ಬೆಂಗಳೂರು: ಕೆ ಆರ್ ನಗರ ಅತ್ಯಾಚಾರ (KR Nagara Rape) ಸಂತ್ರಸ್ತೆ ಅಪಹರಣ (Kidnap) ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavani Revanna) ಹೈಕೋರ್ಟ್ (High Court) ಮೊರೆ ಹೋಗಿದ್ದಾರೆ.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು (Bail) ನೀಡುವಾಗ ವಿಧಿಸಿದ್ದ ಷರತ್ತು ಸಡಿಲಿಕೆ ಮಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಓಲಾದ 1 ಸಾವಿರ ಉದ್ಯೋಗಿಗಳು ಮನೆಗೆ
Advertisement
ಜಾಮೀನು ಮಂಜೂರು ಮಾಡುವ ವೇಳೆ, ಬೆಂಗಳೂರು ಬಿಟ್ಟು ಹೊರಗೆ ಹೋಗುವಂತೆ ಇಲ್ಲ. ಹೊರಗೆ ಹೋಗಬೇಕಾದರೆ ನ್ಯಾಯಾಲಯದ ಅನುಮತಿ ಪಡೆಯಬೇಕು ಷರತ್ತು ವಿಧಿಸಲಾಗಿದೆ.
Advertisement
ಕೋರ್ಟ್ ವಿಧಿಸಿದ ಈ ಷರತ್ತನ್ನು ಸಡಿಲಿಕೆ ಮಾಡುವಂತೆ ಮನವಿ ಮಾಡಿದ್ದು, ಹೈಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.