ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ ಡಿ.ಕೆ ಶಿವಕುಮಾರ್

Public TV
1 Min Read
DK

– ಸಿಎಂ ಬಿಎಸ್‍ವೈ ಬಳಿ ಡಿಕೆಶಿ ಮನವಿ

ಬೆಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ಇದೀಗ ಮತ್ತೆ ಮೇ 17ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾತ್ರೋ ರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.

DK 2

ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಕಡೆಯ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಮಾರಾಟ ಮಾಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ ಅವರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದರು.

ಹೀಗಾಗಿ ಬೆಂಗಳೂರಿನ ಕೆ.ಆರ್. ಪುರ ಮಾರುಕಟ್ಟೆ ಸಮೀಪ ಶುಕ್ರವಾರ ಮಧ್ಯರಾತ್ರಿ 12.15ರ ಸುಮಾರಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರೈತರ ಸಮಸ್ಯೆ ಆಲಿಸಿದ್ದಾರೆ. ಅಲ್ಲದೆ ಅವರಿಗೆ ನೆರವಾಗುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಲ್ಲಿಂದಲೇ ಮನವಿ ಮಾಡಿದರು.

DK 3

ಇದೇ ವೇಳೆ ಹಲವಾರು ರೈತರು ತಮಗಾಗುತ್ತಿರುವ ತೊಂದರೆ ಬಗ್ಗೆ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ನಿವೇದಿಸಿಕೊಂಡಿದ್ದರು. ಶಿವಕುಮಾರ್ ಅವರ ಭೇಟಿ ಸಂದರ್ಭದಲ್ಲಿ ಎಂಎಲ್ ಸಿ ನಾರಾಯಣ ಸ್ವಾಮಿ ಹಾಗೂ ಹೊಸಕೋಟೆ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಾರಾಯಣಗೌಡ ಜೊತೆಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *