ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸಿದರೆ ನೀವು ಹಿಂದುಳಿದ ವರ್ಗದ ನಾಯಕರಾಗುವುದು ಇರಲಿ, ನಿಮ್ಮ ಜನಾಂಗದ ನಾಯಕರಾವುದಕ್ಕೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ದಿವಾಕರ್ ಅವರು ಸಚಿವ ಈಶ್ವರಪ್ಪ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಜಿಲ್ಲೆಯಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಈಶ್ವರಪ್ಪ ವಾರದಲ್ಲಿ 4 ದಿನ ಸಿದ್ದರಾಮಯ್ಯ ಅವರನ್ನು ಟೀಕೆ ಮಾಡುವುದರಲ್ಲಿಯೇ ಕಾಲ ಹರಣ ಮಾಡುತ್ತಿದ್ದಾರೆ. ನೀವು ಸಿದ್ದರಾಮಯ್ಯ ಅವರನ್ನು ಟೀಕೆ ಮಾಡಿದ ತಕ್ಷಣ ಹಿಂದುಳಿದ ವರ್ಗದ ನಾಯಕರಾಗುವುದು ಇರಲಿ, ನಿಮ್ಮ ಜನಾಂಗದ ನಾಯಕರು ಆಗುವುದಕ್ಕೂ ಸಾಧ್ಯವಿಲ್ಲ ಎಂದು ಮಾತಿನ ಚಾಟಿ ಬೀಸಿದರು.
- Advertisement 2
- Advertisement 3
ನೆರೆ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದಿವಾಕರ್ ಆರೋಪಿಸಿದರು. ಇಂದಿಗೂ ನೆರೆ ಪೀಡಿತರು ಸಂಕಷ್ಟದಲ್ಲಿದ್ದಾರೆ. ಆದರೂ ಕೂಡ ಸರ್ಕಾರ ಪರಿಹಾರ ವಿತರಿಸಲು ವಿಫಲವಾಗಿದೆ. ಅಲ್ಲದೆ ಕೇಂದ್ರ ಸರ್ಕಾರದಿಂದ ಸಮರ್ಪಕ ಪರಿಹಾರ ಪಡೆಯಲು ಸಹ ಸಾಧ್ಯವಾಗಿಲ್ಲ. ಪ್ರಧಾನಿಯವರ ಬಳಿ ಹೆಚ್ಚಿನ ಪರಿಹಾರ ಕೇಳಲು ನಿಮಗೆ ಸಾಧ್ಯವಾಗದಿದ್ದರೆ, ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿ ಎಂದು ಆಗ್ರಹಿಸಿದರು.