Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇದಿಕೆಯಲ್ಲೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೇದಿಕೆಯಲ್ಲೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ

Bengaluru City

ವೇದಿಕೆಯಲ್ಲೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ

Public TV
Last updated: June 18, 2022 5:26 pm
Public TV
Share
2 Min Read
DK SHIVAKUMAR 1
SHARE

ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಸಿದ್ಧಪಡಿಸಿರುವ ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ, ಬೆಂಗಳೂರಿನಲ್ಲಿಂದು ಹಲವು ಸಂಘಟನೆಗಳು ಬೃಹತ್ ಪ್ರತಿಭಟನೆಯನ್ನ ನಡೆಸಿವೆ. ಈ ಪ್ರತಿಭಟನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಾಥ್ ಕೊಟ್ಟಿದ್ದು, ಸರ್ಕಾರ ವಿರುದ್ಧ ಕಿಡಿಕಾರಿದ್ರು.

DK SHIVAKUMAR 2

ಪರಿಷ್ಕೃತ ಪಠ್ಯಪುಸ್ತಕಗಳ ವಿವಾದ ತಾರಕಕ್ಕೇರಿದೆ. ಕುವೆಂಪು ಪಠ್ಯದಲ್ಲಿನ ಲೋಪ ವಿರೋಧಿಸಿ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಆಕ್ರೋಶ ಸ್ಫೋಟವಾಗಿದೆ. ಇಂದು ಬೆಂಗಳೂರಿನಲ್ಲಿ ರೋಹಿತ್ ಚಕ್ರತೀರ್ಥರನ್ನ ಕೂಡಲೇ ಬಂಧಿಸಬೇಕು. ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ್ರು. ಈ ಸಭೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಿದ್ರು. ವೇದಿಕೆಯ ಮೇಲೆ ಪರಿಷ್ಕೃತ ಪಠ್ಯಪುಸ್ತಕದ ಕಾಪಿಯನ್ನ ಡಿಕೆ ಶಿವಕುಮಾರ್ ಹರಿದು ಹಾಕಿ ಸರ್ಕಾರದ ವಿರುದ್ಧ ಗುಡುಗಿದ್ರು. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೆಗೌಡರು ಕೂಡ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ್ರು.

HDD

ಪಠ್ಯ ಪರಿಷ್ಕರಣೆಯ ಹೆಸರಿನಲ್ಲಿ ಶಿಕ್ಷಣವನ್ನು ಕೇಸರಿಕರಣ ಮಾಡಲಾಗುತ್ತಿದೆ. ಕುವೆಂಪು ಸೇರಿದಂತೆ ಗಣ್ಯರಿಗೆ ಅವಮಾನ ಮಾಡಲಾಗುತ್ತಿದೆ. ಇದಕ್ಕೆ ಕಾರಣರಾಗಿರುವ ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ರನ್ನ ಕೂಡಲೇ ಬಂಧಿಸಬೇಕು. ಸಮಿತಿಯಿಂದ ವಜಾಗೊಳಿಸಬೇಕು ಅಂತ ಕನ್ನಡ ಸಂಘಟನೆಗಳು, ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ನಗರದ ಸಂಗೋಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್ ತನಕ ರ್ಯಾಲಿಯನ್ನ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶವನ್ನ ಹೊರ ಹಾಕಿದ್ರು. ಇದನ್ನೂ ಓದಿ; ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

ಕೆಪಿಸಿಸಿ ಅಧ್ಯಕ್ಷರಾದ @DKShivakumar
ಅವರು, ಕುವೆಂಪು, ಬಸವಣ್ಣ, ಅಂಬೇಡ್ಕರ್ ಸೇರಿದಂತೆ ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು. pic.twitter.com/qcjH8Sk76k

— Karnataka Congress (@INCKarnataka) June 18, 2022

ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲು ಸರ್ಕಾರಕ್ಕೆ 10 ದಿನಗಳ ಗಡುವು ಕೊಡ್ತೇವೆ ಅಂತ ಹೋರಾಟಗಾರರು ಸರ್ಕಾರಕಕ್ಕೆ ಎಚ್ಚರಿಸಿದ್ದಾರೆ. ಯಾವುದಕ್ಕೂ ಬಗ್ಗದ ಶಿಕ್ಷಣ ಸಚಿವರು, ಯಾವ್ದೇ ಕಾರಣಕ್ಕೂ ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲ್ಲ. ಸಲಹೆಗಳಿದ್ರೆ ಕೊಡಬಹುದು, ಸ್ವೀಕರಿಸ್ತೇವೆ. ಯಾವ ದಾರ್ಶನಿಕರಿಗೂ ಅವಮಾನ ಮಾಡಿಲ್ಲ ಅಂತ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ. ಕುವೆಂಪು ಅವ್ರ ಹೆಚ್ಚುವರಿ ಪಠ್ಯ ಸೇರಿಸೋದು ನಮ್ಮ ಸರ್ಕಾರ. ರಾಜಕೀಯ ಮಾಡಲು ಪಠ್ಯಪುಸ್ತಕವನ್ನ ಬಳಸಿಕೊಳ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡ್ತಿದೆ. ಯಾವ್ದೇ ಕಾರಣಕ್ಕೂ ಪಠ್ಯ ಪುಸ್ತಕ ವಾಪಸ್ ಪಡೆಯೋಲ್ಲ ಅಂತ ಖಡಕ್ಕಾಗಿ ಹೇಳಿದ್ದಾರೆ.

ಪಠ್ಯ ಪರಿಷ್ಕರಣೆಯ ವಿರುದ್ಧದ ಹೋರಾಟದಲ್ಲಿ ಮಠಾಧೀಶರು, ಚಿಂತಕರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲ ಗೌಡ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್, ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಸೇರಿದಂತೆ ಹಲವರು ಭಾಗಿಯಾಗಿ, ಸರ್ಕಾರದ ವಿರುದ್ಧ ಗುಡುಗಿದ್ರು. ಅದೇನೇ ಆಗ್ಲಿ, ಈ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತೆ. ಯಾವಾಗ ಈ ವಿವಾದಕ್ಕೆ ಇತೀಶ್ರೀ ಸಿಗುತ್ತೆ ಅನ್ನೋದನ್ನಕಾದು ನೋಡಬೇಕಿದೆ.

Live Tv

TAGGED:congresDK Shivakumartext Bookಕಾಂಗ್ರೆಸ್ಡಿಕೆ ಶಿವಕುಮಾರ್ಪಠ್ಯ ಪುಸ್ತಕ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
13 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
33 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?