ಹಾವೇರಿ: ಐಟಿ ದಾಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಐಟಿ ದಾಳಿ ಆದಾಯಕ್ಕೆ ಮೀರಿ ಸಂಪಾದನೆ ಮಾಡಿದವರ ಬಗ್ಗೆ ವೀಕ್ಷಣೆ ಮಾಡುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಹೇಳಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ನಮ್ಮ ಸರ್ವೋಚ್ಚ ನಾಯಕ. ಐಟಿ ದಾಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಐಟಿ ದಾಳಿ ಆದಾಯಕ್ಕೆ ಮೀರಿ ಸಂಪಾದನೆ ಮಾಡಿದವರ ಬಗ್ಗೆ ವೀಕ್ಷಣೆ ಮಾಡುತ್ತದೆ. ಹೀಗಾಗಿ ರಾಜಕೀಯಕ್ಕೂ, ಐಟಿ ದಾಳಿಗೂ ಸಂಬಂಧ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಬಾಯಿಗೆ ಬಂದಂತೆ ಮಾತನಾಡಲು ಜನರು ನಮ್ಮನ್ನು ಆಯ್ಕೆ ಮಾಡಿಲ್ಲ: ಹಾಲಪ್ಪ
ಇದೇ ವೇಳೆ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ನಡೆಯುತ್ತಿದೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಲುಪಿಸುತ್ತೇವೆ. ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಪಡೆಯುತ್ತಾರೆ ಹೇಳಿದ್ದಾರೆ. ಇದನ್ನೂ ಓದಿ: ಬಟ್ಟೆ ಒಗೆಯುವುದನ್ನು ಹೇಳಿಕೊಡುತ್ತೆ ಚಿಂಪಾಂಜಿ- ವೀಡಿಯೋ ವೈರಲ್
ಯಾರನ್ನು ನಿರಾಕರಿಸಿಲ್ಲ ಅವರವರ ಹಕ್ಕುಗಳನ್ನು ಕೇಳುವುದು ಸಹಜ. ಪಕ್ಷ ಎಲ್ಲವನ್ನೂ ತೀರ್ಮಾನ ಮಾಡಿ ಟಿಕೆಟ್ ಘೋಷಣೆ ಮಾಡಿದೆ. ಈಗ ಶಿವರಾಜ್ ಸಜ್ಜನರ್ ಒಮ್ಮತ್ತದ ಅಭ್ಯರ್ಥಿಯಾಗಿದ್ದಾರೆ. ಶಿವರಾಜ್ ಸಜ್ಜನರ್ ಗೆಲುವು ನಿಶ್ಚಿತವಾಗಿದೆ ಎಂದು ನುಡಿದಿದ್ದಾರೆ.