ಬೀದರ್: ದೇವಸ್ಥಾನದ ಹುಂಡಿ ಒಡೆದು ಲಕ್ಷಾಂತರ ಹಣ ದರೋಡೆ ಮಾಡಿದ ಘಟನೆ ನಗರದ ಅಂಬೇಡ್ಕರ್ ವೃತ್ತದ ಬಳಿ ಇರುವ ಕ್ರಾಂತಿ ಗಣೇಶ ದೇವಸ್ಥಾನದಲ್ಲಿ ಗುರುವಾರ ನಡೆದಿದೆ.
ಗುರುವಾರ ಬೆಳಗಿನ ಜಾವ ಐತಿಹಾಸಿಕ ಕ್ರಾಂತಿ ಗಣೇಶ ದೇವಸ್ಥಾನಕ್ಕೆ ನುಗ್ಗಿದ ಆರೋಪಿಗಳು ಗೇಟ್ ಬೀಗ ಮುರಿದು ಒಳ ನುಗ್ಗಿ ಹುಂಡಿಯನ್ನು ಒಡೆದು ಒಂದು ಲಕ್ಷ ರೂ.ಗೂ ಅಧಿಕ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ.
ನಗರದಲ್ಲಿನ ಐತಿಹಾಸಿಕಾ ದೇವಸ್ಥಾನವನ್ನೇ ಕನ್ನ ಹೊಡೆದಿರುವುದಕ್ಕೆ ಭಕ್ತರು ಆಘಾತಕ್ಕೊಳಗಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮಾರಿಕಟ್ಟೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ದರೋಡೆಕೋರರಿಗಾಗಿ ಬಲೆ ಬಿಸಿದ್ದಾರೆ.