Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಮಮಂದಿರ ನಿರ್ಮಾಣದಲ್ಲಿ ಹನುಮನ ನಾಡಿನ ಶಿಲ್ಪಿ

Public TV
Last updated: January 13, 2024 9:42 pm
Public TV
Share
2 Min Read
Koppal Ayodhya 1
SHARE

ಕೊಪ್ಪಳ: ಶ್ರೀರಾಮಚಂದ್ರನ ಜನ್ಮ ಭೂಮಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ರಾಮನ ಭಕ್ತನಾಗಿರುವ ಹನುಮನ ನಾಡಿನಿಂದ ಶಿಲ್ಪಿ ಓರ್ವ ಹೋಗುವ ಮೂಲಕ ದೇವಸ್ಥಾನ ನಿರ್ಮಾಣದ ಕೆತ್ತನೆಯ ಕೆಲಸದಲ್ಲಿ ನಿರತರಾಗಿ ವಾಪಸ್ಸು ಬಂದಿದ್ದಾರೆ.

Koppal Ayodhya

ಕೊಪ್ಪಳದ (Koppal) ಗಂಗಾವತಿ (Gangavati) ನಗರದ 24ನೇ ವಾರ್ಡಿನ ಲಕ್ಷ್ಮಿಕ್ಯಾಂಪ್ ನಿವಾಸಿಯಾಗಿರುವ ಶಿಲ್ಪಿ ಪ್ರಶಾಂತ್ ಸೋನಾರ್ ಎನ್ನುವವರು ಸರಿಸುಮಾರು 45 ದಿನಗಳ ಕಾಲ ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ ನಿರ್ಮಾಣ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಂದಿನಿಂದಲೂ ಚಿತ್ರಗಳನ್ನು ಬಿಡಿಸುವ, ಶಿಲ್ಪಗಳನ್ನು ಕೆತ್ತುವ ಆಸಕ್ತಿಯನ್ನು ಹೊಂದಿದ್ದ ಪ್ರಶಾಂತ್ ಅವರು ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ನಡೆಯುವ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಆಸಕ್ತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ನಂತರ ಚೆನ್ನಪಟ್ಟಣ ತಾಲೂಕಿನ ಕೆಂಗಲ್ ಗ್ರಾಮದ ಶ್ರೀಗಂಗರಸ ಶಿಲ್ಪಕಲಾ ಶಿಕ್ಷಣ ಕೇಂದ್ರದಲ್ಲಿ ಸುಮಾರು 5 ವರ್ಷಗಳ ಕಾಲ ಶಿಲ್ಪಕಲೆಯ ಕುರಿತು ಶಿಕ್ಷಣ ಪಡೆದುಕೊಂಡು, ಸುಮಾರು ಕಡೆಗಳಲ್ಲಿ ಶಿಲ್ಪ ಕಲೆಗಳ, ದೇವರ ಮೂರ್ತಿಗಳ ಕೆತ್ತನೆಯ ಕೆಲಸ ಮಾಡಿ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಇವರಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ, ಧಾರವಾಡದ ಮುಖ್ಯಶಿಲ್ಪಿಯಾಗಿರುವ ರವೀಂದ್ರ ಆಚಾರ್ ಅವರ ಸಂದೇಶದ ಮೇರೆಗೆ ಕರ್ನಾಟಕದಿಂದ 4 ಜನ ಶಿಲ್ಪಿಗಳು ಅಯೋಧ್ಯೆಯನ್ನು ತಲುಪಿದ್ದರು. ಅದರಲ್ಲಿ ಪ್ರಶಾಂತ್ ಸೋನಾರ್ ಕೂಡ ಒಬ್ಬರಾಗಿದ್ದಾರೆ. ಇವರನ್ನು ಅಯೋಧ್ಯೆ ರಾಮಮಂದಿರ ನಿರ್ಮಾಣ ಕೆಲಸಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಸಂವಿಧಾನದ ಮೂಲಭೂತ ಹಕ್ಕುಗಳ ಭಾಗದಲ್ಲಿ ಶ್ರೀರಾಮ-ಲಕ್ಷ್ಮಣ, ಸೀತಾದೇವಿಯ ಚಿತ್ರಗಳಿವೆ: ಜಗದೀಪ್‌ ಧನಕರ್‌

Koppal Ayodhya 2

 

ಮಂದಿರ ಗರ್ಭ ಗುಡಿಯಲ್ಲಿ ಕೆಲಸ: ರಾಜ್ಯದಲ್ಲಿ ಅಯೋಧ್ಯೆಗೆ ಹೋಗಿರುವ 4 ಜನ ಶಿಲ್ಪಿಗಳಲ್ಲಿ ಪ್ರಶಾಂತ್ ಸೋನಾರ್ ಅವರಿಗೆ ರಾಮಮಂದಿರದ ಗರ್ಭ ಗುಡಿಯಲ್ಲಿ ಕೆತ್ತನೆ ಮಾಡುವ ಕೆಲಸ ನೀಡಲಾಗಿತ್ತು. ಸುಮಾರು 45 ದಿನಗಳ ಕಾಲ ರಾಮಮಂದಿರ ನಿರ್ಮಾಣ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ದೇವಸ್ಥಾನದ ಗರ್ಭಗುಡಿ ಬಳಿಯ ಕಂಬಗಳಲ್ಲಿ ಬಳ್ಳಿ ಕೆತ್ತನೆ, ಕಂಬಗಳಲ್ಲಿ ವಿಗ್ರಹಗಳ ಕೆತ್ತನೆ ಕೆಲಸವನ್ನು ಮಾಡಲಾಗಿದೆ. ಇವರಿಗೆ ನೀಡಿದ ಕೆಲಸ ಪೂರ್ಣಗೊಳಿಸಿ, ವಾಪಸ್ಸು ಬಂದಿದ್ದು, ದೇವಸ್ಥಾನ ಉದ್ಘಾಟನೆಯ ನಂತರವೂ ಸಹ ಇನ್ನೂ ದೇವಸ್ಥಾನ ಕೆಲಸ ನಡೆಯಲಿದೆ. ಮತ್ತೆ ಆಹ್ವಾನ ಬಂದರೆ ಮತ್ತೆ ಹೋಗಿ ಶ್ರೀರಾಮಚಂದ್ರನ ಸೇವೆಯನ್ನು ಮಾಡುವೆ ಎನ್ನುವ ಆಶಯವನ್ನು ಪ್ರಶಾಂತ್ ಸೋನಾರ್ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ಗೆ ಆಹ್ವಾನ

Koppal ayodhya 1 1

ಫುಲ್ ಟೈಟ್ ಸೆಕ್ಯೂರಿಟಿ:
ಅಯೋಧ್ಯೆಯ ರಾಮಮಂದಿರದಲ್ಲಿನ ಹೊರಾಂಗಣದ ಸ್ತಂಭ, ಶಿಲಾ ಕೃತಿಗಳ ಕೆತ್ತನೆ ಕಾರ್ಯದಲ್ಲಿ ಸುಮಾರು 45 ದಿನಗಳನ್ನು ಕಳೆದಿರುವ ಗಂಗಾವತಿಯ ಶಿಲ್ಪ ಕಲಾವಿದ ಪ್ರಶಾಂತ್ ಸೋನಾರ್ ಅದೊಂದು ಅದ್ಭುತ ಅನುಭವ ಎಂದು ಹೇಳಿಕೊಳ್ಳುತ್ತಾರೆ. ಬೆಳಗ್ಗೆ ಎಂಟು ಗಂಟೆಗೆ ಶುರುವಾಗುತ್ತಿದ್ದ ಕೆಲಸ, ಸಂಜೆ ಆರು ಗಂಟೆಗೆ ಮುಗಿಯುತ್ತಿತ್ತು. ಅತ್ಯಂತ ಟೈಟ್ ಸೆಕ್ಯೂರಿಟಿಯಲ್ಲಿ ನಾವು ಕೆಲಸ ಮಾಡಬೇಕಿತ್ತು. ಮುಖ್ಯವಾಗಿ ನಮಗೆ ಕೊಟ್ಟ ಕೆಲಸವಷ್ಟೆ ಮಾಡಬೇಕಿತ್ತು. ನಮ್ಮ ತಂಡದ ಸದಸ್ಯರನ್ನು ಹೊರತು ಪಡಿಸಿದರೆ ಬೇರೆ ಗುಂಪಿನೊಂದಿಗೆ ಪರಸ್ಪರ ಮಾತುಕತೆಗೆ ಆಸ್ಪದ ಇರುತ್ತಿರಲಿಲ್ಲ. ಮುಖ್ಯವಾಗಿ ನಾವು ಮಾಡುವ ಕೆಲಸದ ತಾಣಕ್ಕೆ ಮೊಬೈಲ್‌ಗಳನ್ನು ತೆಗೆದುಕೊಂಡು ಹೋಗುವಂತಿರಲಿಲ್ಲ. ಅನಗತ್ಯ ಯಾರೊಂದಿಗೂ ಮಾತನಾಡುವಂತಿರಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯಸಭೆಗೆ ಅವಕಾಶ ನೀಡಿ, ಲೋಕಸಭೆಯಲ್ಲಿ 3 ಕ್ಷೇತ್ರ ಗೆಲ್ಲಿಸುವೆ: ಅಮಿತ್ ಶಾ ಮುಂದೆ ಸೋಮಣ್ಣ ಮನವಿ

TAGGED:AyodhyaGangavathiKoppalRam MandirSculptorಅಯೋಧ್ಯೆಕೊಪ್ಪಳಗಂಗಾವತಿರಾಮಮಂದಿರಶಿಲ್ಪಿ
Share This Article
Facebook Whatsapp Whatsapp Telegram

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
2 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
2 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
3 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
3 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
3 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?