ಕಾಗೋಡು ತಿಮ್ಮಪ್ಪ ಹಿರಿಯರು, ಪಕ್ಷದ ಆಂತರಿಕ ವಿಚಾರ ಮಾತಾಡಲ್ಲ: ಖಂಡ್ರೆ

Public TV
1 Min Read
Eshwar Khandre Kagodu Thimmappa

ರಾಯಚೂರು: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬವಾಗಿದೆ. ಎಲ್ಲಾ ಆಯಾಮಗಳ ಬಗ್ಗೆ ಯೋಚಿಸಿ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತೆ ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಖಂಡ್ರೆ, ಕಾಗೋಡು ತಿಮ್ಮಪ್ಪ ಪಕ್ಷದ ಹಿರಿಯರು ಅವರ ಅಭಿಪ್ರಾಯ ಪರಿಗಣಿಸಲಾಗುತ್ತದೆ. ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಆಂತರಿಕ ವಿಚಾರಗಳನ್ನ ನಾನು ಮಾತನಾಡುವುದಿಲ್ಲ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹರಿಹಾಯ್ದ ಖಂಡ್ರೆ, ಕ್ರೂರ ರೀತಿಯಲ್ಲಿ ರಾಜ್ಯ ಕೇಂದ್ರ ಸರ್ಕಾರ ವರ್ತನೆ ಮಾಡುತ್ತಿವೆ. ಕೋಮುಸೌಹಾರ್ದ ಕದಡುವ ಹೇಳಿಕೆಯನ್ನ ಬಿಜೆಪಿ ನಾಯಕರು ನೀಡುತ್ತಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವುದಿರಲಿ ಯುವಕರ ಉದ್ಯೋಗಗಳೇ ಹೋಗುತ್ತಿವೆ. ದೇಶ ಆರ್ಥಿಕವಾಗಿ ಕುಸಿಯುತ್ತಾ ಹೋಗುತ್ತಿದೆ. ರೈತರ ಕೃಷಿ ಭಾಗ್ಯ ಯೋಜನೆ ಕೈಬಿಡಲಾಗಿದೆ. ಅಸಂವಿಧಾನಿಕ ಕಾಯಿದೆ ರೂಪಿಸಿ ಜಾತಿ ಜಾತಿ ಮಧ್ಯೆ ಜಗಳ ತರುತ್ತಿದ್ದಾರೆ. ವಿಧಾನಸಭಾ ಅಧಿವೇಶನ ವೇಳೆ ಒಳಗೆ ಹಾಗೂ ಹೊರಗಡೆ ಹೋರಾಟ ಮಾಡುತ್ತೇವೆ. ಇದುವರೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಲಿ ಅಂತ ಈಶ್ವರ ಖಂಡ್ರೆ ಸರ್ಕಾರಕ್ಕೆ ಸವಾಲು ಹಾಕಿದರು.

Eshwara Khandre

ರೈತ ವಿರೋಧಿ ಕ್ರಮಗಳನ್ನ ಸರ್ಕಾರ ತೆಗೆದುಕೊಳ್ಳುತ್ತಿದೆ. ನಮ್ಮ ಸರ್ಕಾರ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳ ಅನುಕೂಲ ಮಾಡಲಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕೃಷಿ ಹೊಂಡಗಳನ್ನ ಸ್ಥಗಿತಗೊಳಿಸಲಾಗಿದೆ. ರೈತರ ಬೇಡಿಕೆಯಿದ್ದರೂ ಸ್ಪ್ರಿಕ್ಲರ್ ಸೆಟ್ ಗಳನ್ನ ರೈತರಿಗೆ ನೀಡುತ್ತಿಲ್ಲ. ಇದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ದಿವಾಳಿ ಹಂತದಲ್ಲಿವೆ ಅನ್ನೊದು ತಿಳಿಯುತ್ತೆ ಎಂದರು.

ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಹೊಸ ಕಾಯಿದೆ ಅವಶ್ಯಕತೆಯಿರಲಿಲ್ಲ. ಈಗಾಗಲೇ ಪೌರತ್ವ ಕಾಯಿದೆ ಇದೆ. ಆದ್ರೆ ಈಗ ಧರ್ಮಾಧಾರಿತ ಕಾಯಿದೆ ಜಾರಿಗೆ ತರುವುದು ಸರಿಯಲ್ಲ ಅಂತ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *