ಕೊಪ್ಪಳ: ಮರಳಿನ ದಿಬ್ಬ ಕುಸಿದ ಹಿನ್ನೆಲೆಯಲ್ಲಿ ಮೂರು ಮಕ್ಕಳು ದುರ್ಮರಣ ಹೊಂದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನವಲಿ ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆ ಮೂಲದ ಮೂರು ಮಕ್ಕಳು ಮರಳಿನಲ್ಲಿ ಸಮಾಧಿಯಾಗಿದ್ದಾರೆ. ಒಟ್ಟು ಐದು ಮಕ್ಕಳು ಮರಳಿನ ದಿಬ್ಬದ ಮೇಲೆ ಆಟವಾಡುತ್ತಿರುವಾಗ ಅಪಾರ ಪ್ರಮಾಣದಲ್ಲಿ ಸಂಗ್ರಹಿಸಿದ್ದ ಮರಳು ಕುಸಿದು ಪರಿಣಾಮ 3 ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಐದು ಮಕ್ಕಳಲ್ಲಿ ಇಬ್ಬರು ಬಾಲಕಿಯರು ಮತ್ತು ಓರ್ವ ಬಾಲಕ ಮೃತಪಟ್ಟಿದ್ದು, ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಕೂಲಿ ಕೆಲಸಕ್ಕೆ ರಾಜ್ಯ ಬಿಟ್ಟು ರಾಜ್ಯಕ್ಕೆ ವಲಸೆ ಬಂದಿದ್ದ ಕಾರ್ಮಿಕರು ಮಕ್ಕಳನ್ನು ಕಳೆದುಕೊಂಡು ದು:ಖಿಸುತ್ತಿದ್ದಾರೆ. ಈ ಸಂಬಂಧ ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.