Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಮೆಗತಿಯಲ್ಲಿ ಸಾಗುತ್ತಿದೆ ಯುಜಿಡಿ ಕಾಮಗಾರಿ- ಶಾಸಕ ಸೈಲೆಂಟ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಆಮೆಗತಿಯಲ್ಲಿ ಸಾಗುತ್ತಿದೆ ಯುಜಿಡಿ ಕಾಮಗಾರಿ- ಶಾಸಕ ಸೈಲೆಂಟ್

Public TV
Last updated: December 31, 2019 8:19 am
Public TV
Share
3 Min Read
KPL 15
SHARE

– ಶಾಸಕರ ವಿರುದ್ಧ ಸಾರ್ವಜನಿಕರು ಅಸಮಾಧಾನ

ಕೊಪ್ಪಳ: ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಒಳಚರಂಡಿ ನೀರು (ಯುಜಿಡಿ) ಸರಬರಾಜು ಕಾಮಗಾರಿಗೆ ಈಗ 20 ವರ್ಷ ತುಂಬಿದ್ದು, ನಗರಸಭೆ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಕಾಮಗಾರಿ ಪೂರ್ಣಗೊಳ್ಳಲು ಎರಡು ದಶಕಗಳೇ ಬೇಕಾಗಿದೆ. ಈ ಬಗ್ಗೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಸಾರ್ವಜನಿಕರು ಸಾಕಷ್ಟು ಬಾರಿ ದೂರು ನೀಡಿದರು. ಆದರೆ ಶಾಸಕರು ಮಾತ್ರ ಸೈಲೆಂಟ್ ಆಗಿದ್ದಾರೆ. ಶಾಸಕರ ಈ ನಡೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಸಾರ್ವಜನಿಕ ಆರೋಪ ಮಾಡುತ್ತಿದ್ದಾರೆ.

ಗಂಗಾವತಿ ನಗರದಲ್ಲಿ ಗುಂಡಿಬಿದ್ದು, ಸಾಕಷ್ಟು ಜನರು ಗಾಯ ಮಾಡಿಕೊಂಡಿದ್ದಾರೆ. ಕಾಮಗಾರಿ ಆಮೆ ಗತಿಯಲ್ಲಿ ನಡೆಯುತ್ತಿದೆ. ಯುಜಿಡಿ ಕೆಲಸ ಕಳೆಪೆ ಕಾಮಗಾರಿ ನಡೆಯುತ್ತಿದೆ. ಶಾಸಕ ಪರಣ್ಣ ಮಾತ್ರ ನನಗೆ ಸಂಬಂಧ ಇಲ್ಲದ ರೀತಿ ವರ್ತಿಸುತ್ತಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

KPL 3 3

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಹರಿದು ಬಂದರೂ ಇಲ್ಲಿಯವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ಯುಜಿಡಿ ಕುರಿತು 2001-02 ನೇ ಸಾಲಿನಲ್ಲಿ ಕಾಮಗಾರಿ ನಡೆಸುವ ಕುರಿತು ನಗರಸಭೆ ಯೋಜನೆಯನ್ನು ತಯಾರಿಸಿತು. 17.2 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭಗೊಂಡಿರುವ ಯುಜಿಡಿ ಕಾಮಗಾರಿ ಇದುವರೆಗೂ ಪ್ರಗತಿ ಹಂತದಲ್ಲಿಯೇ ಸಾಗಿದೆ. ಕಾಮಗಾರಿ ಕುಂಟುತ್ತ ಸಾಗಿದರೂ ಯಾವೊಬ್ಬ ಅಧಿಕಾರಿಗಳು ಮತ್ತು ನಗರಸಭೆ ಆಡಳಿತ ಮಂಡಳಿಯು ತಲೆ ಕೆಡಿಸಿಕೊಳ್ಳದೇ ಇರುವುದು ವಿಪರ್ಯಾಸವಾಗಿದೆ.

ಈ ಹಿಂದೆ 44 ಕಿ.ಮೀ. ಆಳಗುಂಡಿಗಳ ಸಮೇತ ಸೀವರ್ ಕೊಳವೆ ಅಳವಡಿಸುವ ಕಾಮಗಾರಿ ಪ್ರಾರಂಭಿಸಲಾಗಿತ್ತು. ನಗರದ ಹಿರೇಜಂತಕಲ್ ಹೊರ ಭಾಗದಲ್ಲಿ 14 ದಶ ಲಕ್ಷ ಲೀಟರ್ ಸಾಮಥ್ರ್ಯದ ಮಲಿನ ನೀರು ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗಿತ್ತು. ನಗರ ಪ್ರದೇಶದ 15 ವಾರ್ಡ್ ವ್ಯಾಪ್ತಿಯಲ್ಲಿರುವ 14,000 ಕುಟುಂಬಗಳಿಗೆ ಯುಜಿಡಿ ಸೌಕರ್ಯ ಒದಗಿಸುವ ಕಾಮಗಾರಿ, ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ಮತ್ತು ಶಾಸಕರ ನಿರ್ಲಕ್ಷ್ಯದಿಂದ ಹಳ್ಳ ಹಿಡಿದಿದೆ.

KPL 2 4

50 ಕೋಟಿ ಅನುದಾನ ಬಿಡುಗಡೆ: ಕೇಂದ್ರ ಸರ್ಕಾರ 1 ಲಕ್ಷಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ 2015-16ನೇ ಸಾಲಿನಲ್ಲಿ ಅಮೃತ್ ನಗರ ಯೋಜನೆಯಡಿ ಒಳ ಚರಂಡಿ ಯೋಜನೆ ಕಾಮಗಾರಿಗೆ ಮೊದಲ ಹಂತದಲ್ಲಿ 36 ಕೋಟಿ ರೂ.ಬಿಡುಗಡೆ ಮಾಡಿತ್ತು. 2ನೇ ಹಂತದಲ್ಲಿ 14 ಕೋಟಿ ಅನುದಾನ ಬಿಡುಗಡೆಯಾಗಿದೆ.

ನಾಲ್ಕು ಹಂತದ ಕಾಮಗಾರಿ ನಡೆಸುವ ಮೂಲಕ ಶಾಶ್ವತವಾಗಿ ಒಳಚರಂಡಿ ಸಮಸ್ಯೆ ಪರಿಹರಿಸಬೇಕೆಂದು ನಿರ್ಣಯಿಸಲಾಗಿತ್ತು. ನಗರ ವ್ಯಾಪ್ತಿಯ 220 ಕಿ.ಮೀ. ವ್ಯಾಪ್ತಿಯ ಉದ್ದಕ್ಕೂ ಯುಜಿಡಿ ಪೈಪ್‍ಲೈನ್ ಅಳವಡಿಸುವ ಮೂಲಕ 20 ಸಾವಿರಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಲ್ಪಿಸಲು ಯೋಜಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಶೇ.40 ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಬಾಕಿ ಕಾಮಗಾರಿ ಆಮೆಗತಿಯಲ್ಲಿ ನಡೆದಿದೆ.

11 ಸಾವಿರ ಮನೆಗಳಿಗೆ ಕನೆಕ್ಷನ್: ಈಗಾಗಲೇ ಅಮೃತ್ ಸಿಟಿ ಯೋಜನೆಯಡಿಯಲ್ಲಿ ನಗರದ 15 ವಾರ್ಡ್ ಗಳಲ್ಲಿ ಯುಜಿಡಿ ಕಾಮಗಾರಿ ಕೆಲಸ ಮುಗಿದಿದ್ದು, ಮೊದಲ ಹಂತದ 39 ಕಿ.ಮೀ ನೆಟ್ವರ್ಕ್ ನಲ್ಲಿ ಸುಮಾರು 9,300 ಮನೆಗಳ ಪೈಕಿ 8,900 ಮನೆಗಳಿಗೆ ಕನೆಕ್ಷನ್ ಕೊಡಲಾಗಿದೆ. 14 ಕಿ.ಮೀ ನೆಟ್ವರ್ಕ್ ನಲ್ಲಿ 5 ಸಾವಿರ ಮನೆಗಳ ಪೈಕಿ 3 ಸಾವಿರ ಮನೆಗಳಿಗೆ ಕನೆಕ್ಷನ್ ನೀಡಲಾಗಿದ್ದು, 2 ಸಾವಿರ ಮನೆಗಳಿಗೆ ಕನೆಕ್ಷನ್ ಕೊಡುವುದು ಬಾಕಿ ಇದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧಿಕಾರಿಗಳು ಹೇಳುತ್ತಾರೆ.

KPL 1 4

ಹೊರ ರಾಜ್ಯದ ಕಂಪನಿಗೆ ಗುತ್ತಿಗೆ: ಈ ಕಾಮಗಾರಿಯನ್ನು ಅಹಮದಾಬಾದ್ ಮೂಲಕ ಪಿ.ಸಿ.ಸ್ನೇಹಲ್ ಕನ್ಸಷ್ಟ್ರಕ್ಷನ್‍ಗೆ ಟೆಂಡರ್ ನೀಡಲಾಗಿದೆ. ಇದರ ನಿರ್ವಹಣೆ ಜವಾಬ್ದಾರಿಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ (ಕೆಯುಡಬ್ಲೂಎಸ್)ಗೆ ವಹಿಸಲಾಗಿದೆ. ಆದರೆ, ಟೆಂಡರ್‍ದಾರರಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ನಿಗದಿಪಡಿಸಿದ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳದೇ ವಿಳಂಬವಾಗುತ್ತಿದೆ.

ಸಂಚಾರಕ್ಕೆ ತೊಂದರೆ: ನಗರದ ಡಾಂಬರು, ಸಿಸಿ ರಸ್ತೆಗಳನ್ನು ಅಗೆದು ಪೈಪ್‍ಲೈನ್ ಮಾಡಲಾಗುತ್ತಿದೆ. ತಗ್ಗು, ಗುಂಡಿ ತೋಡಿ ಹಾಗೆಯೇ ಬಿಟ್ಟಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.

ಒಟ್ಟಿನಲ್ಲಿ ನಾನಾ ವಾರ್ಡ್, ಕಾಲೋನಿ, ಸ್ಲಂ ಏರಿಯಾಗಳಲ್ಲಿ ಯುಜಿಡಿಯ ಅರೆಬರೆ ಕಾಮಗಾರಿಯಿಂದ ತೀವ್ರ ತೊಂದರೆಯಾಗಿದೆ. ಪೈಪ್‍ಲೈನ್ ಹಾಕುವುದರಲ್ಲೇ ವರ್ಷಾನುಗಟ್ಟಲೇ ಕಾಲಹರಣ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.

Share This Article
Facebook Whatsapp Whatsapp Telegram
Previous Article MND 5 ಮೈ ಶುಗರ್ ಅಳಿವು ಉಳಿವಿಗೆ ಮಹತ್ವದ ಸಭೆ
Next Article klr old couple collage ಸಾವಿನಲ್ಲೂ ಒಂದಾದ ಆದರ್ಶ ವೃದ್ಧ ದಂಪತಿ

Latest Cinema News

Anushka Shetty
ಪತ್ರ ಬರೆದು ಅಭಿಮಾನಿಗಳಿಗೆ ಶಾಕ್ ಕೊಟ್ಟ ಅನುಷ್ಕಾ ಶೆಟ್ಟಿ!
Cinema Latest South cinema Top Stories
ranbir kapoor ramayana
ರಾಮನ ಪಾತ್ರಕ್ಕಾಗಿ ಮಾಂಸಾಹಾರ, ಮದ್ಯ ಸೇವನೆ ಬಿಟ್ಟಿದ್ದರಂತೆ ರಣ್‌ಬೀರ್ ಕಪೂರ್
Cinema Latest Sandalwood Top Stories
S Narayan
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
Bengaluru City Cinema Latest Sandalwood Top Stories
vishnuvardhan b.saroja devi
ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
Bengaluru City Cinema Latest Main Post Sandalwood
Madenur Manu 22
`ಮುತ್ತರಸ’ನಾದ ಮಡೆನೂರು ಮನು
Cinema Latest Sandalwood

You Might Also Like

pitru karya
Latest

ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಗೋಕರ್ಣದಲ್ಲಿ ಪಿತೃಕಾರ್ಯ

12 minutes ago
Shivanandh Patil 2
Bengaluru City

2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ ರೂಪಿಸಲು ಕ್ರಮ: ಶಿವಾನಂದ ಪಾಟೀಲ್‌

14 minutes ago
pm modi droupadi murmu radhakrishnan
Latest

ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು: ಮುರ್ಮು, ಮೋದಿ, ರಾಧಾಕೃಷ್ಣನ್‌ ಬಗ್ಗೆ ಬಿಎಲ್‌ ಸಂತೋಷ್‌ ಮಾತು

38 minutes ago
woman stabbed by neighbour in brahmavar
Crime

ಬ್ರಹ್ಮಾವರ | ನಂಬರ್ ಬ್ಲಾಕ್ ಮಾಡಿದ್ದಕ್ಕೆ ಯುವತಿಯ ಕತ್ತು, ಎದೆಗೆ ಚಾಕು ಇರಿದ ಪಾಗಲ್ ಪ್ರೇಮಿ

1 hour ago
POWER
Bengaluru City

ಬೆಂಗಳೂರು | ನಗರದ ಹಲವೆಡೆ ಶನಿವಾರ ವಿದ್ಯುತ್ ವ್ಯತ್ಯಯ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?