Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

KPSC Scam| ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ, ಮುಖ್ಯ ಪರೀಕ್ಷೆಗೆ 1 ಕೋಟಿ: ಅಶೋಕ್‌

Public TV
Last updated: March 4, 2025 8:35 pm
Public TV
Share
3 Min Read
R Ashok
SHARE

– ಓಎಂಆರ್‌ ಶೀಟ್‌ನಲ್ಲಿ ನಡೆಯುತ್ತಿರುವ ಅಕ್ರಮ, ಕನ್ನಡರಿಗೆ ಅನ್ಯಾಯ

ಬೆಂಗಳೂರು:  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಹೇಳಿದರು.

ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ (KPSC Scam) ಕುರಿತು ಮಾತನಾಡಿದ ಅವರು, ಕೆಪಿಎಸ್‌ಸಿಯಲ್ಲಿ 14 ಸದಸ್ಯರಿದ್ದು, ಒಬ್ಬರಿಗೆ ಎರಡೂವರೆ ಲಕ್ಷ ರೂ. ವೇತನವಿದೆ. ಉಳಿದ ಸೌಲಭ್ಯಗಳು ಸೇರಿ 4 ಲಕ್ಷ ರೂ. ಆಗುತ್ತದೆ. ಕರ್ನಾಟಕದಲ್ಲಿ ಆರೂವರೆ ಕೋಟಿ ಜನರಿದ್ದಾರೆ. 20 ಕೋಟಿ ಜನರಿರುವ ಉತ್ತರ ಪ್ರದೇಶದ ಆಯೋಗದಲ್ಲಿ 8 ಸದಸ್ಯರಿದ್ದಾರೆ. ಇದರಲ್ಲೂ ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ. ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ಹಾಗೂ ಸಂದರ್ಶನದ ಮೂಲಕ 40 ಲಕ್ಷ ರೂ. ನಿಗದಿ ಮಾಡಲಾಗಿದೆ. ಈ ರೀತಿ ರೇಟ್‌ ಕಾರ್ಟ್‌ ಫಿಕ್ಸ್‌ ಮಾಡಲಾಗಿದೆ. ಎಸಿಗೆ 2 ಕೋಟಿ ರೂ., ಡಿವೈಎಸ್‌ಪಿಗೆ 2 ಕೋಟಿ ರೂ., ವಾಣಿಜ್ಯ ತೆರಿಗೆ 1.50 ಕೋಟಿ ರೂ., ಪಂಚಾಯತ್‌ ಅಧಿಕಾರಿಗೆ ಒಂದೂವರೆ ಕೋಟಿ ರೂ. ನಿಗದಿ ಮಾಡಲಾಗಿದೆ ಆರೋಪಿಸಿದರು. ಇದನ್ನೂ ಓದಿ: ಜಗತ್ತಿನಲ್ಲಿ ಅಸಲಿ ವಾಣಿಜ್ಯ ಯುದ್ಧ ಆರಂಭ – ಅಮೆರಿಕ, ಚೀನಾ ನಡುವೆ ಸುಂಕ ಕದನ

 

ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಜ. 2 ರಂದೇ ಪೊಲೀಸರೇ ದೂರು ದಾಖಲಿಸಿದ್ದಾರೆ. ಗಾಂಧಿನಗರದ ಸಜ್ಜನ್‌ ಲಾಡ್ಜ್‌ನಲ್ಲಿ ಒಬ್ಬ ವ್ಯಕ್ತಿ ಕೊಠಡಿ ಮಾಡಿಕೊಂಡು, ಸ್ಪರ್ಧಾತ್ಮಕ ಪರೀಕ್ಷೆ ಪಾಸು ಮಾಡಲು ಪಿತೂರಿ ಮಾಡಿ ಹಣ ಸಂಪಾದಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೇ ರೀತಿ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಇಲ್ಲಿ ಕೂಡ ಮಧ್ಯವರ್ತಿ ಮೂಲಕ ಪರೀಕ್ಷೆಯಲ್ಲಿ ಪಾಸು ಮಾಡಿಸಲು ಹಣ ಸಂಪಾದಿಸುತ್ತಿದ್ದಾನೆ ಎಂದು ಉಲ್ಲೇಖಿಸಲಾಗಿದೆ. ಆ ವ್ಯಕ್ತಿಗೆ ಅಧಿಕಾರಿಗಳ ಪರಿಚಯವಿದ್ದು, ಹುದ್ದೆ ಕೊಡಿಸುವುದಾಗಿ ಹೇಳಿ ನಂಬಿಸುತ್ತಿದ್ದ ಎಂದು ದೂರಿನಲ್ಲಿ ಬರೆಯಲಾಗಿದೆ ಎಂದರು.

ಓಎಂಆರ್‌ ಶೀಟ್‌ನಲ್ಲಿ 16 ಅಥವಾ 10 ಪ್ರಶ್ನೆಗಳಿಗೆ ಮಾತ್ರ ಟಿಕ್‌ ಮಾಡು ಎಂದು ಮಧ್ಯವರ್ತಿ ಹೇಳುತ್ತಾನೆ. ಅದರಂತೆಯೇ ಅಭ್ಯರ್ಥಿ ಮಾಡುತ್ತಾನೆ. ಓಎಂಆರ್‌ ಶೀಟ್‌ ಹೋಗುವ ಎರಡು ಕೊಠಡಿಗಳಲ್ಲಿ ಸಿಸಿಟಿವಿ ಇರುವುದಿಲ್ಲ. ಅಲ್ಲಿಯೇ ಉಳಿದ ಪ್ರಶ್ನೆಗಳಿಗೆ ಉತ್ತರವನ್ನು ಟಿಕ್‌ ಮಾಡಲಾಗುತ್ತದೆ. ಇದರಲ್ಲಿ ಲೋಕಸೇವಾ ಆಯೋಗದ ಅಧಿಕಾರಿಗಳು ಕೂಡ ಶಾಮೀಲಾಗಿರುತ್ತಾರೆ ಎಂದು ದೂರಿದರು.

ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಈ ಕುರಿತು ಪರೀಕ್ಷೆ ನಡೆಸಲಾಗಿದೆ. ಅಭ್ಯರ್ಥಿ ಮತ್ತು ಮಧ್ಯವರ್ತಿ ಬಳಸಿರುವ ಪೆನ್‌ಗಳಲ್ಲಿ ವ್ಯತ್ಯಾಸ ಇರುವುದರ ಬಗ್ಗೆ ಪತ್ತೆ ಮಾಡಲಾಗಿದೆ. ಲೋಕಸೇವಾ ಆಯೋಗದ ಅಧಿಕಾರಿ-ನೌಕರರ ಸಹಾಯವಿಲ್ಲದೆ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ವಿಧಿ ವಿಜ್ಞಾನ ವರದಿಯಲ್ಲಿ ತಿಳಿಸಲಾಗಿದೆ. ಇದನ್ನು ಸರ್ಕಾರವೇ ಒಪ್ಪಿಕೊಂಡಿದೆ ಎಂದರು.

 

384 ಗ್ರೂಪ್‌ ಎ ಮತ್ತು ಬಿ ಹುದ್ದೆಗಳಿಗೆ ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ ಇಂಗ್ಲಿಷ್‌-ಕನ್ನಡ ಭಾಷಾಂತರದಲ್ಲಿ 59 ಪ್ರಶ್ನೆಗಳಲ್ಲಿ ತಪ್ಪುಗಳಾಗಿವೆ. ಲೋಕಸೇವಾ ಆಯೋಗದ ಕಳ್ಳರು ಮೊದಲಿಗೆ ಇಂಗ್ಲಿಷ್‌ನಲ್ಲಿ ಬರೆದು, ನಂತರ ಕನ್ನಡಕ್ಕೆ ಭಾಷಾಂತರ ಮಾಡಿದ್ದಾರೆ. ಮೊದಲು ಕನ್ನಡದಲ್ಲೇ ಪ್ರಶ್ನೆ ತಯಾರಿಸಬೇಕೆಂಬ ನಿಯಮವೇ ಇದೆ. ಇದಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah ಟ್ವೀಟ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದರು. ಬಳಿಕ ಐಎಎಸ್‌ ಗಂಗಾಧರ್‌ ಈ ಕುರಿತು ಟ್ವೀಟ್‌ ಮಾಡಿದ್ದು, ಇದನ್ನು ಎಂಜಾಯ್‌ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅಪಮಾನ. ಕನ್ನಡಕ್ಕೆ ದ್ರೋಹ ಮಾಡಿದ ಈ ಅಧಿಕಾರಿಯ ನಾಲಿಗೆ ಸೀಳಿ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪರೀಕ್ಷೆ ನಡೆಸಲು 15 ಕೋಟಿ ರೂ. ನೀಡಲಾಗಿದೆ. ಮರು ಪರೀಕ್ಷೆಗೆ ಮತ್ತೆ ಅಷ್ಟೇ ಹಣ ನೀಡಲಾಗಿದೆ. ಮರು ಪರೀಕ್ಷೆಯಲ್ಲಿ ಮತ್ತೆ 79 ತಪ್ಪುಗಳಾಗಿವೆ. ಈ ಪ್ರಶ್ನೆಪತ್ರಿಕೆಗಳಲ್ಲಿ ಕನ್ನಡವನ್ನು ಎರಡನೇ ದರ್ಜೆಯಾಗಿ ನೋಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು. ಅವರು ವ್ಯಾಕರಣದ ಬಗ್ಗೆ ಮಾತನಾಡುತ್ತಾರೆ. ಸುಮಾರು 2 ಲಕ್ಷ ಯುವಜನರು ನಿರುದ್ಯೋಗಿಗಳಾಗಿದ್ದು, ಪರೀಕ್ಷೆಗಾಗಿ ಓದುತ್ತಿದ್ದಾರೆ. ಅವರ ಭಾವನೆಗಳನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದರು.

ಪರೀಕ್ಷೆಯಲ್ಲಿ 30 ಕೋಟಿ ರೂ. ಹಣ ಹಾಳು ಮಾಡಿದ ಅಧಿಕಾರಿಯನ್ನು ಅಮಾನತು ಮಾಡಬೇಕು. ಮರು ಪರೀಕ್ಷೆ ನಡೆಸಬೇಕು. ಅಭ್ಯರ್ಥಿಗಳ ವಯೋಮಿತಿಗೆ ವಿನಾಯಿತಿ ನೀಡಬೇಕು. ಅಕ್ರಮದ ವಿರುದ್ಧ ತನಿಖೆ ಮಾಡಬೇಕು. ಕನ್ನಡ ಅಪಮಾನ ಮಾಡಿದ ಅಧಿಕಾರಿಯ ವಿರುದ್ಧ ಕ್ರಮ ವಹಿಸಬೇಕು ಎಂದು ಆರ್‌.ಅಶೋಕ್ ಆಗ್ರಹಿಸಿದರು.

 

TAGGED:karnatakaKPSCKPSC Scamsiddaramaiahಆರ್ ಅಶೋಕ್ಕರ್ನಾಟಕಕೆಪಿಎಸ್‍ಸಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

B Saroja Devis last rites will be performed today near her mothers grave in her home Village Dasavara Channapatna
Districts

ಇಂದು ಹುಟ್ಟೂರಿನಲ್ಲಿ ತಾಯಿಯ ಸಮಾಧಿ ಬಳಿಯೇ ಸರೋಜಾದೇವಿ ಅಂತ್ಯಸಂಸ್ಕಾರ

Public TV
By Public TV
6 minutes ago
Techie Girish Case Shubh Shankar Supreme Court
Bengaluru City

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್‌ ಹತ್ಯೆ ಕೇಸ್‌ – ಶುಭಾಗೆ ಕ್ಷಮಾದಾನ ಅವಕಾಶ ನೀಡಿದ ಸುಪ್ರೀಂ

Public TV
By Public TV
17 minutes ago
Parashurama Statute Karkala
Districts

ಕಾರ್ಕಳ ಪರಶುರಾಮನ ಮೂರ್ತಿ ಕಂಚು, ಫೈಬರಿನದ್ದಲ್ಲ, ಹಿತ್ತಾಳೆಯದ್ದು – ಕೋರ್ಟ್‌ಗೆ ಪೊಲೀಸರ ಚಾರ್ಜ್‌ಶೀಟ್

Public TV
By Public TV
21 minutes ago
Electronic City Dog
Bengaluru City

ರಸ್ತೆಯಲ್ಲಿ ಮಲಗಿದ್ದ ಶ್ವಾನದ ಮೇಲೆ ಕಾರು ಹತ್ತಿಸಿದ ಚಾಲಕ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
57 minutes ago
LORRY
Districts

ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ – ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

Public TV
By Public TV
9 hours ago
04 BYTE
Bengaluru City

ಸರೋಜಮ್ಮ ತುಂಬಾ ನೆಮ್ಮಯಿಂದ ಹೋಗಿದ್ದಾರೆ – ತಮಿಳುನಟ ಕಾರ್ತಿ ಕಂಬನಿ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?