ಬೆಂಗಳೂರು: ಹಿಂದೂ ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ ಅಂತ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸರ್ಕಾರದ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಹಸ್ತಾಂತರ ವಿಚಾರ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದರು. ಬಿಜೆಪಿ, ಆರ್ ಎಸ್.ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನ ಹಸ್ತಾಂತರಿಸುವ ಅಜೆಂಡಾ ಎಂಬ ಡಿಕೆಶಿ ಆರೋಪಕ್ಕೆ ತಿರುಗೇಟು ನೀಡಿದರು.
ಹಿಂದೂ ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ. ಭಕ್ತರು ಅಂದ್ರೆ ಬಿಜೆಪಿ, ಆರ್.ಎಸ್.ಎಸ್ ಕಾರ್ಯಕರ್ತರು ಆಗಿರಬಹುದು. ಡಿಕೆಶಿ ಶಿವಕುಮಾರ್ ಕೂಡ ಆಗಿರಬಹುದು. ಭಕ್ತರು ಅಂದ್ರೆ ಎಲ್ಲರು ಬರುತ್ತಾರೆ. ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ ಎಂದರು. ಇದನ್ನೂ ಓದಿ: ಸರ್ಕಾರಿ ನಿಯಂತ್ರಣದ ದೇಗುಲಗಳಿಗೆ ಶೀಘ್ರ ಸ್ವಾತಂತ್ರ್ಯ- ಆದಾಯ ದೇವಾಲಯಗಳ ಅಭಿವೃದ್ಧಿಗೆ ಮೀಸಲು
ಇದೇ ವೇಳೆ ಉಡುಪಿ ಜಿಲ್ಲೆಯ ಕೋಟಾದಲ್ಲಿ ಗಿರಿಜನರ ಮೇಲೆ ಪೋಲಿಸರು ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿಎಸ್ಐ, ಸಸ್ಪೆಂಡ್ ಆರು ಜನರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್ಪಿ ಮತ್ತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದ್ದೆ. ಅಲ್ಲಿರುವ ಪರಿಸ್ಥಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೆ ಎಂದರು.
ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನುಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ಗೃಹಸಚಿವರು ಸೂಚಿಸಿದ್ದಾರೆ. ಕೊರಗರ, ಗಿರಿಜನರ, ದಲಿತ ಬಂಧುಗಳಿಗೆ ಭಯಪಡುವ ಅವಶ್ಯಕತೆ ಇಲ್ಲ. ನಾನು, ಗೃಹ ಸಚಿವರು ಹಾಗೂ ಸರ್ಕಾರ ನಿಮ್ಮ ಜೊತೆ ಇದೆ. ಏನಾದರೂ ಇದ್ರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.