈಲ್ವೆ ವ್ಯಾಪ್ತಿ ಆಡಳಿತಾತ್ಮಕ ಪುನರ್ ರಚನೆ ಸೇರಿದಂತೆ ರೈಲ್ವೆ ಸಚಿವಾಲಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ (Captain Brijesh Chowta) ಲೋಕಸಭೆಯಲ್ಲಿ (Lok Sabha) ಸದನದ ಗಮನ ಸೆಳೆದಿದ್ದಾರೆ.

ರೈಲ್ವೆ ಸಚಿವಾಲಯದ ಅನುದಾನ ಬೇಡಿಕೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ರೈಲ್ವೆ ಇಲಾಖೆಯಲ್ಲಿ ಆಗಿರುವ ಗಮನಾರ್ಹ ಅಭಿವೃದ್ಧಿ ಕಾರ್ಯ-ಯೋಜನೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಭಾರತೀಯ ರೈಲ್ವೆಯಲ್ಲಿ ಶೇ.90ರಷ್ಟು ವಿದ್ಯುದ್ದೀಕರಣ ಕೆಲಸ ಆಗಿದ್ದು, ದೇಶವ್ಯಾಪಿ ಸುಮಾರು 1,300 ರೈಲ್ವೆ ನಿಲ್ದಾಣಗಳ ಪುನರ್ ನವೀಕರಣ ಮಾಡಲಾಗಿದೆ. ಜೊತೆಗೆ ವಂದೇ ಭಾರತ್‌ನಂಥಹ ಸುಧಾರಿತ ತಂತ್ರಜ್ಞಾನ ಆಧಾರಿತ ಅತ್ಯಾಧುನಿಕ ರೈಲುಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜಮೀನು ತೆರವು ವಿಚಾರ; ಮಿಕ್ಕಿದ್ದಕ್ಕೆಲ್ಲಾ ದಾಖಲೆ ಇರುತ್ತೆ, ಇದಕ್ಕೆ ಇರಲ್ವಾ? – ಹೆಚ್‌ಡಿಕೆ ವಿರುದ್ಧ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಇದೇ ವೇಳೆ, ಸುಮಾರು ಒಂದು ದಶಕಗಳಿಂದ ವಿಸ್ತರಣೆಗೆ ಕಾಯುತ್ತಿದ್ದ ಮಂಗಳೂರು-ಪುತ್ತೂರು-ಕಬಕ ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸಿರುವ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸಿದ ಅವರು, ಇದರಿಂದ ದಿನನಿತ್ಯ ಓಡಾಡುವ ಪ್ರಯಾಣಿಕರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದರು. ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,559 ಕೋಟಿ ರೂ. ಹಂಚಿಕೆ ಮಾಡಿದ್ದಕ್ಕಾಗಿ ರೈಲ್ವೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ರೈಲ್ವೆ ಮೂಲಸೌಕರ್ಯದಲ್ಲಿ ವೇಗದ ವಿಸ್ತರಣೆಯನ್ನು ಶ್ಲಾಘಿಸಿದ ಚೌಟ, 2014ರಿಂದ ಕರ್ನಾಟಕದಲ್ಲಿ ಒಟ್ಟು 1,652 ಕಿ.ಮೀ ಹೊಸ ರೈಲ್ವೆ ಹಳಿಗಳನ್ನು ಹಾಕಲಾಗಿದೆ. ಇದು ಶ್ರೀಲಂಕಾದ ಸಂಪೂರ್ಣ ರೈಲು ಜಾಲವನ್ನು ಮೀರಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಿಮ್ಮನ್ನು ಭಾರತದಲ್ಲಿ ನೋಡಲು ಕಾತರದಿಂದ ಕಾಯುತ್ತಿದ್ದೇವೆ: ಸುನಿತಾ ವಿಲಿಯಮ್ಸ್‌ಗೆ ಮೋದಿ ಪತ್ರ

Captain Brijesh Chowta Lok Sabha 1

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ರೈಲ್ವೆ ಮೂಲಸೌಕರ್ಯವನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಸದನದ ಗಮನಸೆಳೆದ ಸಂಸದ ಕ್ಯಾ. ಚೌಟ ಅವರು, ಆರ್ಥಿಕವಾಗಿ ಹಲವಾರು ಸವಾಲು ಎದುರಿಸುತ್ತಿರುವ ಕೊಂಕಣ ರೈಲ್ವೆ ನಿಗಮ(ಕೆಆರ್ಸಿಎಲ್)ವನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಬೇಕು. ಇದರಿಂದ ನಿಗಮದ ಸುಮಾರು 2,589 ಕೋಟಿ ರೂ. ಸಾಲದ ಹೊರೆಯನ್ನು ತಪ್ಪಿಸಿ ಆರ್ಥಿಕ ಸದೃಢತೆಯನ್ನು ಹೆಚ್ಚಿಸಬಹುದು. ಆ ಮೂಲಕ ಕೊಂಕಣ ರೈಲ್ವೆಯ ಕಾರ್ಯ ನಿರ್ವಹಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸುಧಾರಣೆ ತರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಿಂದ ದೇಶದ ಸಾಮೂಹಿಕ ಪ್ರಜ್ಞೆ ಬಲಗೊಂಡಿದೆ – ಲೋಕಸಭೆಯಲ್ಲಿ ಮೋದಿ ಶ್ಲಾಘನೆ

ಇನ್ನು ಬಹಳ ವರ್ಷಗಳಿಂದ ಬೇಡಿಕೆಯಾಗಿಯೇ ಉಳಿದಿರುವ ಮಂಗಳೂರು ರೈಲ್ವೆ ವ್ಯಾಪ್ತಿಯ ಆಡಳಿತಾತ್ಮಕ ಅಡೆ-ತಡೆ ದೂರ ಮಾಡುವ ಬಗ್ಗೆ ಪ್ರಸ್ತಾಪಿಸಿ, ಮಂಗಳೂರು ರೈಲ್ವೆ ಭಾಗದ ವ್ಯಾಪ್ತಿಯನ್ನು ದಕ್ಷಿಣ ರೈಲ್ವೆ ವಲಯದ ಪಾಲ್ಘಾಟ್ ವಿಭಾಗದಿಂದ ಬೇರ್ಪಡಿಸಿ ಅದನ್ನು ನೈರುತ್ಯ ರೈಲ್ವೆ ವ್ಯಾಪ್ತಿಗೆ ಬರುವ ಮೈಸೂರು ವಿಭಾಗಕ್ಕೆ ಸೇರಿಸಬೇಕು. ಇದರಿಂದ ಈ ಭಾಗದ ರೈಲ್ವೆ ವಿಚಾರಗಳಿಗೆ ಸಂಬಂಧಿಸಿದಂತೆ ಮತ್ತಷ್ಟು ಸುಧಾರಣೆ ತರುವ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ನುಡಿದರು. ಇದನ್ನೂ ಓದಿ: ಕಾರ್ಕಳದ ಎರ್ಲಪಾಡಿ ಕ್ಷೇತ್ರಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

ಹೆಚ್‌ಎಂಆರ್‌ಡಿಸಿ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲಿ:
ಬೆಂಗಳೂರು-ಮಂಗಳೂರು ರೈಲ್ವೆ ಸಂಪರ್ಕದ ಬಗ್ಗೆಯೂ ಉಲ್ಲೇಖಿಸಿದ ಸಂಸದ ಕ್ಯಾ. ಚೌಟ ಅವರು, ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ಕಂಪನಿಯನ್ನು (ಹೆಚ್‌ಎಂಆರ್‌ಡಿಸಿ) ಕೂಡ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಬೇಕು ಅಥವಾ ಕರ್ನಾಟಕ ಸರ್ಕಾರದ ಅದರ ಸಂಪೂರ್ಣ ಹೊಣೆಯನ್ನು ನೀಡಿ ಆ ಮೂಲಕ ಸರಕು ಸಾಗಣೆ ಹಾಗೂ ಪ್ರಯಾಣಿಕರ ದಟ್ಟಣೆ ಹೆಚ್ಚಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಡುವೆ ಮಂಗಳೂರು ನವಬಂದರು ಹಾಗೂ ಬೆಂಗಳೂರು ನಡುವೆ ಪ್ರತ್ಯೇಕ ಸರಕು ಸಾಗಾಟ ಕಾರಿಡಾರ್ ನಿರ್ಮಿಸುವುದರಿಂದ ಕರಾವಳಿಯ ವ್ಯಾಪಾರ-ವಹಿವಾಟು ಹೆಚ್ಚಿಸುವ ಜೊತೆಗೆ ಸರಕು ಸಾಗಣೆ ವೆಚ್ಚವನ್ನು ಕಡಿಮೆಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

ಒಟ್ಟಾರೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಈ ಎಲ್ಲ ರೈಲ್ವೆ ಅಭಿವೃದ್ಧಿ ಕಾರ್ಯ ಹಾಗೂ ಸುಧಾರಣಾ ಕ್ರಮಗಳನ್ನು ಆದ್ಯತೆ ಮೇಲೆ ಕಾರ್ಯರೂಪಕ್ಕೆ ತರಬೇಕೆಂದು ಸಂಸದ ಕ್ಯಾ. ಚೌಟ ಅವರು ರೈಲ್ವೆ ಸಚಿವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನ್ಯಾಯಬೆಲೆ ಅಂಗಡಿಯಲ್ಲಿ ಟೋಕನ್ ಎಸೆದವನ ಮೇಲೆ ಕ್ರಮ: ಮುನಿಯಪ್ಪ

TAGGED:Captain Brijesh ChowtaKonkan railwayslok sabhaNew Delhiಕೊಂಕಣ ರೈಲ್ವೆಕ್ಯಾ.ಬ್ರಿಜೇಶ್‌ ಚೌಟನವದೆಹಲಿಲೋಕಸಭೆ
Share This Article
Facebook Whatsapp Whatsapp Telegram

You Might Also Like

GOLD SURESH
Bengaluru City

6 ಲಕ್ಷ ಹಣ ನೀಡುವಂತೆ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್‌ಗೆ ಬೆದರಿಕೆ – ಎನ್‌ಸಿಆರ್ ದಾಖಲು

Public TV
By Public TV
9 minutes ago
mid day meals
Bengaluru City

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

Public TV
By Public TV
27 minutes ago
Gopi Chandh Padalkar
Latest

ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ – ಮಹಾರಾಷ್ಟ್ರ ಬಿಜೆಪಿ ಶಾಸಕನ ಪ್ರಚೋದನಕಾರಿ ಹೇಳಿಕೆ

Public TV
By Public TV
48 minutes ago
Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
2 hours ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
2 hours ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?