Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್ ರಚನೆ – ಲೋಕಸಭೆಯಲ್ಲಿ ಧ್ವನಿಯೆತ್ತಿದ ಕ್ಯಾ.ಬ್ರಿಜೇಶ್ ಚೌಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್ ರಚನೆ – ಲೋಕಸಭೆಯಲ್ಲಿ ಧ್ವನಿಯೆತ್ತಿದ ಕ್ಯಾ.ಬ್ರಿಜೇಶ್ ಚೌಟ

Latest

ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್ ರಚನೆ – ಲೋಕಸಭೆಯಲ್ಲಿ ಧ್ವನಿಯೆತ್ತಿದ ಕ್ಯಾ.ಬ್ರಿಜೇಶ್ ಚೌಟ

Public TV
Last updated: March 18, 2025 3:53 pm
Public TV
Share
3 Min Read
Captain Brijesh Chowta Lok Sabha
SHARE

ನವದೆಹಲಿ: ಕೊಂಕಣ ರೈಲ್ವೆ (Konkan Railways) ನಿಗಮದ ವಿಲೀನ, ಮಂಗಳೂರು ರೈಲ್ವೆ ವ್ಯಾಪ್ತಿ ಆಡಳಿತಾತ್ಮಕ ಪುನರ್ ರಚನೆ ಸೇರಿದಂತೆ ರೈಲ್ವೆ ಸಚಿವಾಲಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ (Captain Brijesh Chowta) ಲೋಕಸಭೆಯಲ್ಲಿ (Lok Sabha) ಸದನದ ಗಮನ ಸೆಳೆದಿದ್ದಾರೆ.

ರೈಲ್ವೆ ಸಚಿವಾಲಯದ ಅನುದಾನ ಬೇಡಿಕೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ರೈಲ್ವೆ ಇಲಾಖೆಯಲ್ಲಿ ಆಗಿರುವ ಗಮನಾರ್ಹ ಅಭಿವೃದ್ಧಿ ಕಾರ್ಯ-ಯೋಜನೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಭಾರತೀಯ ರೈಲ್ವೆಯಲ್ಲಿ ಶೇ.90ರಷ್ಟು ವಿದ್ಯುದ್ದೀಕರಣ ಕೆಲಸ ಆಗಿದ್ದು, ದೇಶವ್ಯಾಪಿ ಸುಮಾರು 1,300 ರೈಲ್ವೆ ನಿಲ್ದಾಣಗಳ ಪುನರ್ ನವೀಕರಣ ಮಾಡಲಾಗಿದೆ. ಜೊತೆಗೆ ವಂದೇ ಭಾರತ್‌ನಂಥಹ ಸುಧಾರಿತ ತಂತ್ರಜ್ಞಾನ ಆಧಾರಿತ ಅತ್ಯಾಧುನಿಕ ರೈಲುಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜಮೀನು ತೆರವು ವಿಚಾರ; ಮಿಕ್ಕಿದ್ದಕ್ಕೆಲ್ಲಾ ದಾಖಲೆ ಇರುತ್ತೆ, ಇದಕ್ಕೆ ಇರಲ್ವಾ? – ಹೆಚ್‌ಡಿಕೆ ವಿರುದ್ಧ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಇದೇ ವೇಳೆ, ಸುಮಾರು ಒಂದು ದಶಕಗಳಿಂದ ವಿಸ್ತರಣೆಗೆ ಕಾಯುತ್ತಿದ್ದ ಮಂಗಳೂರು-ಪುತ್ತೂರು-ಕಬಕ ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸಿರುವ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸಿದ ಅವರು, ಇದರಿಂದ ದಿನನಿತ್ಯ ಓಡಾಡುವ ಪ್ರಯಾಣಿಕರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದರು. ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,559 ಕೋಟಿ ರೂ. ಹಂಚಿಕೆ ಮಾಡಿದ್ದಕ್ಕಾಗಿ ರೈಲ್ವೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ರೈಲ್ವೆ ಮೂಲಸೌಕರ್ಯದಲ್ಲಿ ವೇಗದ ವಿಸ್ತರಣೆಯನ್ನು ಶ್ಲಾಘಿಸಿದ ಚೌಟ, 2014ರಿಂದ ಕರ್ನಾಟಕದಲ್ಲಿ ಒಟ್ಟು 1,652 ಕಿ.ಮೀ ಹೊಸ ರೈಲ್ವೆ ಹಳಿಗಳನ್ನು ಹಾಕಲಾಗಿದೆ. ಇದು ಶ್ರೀಲಂಕಾದ ಸಂಪೂರ್ಣ ರೈಲು ಜಾಲವನ್ನು ಮೀರಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಿಮ್ಮನ್ನು ಭಾರತದಲ್ಲಿ ನೋಡಲು ಕಾತರದಿಂದ ಕಾಯುತ್ತಿದ್ದೇವೆ: ಸುನಿತಾ ವಿಲಿಯಮ್ಸ್‌ಗೆ ಮೋದಿ ಪತ್ರ

Captain Brijesh Chowta Lok Sabha 1

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ರೈಲ್ವೆ ಮೂಲಸೌಕರ್ಯವನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಸದನದ ಗಮನಸೆಳೆದ ಸಂಸದ ಕ್ಯಾ. ಚೌಟ ಅವರು, ಆರ್ಥಿಕವಾಗಿ ಹಲವಾರು ಸವಾಲು ಎದುರಿಸುತ್ತಿರುವ ಕೊಂಕಣ ರೈಲ್ವೆ ನಿಗಮ(ಕೆಆರ್ಸಿಎಲ್)ವನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಬೇಕು. ಇದರಿಂದ ನಿಗಮದ ಸುಮಾರು 2,589 ಕೋಟಿ ರೂ. ಸಾಲದ ಹೊರೆಯನ್ನು ತಪ್ಪಿಸಿ ಆರ್ಥಿಕ ಸದೃಢತೆಯನ್ನು ಹೆಚ್ಚಿಸಬಹುದು. ಆ ಮೂಲಕ ಕೊಂಕಣ ರೈಲ್ವೆಯ ಕಾರ್ಯ ನಿರ್ವಹಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸುಧಾರಣೆ ತರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಿಂದ ದೇಶದ ಸಾಮೂಹಿಕ ಪ್ರಜ್ಞೆ ಬಲಗೊಂಡಿದೆ – ಲೋಕಸಭೆಯಲ್ಲಿ ಮೋದಿ ಶ್ಲಾಘನೆ

ಇನ್ನು ಬಹಳ ವರ್ಷಗಳಿಂದ ಬೇಡಿಕೆಯಾಗಿಯೇ ಉಳಿದಿರುವ ಮಂಗಳೂರು ರೈಲ್ವೆ ವ್ಯಾಪ್ತಿಯ ಆಡಳಿತಾತ್ಮಕ ಅಡೆ-ತಡೆ ದೂರ ಮಾಡುವ ಬಗ್ಗೆ ಪ್ರಸ್ತಾಪಿಸಿ, ಮಂಗಳೂರು ರೈಲ್ವೆ ಭಾಗದ ವ್ಯಾಪ್ತಿಯನ್ನು ದಕ್ಷಿಣ ರೈಲ್ವೆ ವಲಯದ ಪಾಲ್ಘಾಟ್ ವಿಭಾಗದಿಂದ ಬೇರ್ಪಡಿಸಿ ಅದನ್ನು ನೈರುತ್ಯ ರೈಲ್ವೆ ವ್ಯಾಪ್ತಿಗೆ ಬರುವ ಮೈಸೂರು ವಿಭಾಗಕ್ಕೆ ಸೇರಿಸಬೇಕು. ಇದರಿಂದ ಈ ಭಾಗದ ರೈಲ್ವೆ ವಿಚಾರಗಳಿಗೆ ಸಂಬಂಧಿಸಿದಂತೆ ಮತ್ತಷ್ಟು ಸುಧಾರಣೆ ತರುವ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ನುಡಿದರು. ಇದನ್ನೂ ಓದಿ: ಕಾರ್ಕಳದ ಎರ್ಲಪಾಡಿ ಕ್ಷೇತ್ರಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

ಹೆಚ್‌ಎಂಆರ್‌ಡಿಸಿ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲಿ:
ಬೆಂಗಳೂರು-ಮಂಗಳೂರು ರೈಲ್ವೆ ಸಂಪರ್ಕದ ಬಗ್ಗೆಯೂ ಉಲ್ಲೇಖಿಸಿದ ಸಂಸದ ಕ್ಯಾ. ಚೌಟ ಅವರು, ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ಕಂಪನಿಯನ್ನು (ಹೆಚ್‌ಎಂಆರ್‌ಡಿಸಿ) ಕೂಡ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಬೇಕು ಅಥವಾ ಕರ್ನಾಟಕ ಸರ್ಕಾರದ ಅದರ ಸಂಪೂರ್ಣ ಹೊಣೆಯನ್ನು ನೀಡಿ ಆ ಮೂಲಕ ಸರಕು ಸಾಗಣೆ ಹಾಗೂ ಪ್ರಯಾಣಿಕರ ದಟ್ಟಣೆ ಹೆಚ್ಚಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಡುವೆ ಮಂಗಳೂರು ನವಬಂದರು ಹಾಗೂ ಬೆಂಗಳೂರು ನಡುವೆ ಪ್ರತ್ಯೇಕ ಸರಕು ಸಾಗಾಟ ಕಾರಿಡಾರ್ ನಿರ್ಮಿಸುವುದರಿಂದ ಕರಾವಳಿಯ ವ್ಯಾಪಾರ-ವಹಿವಾಟು ಹೆಚ್ಚಿಸುವ ಜೊತೆಗೆ ಸರಕು ಸಾಗಣೆ ವೆಚ್ಚವನ್ನು ಕಡಿಮೆಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

ಒಟ್ಟಾರೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಈ ಎಲ್ಲ ರೈಲ್ವೆ ಅಭಿವೃದ್ಧಿ ಕಾರ್ಯ ಹಾಗೂ ಸುಧಾರಣಾ ಕ್ರಮಗಳನ್ನು ಆದ್ಯತೆ ಮೇಲೆ ಕಾರ್ಯರೂಪಕ್ಕೆ ತರಬೇಕೆಂದು ಸಂಸದ ಕ್ಯಾ. ಚೌಟ ಅವರು ರೈಲ್ವೆ ಸಚಿವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನ್ಯಾಯಬೆಲೆ ಅಂಗಡಿಯಲ್ಲಿ ಟೋಕನ್ ಎಸೆದವನ ಮೇಲೆ ಕ್ರಮ: ಮುನಿಯಪ್ಪ

TAGGED:Captain Brijesh ChowtaKonkan railwayslok sabhaNew Delhiಕೊಂಕಣ ರೈಲ್ವೆಕ್ಯಾ.ಬ್ರಿಜೇಶ್‌ ಚೌಟನವದೆಹಲಿಲೋಕಸಭೆ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
2 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
2 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
2 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
2 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
3 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?