Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪೇಂದ್ರ ಪಕ್ಷದ ಪ್ರಣಾಳಿಕೆ ಬಿಡುಗಡೆ: 24 ಅಂಶಗಳು ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಪೇಂದ್ರ ಪಕ್ಷದ ಪ್ರಣಾಳಿಕೆ ಬಿಡುಗಡೆ: 24 ಅಂಶಗಳು ಇಲ್ಲಿದೆ

Bengaluru City

ಉಪೇಂದ್ರ ಪಕ್ಷದ ಪ್ರಣಾಳಿಕೆ ಬಿಡುಗಡೆ: 24 ಅಂಶಗಳು ಇಲ್ಲಿದೆ

Public TV
Last updated: December 24, 2017 5:31 pm
Public TV
Share
5 Min Read
UPPI MODI 4
SHARE

ಬೆಂಗಳೂರು: ನಟ ಹಾಗೂ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಸಂಸ್ಥಾಪಕ ಉಪೇಂದ್ರ ಅವರು ತಮ್ಮ ಪಕ್ಷದ ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

ಪ್ರಣಾಳಿಕೆಯಲ್ಲಿ ಇರುವ ಪ್ರಮುಖ ಅಂಶಗಳು:
1. ಸಂಪೂರ್ಣ ಪಾರದರ್ಶಕ, ಸರಳ, ಹೊಣೆಗಾರಿಕೆಯುಳ್ಳ, ಮಿತವ್ಯಯೀ ಹಾಗೂ ಪ್ರಜೆಗಳನ್ನೊಳಗೊಂಡ ಆಡಳಿತ.

2. ಪ್ರಜೆಗಳ ನೇರ ಸಂಪರ್ಕಕ್ಕಾಗಿ, ಸರ್ಕಾರದಿಂದ ಸರ್ಕಾರದ್ದೇ ಆದ ಟೆಲಿವಿಜನ್ ಚಾನಲ್, ಪ್ರತಿಯೊಂದು ಇಲಾಖೆಗಳಲ್ಲಿ ಹಾಗೂ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸಾಮಾಜಿಕ ಜಾಲತಾಣಗಳು (ಫೇಸ್‍ಬುಕ್, ಟ್ವಿಟರ್, ವೆಬ್‍ಸೈಟ್, ಯುಟ್ಯೂಬ್ ಚಾನಲ್) ಮತ್ತು ಮೊಬೈಲ್ ಅಪ್ಲಿಕೇಶನ್‍ಗಳನ್ನು ಪ್ರಾರಂಭಿಸಲಾಗುವುದು.

3. ಪ್ರಜೆಗಳು ಮೊಬೈಲ್ ಅಪ್ಲಿಕೇಶನ್‍ನಲ್ಲಿ ತಮ್ಮ ಕ್ಷೇತ್ರದ/ ಪ್ರದೇಶದ ಸಮಸ್ಯೆ/ ದೂರುಗಳನ್ನು (ಲಿಖಿತ, ಫೋಟೊ, ವಿಡಿಯೋ, ಆಡಿಯೋ ಮೂಲಕ) ಸಂಬಂಧಪಟ್ಟ ಇಲಾಖೆಗಳ ನೌಕರರು, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ (ಗ್ರಾಮ ಪಂಚಾಯತಿ ಸದಸ್ಯರು, ಕಾರ್ಪೋರೇಟರ್) ಸಲ್ಲಿಸಬಹುದು. ಪ್ರಜೆಗಳ ದೂರನ್ನು ನಿರ್ಧಿಷ್ಟ ಕಾಲಾವಧಿಯೊಳಗೆ ಪರಿಹರಿಸಲು ಸಂಬಂಧಪಟ್ಟವರು ವಿಫಲರಾದಲ್ಲಿ (ವಿಫಲರಾದವರು ಈ ಹೊಣೆಗಾರಿಕೆಯನ್ನು ಹೊರಬೇಕು) ಆ ದೂರು ಕೂಡಲೇ ಮೇಲ್ಮಟ್ಟದ ಅಧಿಕಾರಿಗಳಿಗೆ ಮತ್ತು ಜನ ಪ್ರತಿನಿಧಿಗಳಿಗೆ (ಶಾಸಕರು) ವರ್ಗಾವಣೆಗೊಳ್ಳುವುದು ಅವರು ನಿರ್ಧಿಷ್ಟ ಕಾಲಾವಧಿಯೊಳಗೆ ಆ ದೂರನ್ನು ಪರಿಹರಿಸಬೇಕು. ಈ ಪ್ರಕ್ರಿಯೆ ರಾಜ್ಯದ ಮುಖ್ಯಮಂತ್ರಿಗಳ ಕಛೇರಿವರೆಗೂ ವಿಸ್ತರಿಸಲ್ಪಟ್ಟಿರುತ್ತದೆ ಮತ್ತು ಸಂಪೂರ್ಣ ಪ್ರಕ್ರಿಯೆಯು ಪಾರದರ್ಶಕವಾಗಿ ಸಾರ್ವಜನಿಕವಾಗಿ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುತ್ತದೆ.

4. ಸಕಾಲಕ್ಕೆ ಸಮಸ್ಯೆಗಳು ಹಾಗೂ ದೂರುಗಳನ್ನು ಉತ್ತಮವಾಗಿ ಪರಿಹರಿಸಿದಂತಹ ಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಕಾರ್ಯಗಳನ್ನು ಪುರಸ್ಕರಿಸಲಾಗುವುದು ಮತ್ತು ಅಂಕಗಳನ್ನು ನೀಡಲಾಗುವುದು. ಈ ಅಂಕಗಳೇ ಚುನಾಯಿತ ಜನ ಪ್ರತಿನಿಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸಲು ಮುಖ್ಯ ಅರ್ಹತೆಗಳಾಗಿರುತ್ತವೆ ಮತ್ತು ಅಧಿಕಾರಿಗಳಿಗೆ ಈ ಅಂಕಗಳೇ ಬಡ್ತಿಗಳಿಗೆ ಮಾನದಂಡವಾಗಿರುತ್ತವೆ. (ಕಾರ್ಪೋರೇಟ್ ಟಿಕೆಟಿಂಗ್ ಟೈಮ್‍ಲೈನ್ ಟಾರ್ಗೆಟ್ಸ್ ರೀತಿ)

5. ಕನಿಷ್ಟ ಹಾಗೂ ನಿಗದಿತ ಅಂಕಗಳನ್ನು ಉತ್ತಮ ಕಾರ್ಯರೀತಿಯಿಂದ ಪಡೆಯತಕ್ಕದ್ದು, ತಪ್ಪಿದಲ್ಲಿ ಶಿಸ್ತು ಕ್ರಮಗಳೊಂದಿಗೆ ವೇತನದಲ್ಲಿ ಕಡಿತ ಸಹಾ ಮಾಡಲಾಗುತ್ತದೆ.

uppendra 4

6. ಕಡ್ಡಾಯವಾಗಿ ಪ್ರತಿ ಸರ್ಕಾರಿ ನೌಕರರು ಪೂರ್ಣ ಹೆಸರು, ಹುದ್ದೆ, ಇಲಾಖೆಯ ಬ್ಯಾಡ್ಜ್‍ಗಳನ್ನು ಮತ್ತು ಸಚಿವಾಲಯಗಳ ಅನುಸಾರ ಏಕರೂಪದ ಬಣ್ಣದ ಸಮವಸ್ತ್ರವನ್ನು ಧರಿಸಿರುತ್ತಾರೆ. ಪ್ರಜೆಗಳು ಆಯಾ ಸರ್ಕಾರಿ ಇಲಾಖೆಗಳ ನೌಕರರನ್ನು ಗುರುತಿಸಲು ಈ ಪ್ರಕ್ರಿಯೆಯು ನೆರವಾಗುತ್ತದೆ.

7. ಎಲ್ಲಾ ಸರ್ಕಾರಿ ಕಛೇರಿಗಳು ಹಾಗೂ ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ (ರಿಜಿಸ್ಟರ್), ವೈಫೈ, ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಆಳವಡಿಸಲಾಗುತ್ತದೆ ಮತ್ತು ಸಾರ್ವಜನಿಕರಿಗೆ ಪ್ರದೇಶಗಳಿಗೆ ಅನುಸಾರವಾಗಿ ವೀಕ್ಷಣಾ ಸೌಲಭ್ಯ ಕಲ್ಪಿಸಲಾಗುವುದು.

8. ವಿಧಾನಸೌಧದಲ್ಲಿ ನಡೆಯುವಂತಹ ಪ್ರತಿಯೊಂದು ಚಟುವಟಿಕೆಗಳು, ಯೋಜನೆಗಳು, ಕಾಮಗಾರಿಗಳು, ಚರ್ಚೆಗಳು ಹಾಗೂ ಅಧಿವೇಶನಗಳು ಅಧಿಕೃತ ದಾಖಲೆ, ಪುರಾವೆಗಳು ಹಾಗೂ ದೃಶ್ಯ ಮಾಧ್ಯಮಗಳ ಸಾಕ್ಷಿ & ದಾಖಲೆಗಳೊಂದಿಗೆ ದೊಡ್ಡ ಪರದೆಯ ಮೇಲೆ ಬಿತ್ತರಿಸಿ ಅದರ ಆಧಾರದ ಮೇಲೆಯೇ ಚರ್ಚೆ ನಡೆಸಬೇಕು.

9. ಎಲ್ಲಾ ಮಂತ್ರಿಗಳು, ಶಾಸಕರು, ಕಾರ್ಪೊರೇಟರ್‍ಗಳು, ತಾಲೂಕು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು ಯೋಜನೆಗಳ ಅಧಿಕೃತ ದಾಖಲೆ-ಪುರಾವೆಗಳೊಂದಿಗೆ ದೃಶ್ಯ ಮಾಧ್ಯಮಗಳ ಮುಖಾಂತರ ನೇರಪ್ರಸಾರದೊಂದಿಗೆ ಅಧಿವೇಶನದಲ್ಲಿ ಭಾಗವಹಿಸಬೇಕು. ಹಾಗೂ ಈ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ನೇರ ಪ್ರಸಾರದಲ್ಲಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಾ ಪ್ರಜಾ ಪ್ರಭುಗಳು ವೀಕ್ಷಿಸುವಂತೆ ಬಿತ್ತರಿಸಬೇಕು ಹಾಗೂ ಸದನದ ಪ್ರಕ್ರಿಯೆಗಳಲ್ಲಿ ಪ್ರಜೆಗಳು ದೂರವಾಣಿ ಮುಖಾಂತರ ನೇರವಾಗಿ ಚರ್ಚೆಯಲ್ಲಿ ಭಾಗವಹಿಸಬಹುದು.

10. ಪ್ರತಿಯೊಂದು ಸರ್ಕಾರಿ ಯೋಜನೆಗಳು ಮತ್ತು ಅದರ ಪ್ರತಿಯೊಂದು ಟೆಂಡರ್ ಪ್ರಕ್ರಿಯೆಗಳ ಭಾಗವಹಿಸುವಿಕೆಯು ಸಂಪೂರ್ಣವಾಗಿ ಆನ್‍ಲೈನ್‍ನಲ್ಲೇ ಚರ್ಚೆ ಮತ್ತು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಅಧಿಕಾರಿಗಳು ಮತ್ತು ಟೆಂಡರ್ ಪಡೆದವರ ಮಧ್ಯೆ ವೈಯಕ್ತಿಕ ಸಂಪರ್ಕಗಳನ್ನು ನಿರ್ಬಂಧಿಸಲಾಗುವುದು ಹಾಗೂ ಟೆಂಡರ್ ಪ್ರಕ್ರಿಯೆಗಳ ಪ್ರತಿ ಹಂತಗಳ ನೇರ ಪ್ರಸಾರವನ್ನು ಪಾರದರ್ಶಕವಾಗಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ಅಂತರ್ಜಾಲದ ಮುಖಾಂತರ ಎಲ್ಲರಿಗೂ ಬಹಿರಂಗ ವೀಕ್ಷಣೆಗೆ ಅವಕಾಶವಿರುತ್ತದೆ.

uppendra 1

11. ಯಾವುದೇ ಕಂಟ್ರಾಕ್ಟರ್‍ಗಳಿಗೆ ಕೊಡಲಾಗುವ ಯೋಜನೆಗಳ ಖರ್ಚು- ವೆಚ್ಚಗಳನ್ನು ಅಧಿಕೃತ ದೃಶ್ಯ ದಾಖಲೆಗಳ(ಬಿಲ್) ಮತ್ತು ಹಾಜರಾತಿ ವಿವರಣೆಗಳ ಆಧಾರದ ಮೇಲೆಯೇ ಕೊಡಲಾಗುವುದು. ಪ್ರತಿಯೊಬ್ಬ ಕಾರ್ಮಿಕರ ಹಾಜರಾತಿ ದಾಖಲೆಗಳ(ಬಯೋಮೆಟ್ರಿಕ್, ಸಿಸಿ ಟಿವಿ ಕ್ಯಾಮೆರಾ, ಆರ್.ಎಫ್ ಐಡಿ) ಮೂಲಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಬಹಿರಂಗಪಡಿಸತಕ್ಕದ್ದು. ಯೊಜನೆಗಳ ಪಾವತಿ ಹಣಕ್ಕಾಗಿ ಸರ್ಕಾರದ ಯಾವುದೇ ಅಧಿಕಾರಿಗಳನ್ನು ನೇರವಾಗಿ ಭೇಟಿ ಮಾಡುವ ಅವಶ್ಯಕತೆ ಇರುವುದಿಲ್ಲ.

12. ಪ್ರತಿಯೊಂದು ಸರ್ಕಾರಿ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಮಾಡುವ ಅಧಿಕಾರಿಗಳು, ಕಂಟ್ರಾಕ್ಟರ್‍ಗಳು ಅದರ ಖರ್ಚು-ವೆಚ್ಚ, ಕಾಲಾವಧಿ ಹಾಗೂ ಹಂತ ಹಂತವಾದ ಬೆಳವಣಿಗೆಗಳ ದಾಖಲೆಗಳೊಂದಿಗೆ ಪ್ರತಿ ಹಂತಗಳ ನೇರ ಪ್ರಸಾರವನ್ನು ಪಾರದರ್ಶಕವಾಗಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ಅಂತರ್ಜಾಲದ ಮುಖಾಂತರ ಎಲ್ಲರಿಗೂ ಬಹಿರಂಗ ವೀಕ್ಷಣೆಗೆ ಅವಕಾಶವಿರುತ್ತದೆ.

13. ಕಡ್ಡಾಯವಾಗಿ ಎಲ್ಲಾ ಜನ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಅವರವರ ದೈನಂದಿನ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಮುಂಗಡವಾಗಿ ಅವರವರ ಸಾಮಾಜಿಕ ಜಾಲತಾಣಗಳಲ್ಲಿ, ಅವರವರ ಕ್ಷೇತ್ರದ ಮೊಬೈಲ್ ಅಪ್ಲಿಕೇಶನ್‍ಗಳಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು.

14. ಪ್ರಜೆಗಳು ಹಾಗೂ ಚುನಾಯಿತ ಸದಸ್ಯರ, ಸರ್ಕಾರಿ ಅಧಿಕಾರಿಗಳ ನಡುವಿನ ನೇರ ಸಂವಾದಗಳು ತಿಂಗಳಿಗೊಮ್ಮೆ ಅವರವರ ಕ್ಷೇತ್ರಗಳಲ್ಲಿ ಟಿವಿ ಚಾನಲ್‍ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ದೃಶ್ಯ ದಾಖಲೆಗಳೊಂದಿಗೆ ಪ್ರಸಾರಗೊಳ್ಳುತ್ತವೆ.

15. ನಿರಂತರವಾದ ನಿಗ್ರಹಣೆ ಮತ್ತು ಅನಿರೀಕ್ಷಿತ ದಾಳಿಗಳನ್ನು ಕಾಲಕಾಲಕ್ಕೆ ಸಂಬಂಧಿಸಿದ ಸಚಿವರು, ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ನಡೆಸುತ್ತಿರುತ್ತಾರೆ, ಈ ಪ್ರಕ್ರಿಯೆಗಳು ವಿಡಿಯೋ ರೆಕಾರ್ಡಿಂಗ್ ಆಗುತ್ತದೆ ಹಾಗೂ ಪ್ರಜೆಗಳಿಗೆ ನೇರ ಪ್ರಸಾರದ ವ್ಯವಸ್ಥೆ ಇರುತ್ತದೆ.

CNG UPPI 12

16. ಆಡಳಿತ ಸರ್ಕಾರವು ಯಾವುದೇ ಸರ್ಕಾರೀ ವರ್ಗಾವಣೆಗಳನ್ನು ಮಾಡುವಾಗ ಸರಿಯಾದ ಕಾರಣ, ದಾಖಲೆಗಳು ಮತ್ತು ಸಾಕ್ಷಿಗಳನ್ನು ಕೊಟ್ಟು ನೇರ ಪ್ರಸಾರದೊಂದಿಗೆ ವರ್ಗಾವಣೆಗಳನ್ನು ಮಾಡಬೇಕು.

17. ಎಲ್ಲಾ ಸರ್ಕಾರೀ ಇಲಾಖೆಗಳ ಸಂದರ್ಶನಗಳು ಹಾಗೂ ಆಯ್ಕೆಗಳ ಪ್ರಕ್ರಿಯೆಗಳನ್ನು ನೇರ ಪ್ರಸಾರದೊಂದಿಗೆ ಪ್ರಜೆಗಳಿಗೆ ತೆರೆದಿಡಲಾಗುವುದು.

18. ಎಲ್ಲಾ ಸರ್ಕಾರೀ ತೆರಿಗೆ ಸಂಗ್ರಹಗಳು ಮತ್ತು ಆದಾಯಗಳು ದಾಖಲೆ ಸಹಿತವಾಗಿ ಪ್ರದೇಶಗಳಿಗೆ ಅನುಸಾರವಾಗಿ ತಿಂಗಳಿಗೊಮ್ಮೆ ಸಾರ್ವಜನಿಕರಿಗೆ ತೆರೆದಿಡಲಾಗುವುದು.

19. ಚುನಾಯಿತ ಪ್ರತಿನಿಧಿಗಳಿಗೆ, ಸರ್ಕಾರಿ ಅಧಿಕಾರಿಗಳಿಗೆ ನೀಡುವ ವೇತನಗಳು, ಸೌಲಭ್ಯಗಳು ಮತ್ತು ಎಲ್ಲಾ ಸರ್ಕಾರಿ ವಸತಿ, ಪ್ರಯಾಣ, ವೈದ್ಯಕೀಯ ಮತ್ತು ಎಲ್ಲಾ ಇತರ ಭತ್ಯೆ, ವೆಚ್ಚ ಹಾಗೂ ಪ್ರಯೋಜನಗಳು ಸರಿಯಾದ ಕಾರಣ ಮತ್ತು ದಾಖಲೆಗಳೊಂದಿಗೆ ಸಾರ್ವಜನಿಕರಿಗೆ ಜಾಲತಾಣಗಳಲ್ಲಿ ತೆರೆದಿಟ್ಟಿದ್ದರೆ ಮಾತ್ರ ದೊರೆಯುತ್ತದೆ.

20. ಪ್ರಜೆಗಳು ಗ್ಯಾಸ್ ಸಬ್ಸಿಡಿ ಬಿಟ್ಟು ಕೊಡುವಂತೆ ನಿವೃತ್ತರಾಗಿರುವ ಚುನಾಯಿತ ಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳು ತಮಗೆ ದೊರೆಯುವ ಪಿಂಚಣಿಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಬಹುದು.

UPPI 3

21. ಸ್ವಯಂಪ್ರೇರಿತರಾಗಿ ಬಿಟ್ಟುಕೊಡಲಾದ ಪಿಂಚಣಿಗಳಿಂದ ಸಂಗ್ರಹಗೊಳ್ಳುವ ಹಣವನ್ನು ವೃದ್ದಾಶ್ರಮಗಳು ಹಾಗೂ ವಸತಿ ರಹಿತರ ಅಭಿವೃಧ್ಧಿಗಳಿಗಾಗಿ ಬಳಸಲಾಗುವುದು.

22. ಎಲ್ಲಾ ಸರ್ಕಾರಿ ಯೋಜನೆಗಳು ಸಂಪೂರ್ಣಗೊಂಡು ಸಂಬಂಧಪಟ್ಟ ಅಧಿಕಾರಿಗಳ ಪರೀಕ್ಷೆ-ಅನುಮತಿ ನಂತರ ಸಾರ್ವಜನಿಕರ ಬಳಕೆಗೆ ನೇರವಾಗಿ ತೆರೆದಿಡಲಾಗುವುದು, ಯಾವುದೇ ರೀತಿಯ ಲೋಕಾರ್ಪಣಾ ಸಮಾರಂಭ, ಸಂಭ್ರಮ, ಉದ್ಗಾಟನೆಗಳನ್ನು ನಡೆಸುವುದು ಹಾಗೂ ಜನಪ್ರತಿನಿಧಿಗಳು/ ಅಧಿಕಾರಿಗಳು ಭಾಗವಹಿಸುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗುತ್ತದೆ.

23. ಕರ್ನಾಟಕ ಶಾಸಕಾಂಗ ವೇತನಗಳು: “ಪಿಂಚಣಿ ಮತ್ತು ಭತ್ಯೆ ಆಕ್ಟ್ 1952” ಅನ್ನು ಸರಳಗೊಳಿಸುವಂತೆ ಕಾನೂನು ತಿದ್ದುಪಡಿ ಮಾಡಲಾಗುವುದು.

24. ಈ ಮೇಲ್ಕಂಡ ಅಂಶಗಳನ್ನು ಜಾರಿಗೆ ತರಲು ಬೇಕಾಗುವಂತಹ ಅವಶ್ಯಕ ಕಾನೂನು-ತಿದ್ದುಪಡಿಗಳನ್ನು ಮಾಡಲಾಗುವುದು.

ಪಕ್ಷದ ಪ್ರಣಾಳಿಕೆ ಕುರಿತು ಸಾರ್ವಜನಿಕರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ನೀಡಲಾಗಿದ್ದು, ಕೆಲವೇ ದಿನಗಳಲ್ಲಿ ಪಕ್ಷದ ಅಂತಿಮ ಹಾಗೂ ಅಧಿಕೃತ ಪ್ರಣಾಳಿಕೆಯ ಪೂರ್ಣ ಭಾಗವನ್ನು ಬಿಡುಗಡೆಗೊಳಿಸುವುದಾಗಿ ಉಪೇಂದ್ರ ತಿಳಿಸಿದ್ದಾರೆ.

kpjp 1

kpjp 2

kpjp 3

kpjp 4

kpjp 5

kpjp 6

kpjp 7

kpjp 8

UPPI 1

uppendra 9

uppendra 7

uppendra 5

uppendra 3

UPPI 4

uppi 3

TAGGED:bengaluruKPJPManifestopartyPublic TVupendraಉಪೇಂದ್ರಕೆಪಿಜೆಪಿಪಕ್ಷಪಬ್ಲಿಕ್ ಟಿವಿಪ್ರಣಾಳಿಕೆಬೆಂಗಳೂರು
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories

You Might Also Like

Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
15 minutes ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
41 minutes ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
56 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
1 hour ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
1 hour ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?