ಮಿನಿಸ್ಟರ್‌ಗಳು ಏನೇನೋ ಮಾತಾಡ್ತಿದ್ದಾರೆ, ಅವರಿಗೆ ಒಳ್ಳೆಯದಾಗ್ಲಿ ರಾಜ್ಯಕ್ಕೂ ಹಿತವಾಗ್ಲಿ: ಡಿಕೆಶಿ

Public TV
1 Min Read
DK Shivakumar 2

ಮೈಸೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಸುವ ಪಾದೆಯಾತ್ರೆಗೆ ಮಿನಿಸ್ಟರ್ ಗಳು ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ, ರಾಜ್ಯಕ್ಕು ಹಿತವಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

MYS DK SHIVAKUMAR

ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ್ಳೆಯ ಕಾರ್ಯ ಮಾಡುವ ಮುನ್ನ ಚಾಮುಂಡೇಶ್ವರಿ ದೇವಿಗೆ ಪೂಜೆ ಮಾಡಿದ್ದೇನೆ. ಎಲ್ಲಾ ಅಡಚಣೆ ಸಂಹಾರ ಮಾಡುವ ಶಕ್ತಿ ದೇವಿಗೆ ಇದೆ. ಹಿಂದಿನಿಂದ ದೇವಿಯ ಶಕ್ತಿಯನ್ನ ನಾವು ನಂಬಿಕೊಂಡಿದ್ದೇವೆ. ಅದಕ್ಕಾಗಿ ನಾವು ಹೋರಾಟಕ್ಕೂ ಮುನ್ನ ದೇವರ ದರ್ಶನ ಮಾಡಿದ್ದೇವೆ. ರಾಜ್ಯದ ಹಿತಕ್ಕಾಗಿ ನಾವು ಈ ಮೇಕೆದಾಡ ಹೋರಾಟ ಮಾಡುತ್ತಿದ್ದೇವೆ. ಕುಡಿಯುವ ನೀರನ್ನು ಜನರಿಗೆ ಕೊಡಬೇಕು ಅನ್ನೋದು ನಮ್ಮ ಹೋರಾಟ ಎಂದರು.

MYS DK SHIVAKUMAR 1

ಇದೇ ವೇಳೆ ಬಿಜೆಪಿ ನಾಯಕರ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಿನಿಸ್ಟರ್ ಗಳು ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ, ರಾಜ್ಯಕ್ಕೂ ಹಿತವಾಗಲಿ. ಅವರು ಈಗ ಗಿಮಿಕ್ ಅಂತಿದ್ದಾರೆ. ವಾಜಪೇಯಿ ಕಾಲದಲ್ಲಿ ಅಡ್ವಾಣಿಯವರು ರಥಯಾತ್ರೆ ಮಾಡಿದ್ರು. ದೇವೆಗೌಡರು ಹಿಂದೆ ಬೇಕಾದಷ್ಟು ಯಾತ್ರೆಗಳನ್ನು ಮಾಡಿದ್ರು ಅದಕ್ಕೆ ಏನಂತ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಬಿಕ್ಕಟ್ಟು – ಸುಡಾನ್‌ ಪ್ರಧಾನಿ ರಾಜೀನಾಮೆ ಘೋಷಣೆ

MYS DK SHIVAKUMAR 2

ಕುಮಾರಸ್ವಾಮಿಯವರು ಯಾತ್ರೆ ಮಾಡ್ತೀನಿ ಅಂತಾ ಇದ್ದಾರೆ. ಯಡಿಯೂರಪ್ಪನವರು ಐದು ತಂಡ ಮಾಡಿಕೊಂಡು ಯಾತ್ರೆ ಮಾಡ್ತೀನಿ ಅಂದ್ರು. ಇದಕ್ಕೆಲ್ಲ ಏನ್ ಅಂತ ಹೇಳಬೇಕು. ಎಲೆಕ್ಷನ್ ಟೈಮ್ ನಲ್ಲಿ ಇಡೀ ದೇಶದಲ್ಲಿ ಎಲ್ಲೂ ಕೊರೊನಾ ಇರಲಿಲ್ವಾ..?, ಈಗ ಮಾತನಾಡುತ್ತಿರುವವರಿಗೆ ಒಳ್ಳೆಯದಾಗಲಿ ಎಂದು ಡಿಕೆಶಿ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *