ಬೆಳಗಾವಿ: ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್(KPTCL) ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಮತ್ತೆ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಗರನಾಳ ಗ್ರಾಮದ ಈರಣ್ಣ ಬಂಕಾಪೂರ(26), ಶಿವಾನಂದ ಕುಮೋಜಿ(22) ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಆದಿಲ್ ಶಾ ತಾಸೇವಾಲೆ(23), ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಮಹಾಂತೇಶ ಹೊಸಾಪೂರ(22), ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಮಹಾಲಿಂಗ ಕುರಿ(30) ಹಾಗೂ ಸವದತ್ತಿ ತಾಲೂಕಿನ ಸುಂದರ ಬಾಳಿಕಾಯಿ(23)ಬಂಧಿತರು. ಇದನ್ನೂ ಓದಿ: ದುಬೈನಲ್ಲಿ ಮತ್ತೊಂದು ದುಬಾರಿ ವಿಲ್ಲಾ ಖರೀದಿಸಿದ ಅಂಬಾನಿ
- Advertisement 2
- Advertisement 3
ಬಂಧಿತ ಎಲ್ಲ ಆರೋಪಿಗಳು ಆಗಸ್ಟ್ 7 ರಂದು ಗೋಕಾಕ್ ನಗರದಲ್ಲಿ ನಡೆದಿದ್ದ ಜ್ಯೂನಿಯರ್ ಕೆಪಿಟಿಸಿಎಲ್ ಅಸಿಸ್ಟಂಟ್ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಮೈಕ್ರೋಚಿಪ್ ಡಿವೈಸ್ ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದ್ದರು. ಇವರೆಲ್ಲರಿಂದ ಇಲೆಕ್ಟ್ರಾನಿಕ್ ಡಿವೈಸ್ಗಳನ್ನು , ಮೈಕ್ರೋಚಿಪ್ಗಳನ್ನು ಮತ್ತು ಮೊಬೈಲ್ಗಳು ಸೇರಿದಂತೆ ಇತರ ದಾಖಲೆ ಮತ್ತು ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಅ. 20ರಂದೇ ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.