ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ವಾಮಮಾರ್ಗ ಹಿಡಿದಿದೆ – ಕೃಷ್ಣಬೈರೇಗೌಡ

Public TV
1 Min Read
Congress krishna byre gowda

– ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಜೆಪಿಯದ್ದು

ಕೊಪ್ಪಳ: ಮೈತ್ರಿ ಸರ್ಕಾರ ಕೆಡವಲು ದುಷ್ಟ, ವಾಮಮಾರ್ಗಗಳನ್ನೆಲ್ಲ ಬಿಜೆಪಿ ಮಾಡುತ್ತಿದೆ. ಆದರೆ ಬಿಜೆಪಿ ಮಾಡುವ ಎಲ್ಲಾ ವಾಮಮಾರ್ಗವನ್ನು ಮೀರಿ ಸರ್ಕಾರ ನಡೆಸುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಇಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ಕಾಮಗಾರಿಗಳ ಕ್ಷೇತ್ರ ವೀಕ್ಷಣೆ ಮತ್ತು ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಸಮ್ಮಿಶ್ರ ಸರ್ಕಾರ ಬೀಳಿಸುವುದಕ್ಕೆ ಏನೆಲ್ಲ ಪ್ರಯತ್ನ ಮಾಡುತ್ತಿದ್ದಾರೆ. ಶಾಸಕರನ್ನು ಖರೀದಿ ಮಾಡುವುದರಿಂದ ಹಿಡಿದು ದುಷ್ಟ ಮಾರ್ಗಗಳನ್ನು ಬಳಸಿ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯವರ ಮೇಲೆ ಕಿಡಿಕಾರಿದರು.

BJP 1

ಇದನ್ನೆಲ್ಲ ಮೀರಿ ನಾವು ಸರ್ಕಾರ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಸರ್ಕಾರ ಸುಭದ್ರವಾಗಿದೆ ಎಂದು ಅವರು ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಬೇಕು ಎಂಬ ಸಿಎಂ ಹೇಳಿಕೆ ಸಮರ್ಥಿಸಿಕೊಂಡರು. ಪ್ರತಿಭಟನಾಕಾರರಿಗೆ ಸಿಎಂ ಸಮಯ ನೀಡಿದ್ದರು. ಆದರೆ ಕೆಲವರು ಉದ್ದೇಶಪೂರ್ವಕವಾಗಿ ಪ್ರತಿಭಟನೆ ಮಾಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿ ಅವರು ಕಾನೂನು ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

modi cm hdk angry 1

ಮೋದಿಗೆ ವೋಟ್ ಹಾಕಿ ನನಗೆ ಸಮಸ್ಯೆ ಹೇಳ್ತೀರಾ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಸಚಿವರು, ಸಿಎಂ ರವರು ವಾಸ್ತವವಾಗಿ ಮಾತನಾಡಿದ್ದಾರೆ. ರಾಜಕೀಯದಲ್ಲಿ ವಾಸ್ತವವಾಗಿ ಮಾತನಾಡಿದರೆ ಹಿಡಿಸೊಲ್ಲ ಎಂದರು. ಗ್ರಾಮ ವಾಸ್ತವ್ಯದ ಮೂಲಕ ಸಾವಿರಾರು ಜನರಿಗೆ ಸಹಾಯ ಮಾಡಿದ್ದಾರೆ. ಆದರೆ ವಿರೋಧ ಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *