ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯಿರುವ ವ್ಯಾಸರಾಯರ ವೃಂದಾವನಕ್ಕೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲ್ಲಾರಿ, ಡಿ ಮನೋಹರ, ಕೆ.ಕುಮ್ಮಟಕೇಶವ, ಬಿ ವಿಜಯಕುಮಾರ್ ಹಾಗೂ ಟಿ ಬಾಲರನಸಯ್ಯ ಬಂಧಿತ ಆರೋಪಿಗಳು. ಇವರೆಲ್ಲರು ಆಂಧ್ರಪ್ರದೇಶದ ಅನಂತಪುರ್ ಜಿಲ್ಲೆಯ ತಾಡಪತ್ರಿ ನಿವಾಸಿಗಳು ಎಂದು ಹೇಳಲಾಗುತ್ತಿದೆ.
ಮೊಬೈಲ್ ಸಿಗ್ನಲ್ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ವ್ಯಾಸರಾಜರ ವೃಂದಾವನ ಧ್ವಂಸಕ್ಕೆ ಬಳಸಿದ ಹಾರೆ, ಗುದ್ದಲಿ, ಇನ್ನೋವಾ ಕಾರು ವಶಕ್ಕೆ ಪಡೆಯಲಾಗಿದೆ.
ನಿಧಿಗಾಗಿ ಕಳೆದ 17 ರ ತಡರಾತ್ರಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನದಲ್ಲಿ ಧ್ವಂಸ ಮಾಡಲಾಗಿತ್ತು. ವ್ಯಾಸರಾಜದ ವೃಂದಾವನ ಕಿತ್ತು ಹಾಕಿದ್ದಕ್ಕೆ ರಾಜ್ಯಾದ್ಯಾಂತ ಖಂಡನೆ ವ್ಯಕ್ತವಾಗಿತ್ತು. ವಿವಿಧ ಮಠಾಧೀಶರು ಆರೋಪಿಗಳನ್ನ ಬಂಧಿಸುವಂತೆ ಅಗ್ರಹಿಸಿದ್ದರು. ಹಾಗೆಯೇ ಆರೋಪಿಗಳ ಬಂಧನಕ್ಕೆ ಕೊಪ್ಪಳ ಪೊಲೀಸ್ ವರಿಷ್ಠ ಅಧಿಕಾರಿ ವಿಶೇಷ ತಂಡ ರಚನೆ ಮಾಡಿದ್ದು, ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.